Home / ಕವನ / ಕವಿತೆ / ಬಯಕೆಯುತ್ಸವ

ಬಯಕೆಯುತ್ಸವ

ಬಂತು ಶ್ರಾವಣ
ಎಂತು ಬದುಕುವಳೊ
ನಲ್ಲೆ ಜೀವ ಉಳಿಸಿ
ಎಂದು ಹಪಹಪಿಸಿ
ಮೈಗೆ ಮನಸ್ಸಿಗೆ ಯಾತನೆಯ ಬರಿಸಿ
ಬರಿದೆ ಕೊರಗದಿರು, ಸೊರಗದಿರು ನಲ್ಲ
ತುಂತುರು ಮಳೆಯ ತುಷಾರಕ್ಕೆ
ತಂಗಾಳಿಯ ಅಲೆ ಬಂದು ಸಿಲುಕಿದಾಗ
ನನ್ನ ಹೃದಯದ ಎಳೆ ಎಳೆದಂತಾಗಿ
ಯಕ್ಷ, ನಿನ್ನ ನೆನಪಿನ ಸುಳಿ ಏಳುವುದು
ಮೊದಲ ದಿವಸಗಳ, ರಾತ್ರಿಗಳ, ಕ್ಷಣಗಳ
ಅನುಭವದ ಸ್ವರ್ಗಸುಖ
ಎಂತು ಬರುವುದೊ ಮತ್ತೊಮ್ಮೆ
ಎಂದು ನನ್ನ ಜೀವವೂ ತುಡಿಯುವುದು
ಮಿಡಿಯುವುದು….
ಹಿಂದಿನಂತಲ್ಲ.
ಇಂದು ಬರಗಾಲವಿಲ್ಲ
ಈ ಸಲ ನಭವೇ ಕಳಚಿ ಬಿದ್ದಿದೆ
ಮೇಘ ಮಿತ್ರ ನಮ್ಮ ವಿರಹ ವಾರ್ತೆಯನು
ಹೊತ್ತು
ದುಃಖ ಭಾರವ ತಾಳಲಾರದೆ
ಬಾಂದಳದಿಂದ ಬಿದ್ದು
ಎಲ್ಲಡೆಯಲ್ಲು ನೆರೆಯನು ಬರಿಸಿದ್ದಾನೆ
ಹಸು-ಹಟ್ಟಿ ಬೆಳೆ-ಮಳೆ ಜನ ವಸತಿ-
ಗಳನೆಲ್ಲ ಹೊಚ್ಚಳಿಸಿ
ನಮ್ಮ ಮಂತ್ರಿಗಳನ್ನು ಮತ್ತೊಮ್ಮೆ
ವಿಮಾನ ವೀಕ್ಷಣಕೆ ಭರವಸೆಗಳ ಭಾಷಣಕೆ
ತೊಡಗಿಸಿದ್ದಾನೆ.
ಆದರೂ
ಪ್ರೇಮಿಗಳಿಬ್ಬರನು
ಜಾತಿ ನೀತಿಯ ಸಂಪತ್ತಿನ ಸವಾಲು ಹಾಕಿ
ಅಗಲಿಪುದೆ ಸುಖ ಈಜಗಕೆ
ಮೊನ್ನೆ…. ಕೇಳಿದೆಯಲ್ಲ
ಪ್ರಖರ ಪ್ರೇಮಿಗಳೀರ್ವರು
ಒಂದೆ ಉರುಳಿಗೆ ತಮ್ಮ ಕೊರಳನ್ನು ಬಿಗಿದು
ಅಪ್ಪಿಕೊಂಡೇ ಇಹದ ಜಂಜಡದಿಂದ
ರಿಕ್ತರಾದುದ, ಮುಕ್ತರಾದುದ… ಕೇಳಿದೆಯಲ್ಲ
ದೂರವಾಣಿಯಲಿ ನನ್ನ ಮನದಳಲುಗಳ
ಕೂರವಾಗಿಹ ಗತಿವಿಧಿಯ
ದೂರಿ ಹೇಳುವ ಮನಸಾದರೂ
ದೂರವಾಣಿಯ ತಾರೊತ್ತಿ
ದೂರುಗಳ ಸೆರೆಹಿಡಿದ
ಚೋರರ ಭಯವಾಗಿ
ನಿನ್ನ ರಾಜಪದವಿಯನೆ ಕಸಿದು
ದುರ್ಗತಿಗೆಸೆದು
ಪದಚ್ಯುತಿಗೊಳಿಸಿ ಅಳಿಸಿ
ನಿನ್ನವರನ್ನೆ ನಿನ್ನ ವಿರುದ್ಧ ಮಸೆದು
ಸತ್ತೆಯನೆ ಬದಲಿಸುವರೆಂಬ
ಅಳಕು ಬಂತು ಸುತ್ತಿ…
ಅಂಚೆ ವಿಧೇಯಕ
ಕಾಯಿದೆಯಾಗುವ ಮುನ್ನ
ನನ್ನ ದುಗುಡದ ವಿಸ್ತಾರವನ್ನ
ಎಕ್ಕಣಿಸಿ
ಆಷಾಡದ ಪ್ರಥಮ ದಿವಸಗಳ
ಸವಿನೆನಪು ರಸನಿಮಿಷಗಳ
ಲೆಕ್ಕಣಿಸಿ
ಕಳಿಸುವೆನು ನಿನಗೊಂದು
ಪ್ರಣಯ ಪತ್ರವ ಚಿನ್ನ
ಅದಕೆಂದೆ ಮಿಲನದ
ಬಯಕೆಯುತ್ಸವದಿ ಕೊಡೆ ಬಿಡಿಸಿ
ಬದುಕಿರುವೆ ಶ್ರಾವಣದಲು
ಜೀವ ಉಳಿಸಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...