Home / ಕವನ / ಕವಿತೆ / ಸ್ವಗತ

ಸ್ವಗತ

ದ್ರೋಣ ಕೆನ್ನೆಗೆ ಕೈಹೊತ್ತು ಕುಳಿತ
ದೇವತೆಗಳು ಬಂದು ಕರೆದರೂ
ದೇವ ಸಭೆಯಲ್ಲಿ ತನ್ನ
ಕರ್ಮ ವಿಮರ್ಶೆಯಾಗಲಿದೆ ಎಂದು
ಹೊಳೆದರೂ, ಕಡಿಮೆಯಾಗಲಿಲ್ಲ
ಯೋಚನೆಗಳ ಏರಿಳಿತ
ಕೃಷ್ಣ ಬಂದಿದ್ದಾಗ ಮಣಿದು, ಕೈ ಮುಗಿದು
‘ನಿನ್ನ ಸಖರೈವರನು ನೋಯಿಸಿ’ನೆಂದು
ಮನದಲ್ಲಿ ಮಾಡಿದ್ದ ದೃಢ
ಉಪಕೃತಿಯಾಗಿ ಇಲ್ಲಿ ಬರಿಸಿದೆ
ಸ್ವರ್ಗ ಪದವಿಯ ಭಾಗ್ಯ ತರಿಸಿದೆ
ಒಂದಲ್ಲ, ಹಲವು ಸಲ
ನೊಂದು ಕುಲಜಾತಿಗಳ ಮಾತೆತ್ತಿ
ವೀರನನು ಒಡೆಯನ ಸ್ನೇಹಿಯನು ದಾನಶೂರನನು
ನೋಯಿಸಿದ, ಘಾಸಿಗೊಳಿಸಿದ ಛಲ,
ದಲಿತ, ಬಡಪಾಯಿ, ಕಲಿಸದೆಯೆ
ಕಲಿತ ವಿದ್ಯೆಯನ್ನು ಬೇಡಿ
ಕಸಿದುಕೊಂಡ ಖಳ, ನಾನು –
ಮಗನ ಮೋಹವೆ ಮುಂದು
ಪತಿಯವಸರ ಹಿಂದು, ಹಿಂದಾಗಿ
ಹೋರುವುದ ಮರೆತು
ತೊರೆದ ಹರಣಕೆ ಇಂದು ಮಾನ – ಸನ್ಮಾನ
ಇದು ಅವಮಾನ!
ಅರ್ಹನಲ್ಲ ನಾನಿದಕೆ
ನನ್ನ ಓಝತ್ವಕ್ಕಿಲ್ಲ ಸಾತ್ವಿಕೆ
ಭೇದಭಾವದ ಶಿಕ್ಷಣವ ಒರೆದಾತ
ತನ್ನ ಬಡತನದ ಸಿಟ್ಟಿನಲ್ಲಿ ಹುಟ್ಟಿದ
ಮಾನಹಾನಿಯ ಸೇಡಿಗೆ ಬಲಿಕೊಟ್ಟ
ಬಂಧುಗಳೆ ಬಡಿದಾಡಿ
ಒಂದು ಕುಲದ, ಒಂದು ಬಲದ
ಒಂದು ತತ್ವದ ಕೊಲೆಗೆ
ಹೇತುವಾದಾತ ಒಲ್ಲ
ಸಗ್ಗಸುಖ ನನಗೆ ಸಲ್ಲ.
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...