Home / ಕವನ / ಕವಿತೆ / ಧೂರ್ತ

ಧೂರ್ತ

ಹೊಲೆಯ ನಿಕೃಷ್ಟ
ಮಣ್ಣಿನ ಮಗ
ಮಣ್ಣಿನ ವಾಸನೆಗೆ
ಹುಟ್ಟಿದ ತಪ್ಪಿಗೆ
ಹುಟ್ಟಿದ ಮಣ್ಣಿನ ನೆಲವನ್ನೆ
ದುರ್ಗಂಧಗೊಳಿಸಿ
ತನ್ನ ಧೂರ್ತ ಮಹತ್ವಾಕಾಂಕ್ಷೆಗೆ
ಉಸಿರು ಹೋಗುವ ಮೊದಲು
ಕೆಂಪು ದುರ್ಗದ ತುದಿಯನ್ನೇರಿ
ದೇಹ ಬಲ ಉಡುಗಿದ್ದರೂ
ನೀತಿಗೆ ಕ್ಷಯ ಹಿಡಿದು
ಅಧಿಕಾರದ ಮದದಿಂದ, ಪದದೊರೆತ
ತುಷ್ಟಿಯ ತೊರೆಯುಕ್ಕಿ ತಾನು
ಸೆರೆ ಕುಡಿದ ಕಪಿಯಾದರೂ
ಜನತೆಗೆ ಕೊಡುವ ಸಂದೇಶವೆಂದು
ಬಾಯಿಗೆ ಬಂದುದನೊದರಿ-
ಈ ಕೆಲವು ದಿನಗಳ ಹಿಂದೆ
ಗಾಂಧೀ ಸಮಾಧಿಯ ಎದುರು
ತಾನು ಮಾಡಿದ ಪಣದ, ವೃಣದ ಮುಖಕ್ಕೆ
ರಾಡಿ ಎರಚು-
ಸ್ವರ್ಗದಲ್ಲಿರುವ ಗಾಂಧಿ
ಜನನಾಯಕನೆಂದು
ಜನರಿಗೆ ಟೋಪಿ ಹಾಕುವ
ಈ ಡೋಂಗಿ ಮಾಡಿದ
ಅಗಸತನಕ್ಕೆ ತುಕ್ಕು ಹಿಡಿದು
ದರಿದ್ರಗೊಂಡ ಅಧಪತನಕ್ಕೆ
ನಾಚಿ, ಕಂಬನಿಯ ತೊರೆಯನ್ನು
ಸುರಿಸುತ್ತಿರಬಹುದು –
ಅದರಲ್ಲಿ ಕಂತಿ ಈ ಪಾಖಂಡಿ
ನಿರ್ನಾಮಗೊಂಡಾಗ
ಮಣ್ಣಿನಂರಾಳದಲಿ ಹೂತು ಹೋದಾಗ
ಆರೋಗ್ಯಕರ ಮೊಳಿಕೆಯೊಂದು
ನೆಲಬಿರಿದು ಹೊರಬರುವುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...