Home / ಕವನ / ಕವಿತೆ / ಮಂದಸ್ಮಿತ

ಮಂದಸ್ಮಿತ

ಗೊಂಚಲಲಿ ಹೂವೊಂದು ನಸುನಗುತಲಿತ್ತು
ಹಂತದಲ್ಲಿ ಸ್ಮಿತವನ್ನು ಇಡಲು ಬಯಸಿತ್ತು.

ಆ ಹೂವ ಹೊಂಬಣ್ಣ
ಆ ಹೂವ ಕಂಪನ್ನ –

ನೋಡಿತೈ ಬೆಡಗದರ ದೂರಿದ್ದ ಭ್ರಮರ,
ಕಾಡಿತ್ಯೆ ಬಳಿ ಬರಲು ಅತಿ ಆಶೆ ಅದರ.

ನಸುನಗುವ ವದನವನು
ತುಸು ಬಿರಿದ ಅಧರವನು

ನಯವಾದ ಗಲ್ಲವನು
ನಯಕಾಂತ ನಾಯನವನು

ರಸ ಭರಿತ ಸವಿಯನ್ನು
ಬೆಸಗೊಂಡ ಭಾವವನು

ಹೀರಳೆಳಸಿತು ತುಂಬಿ,
ಕ್ಷುದ್ರವಾಗಿಹ ಆಶೆದುಂಬಿ;

ಮೋಹಗೊಂಡಿತು ಬವರ
ಲೋಹ ಹೊಂದಿತು ಹೃದಯದರ

ಅತಿ ಮಧುರ, ಅತಿ ಕೋಮಲ ಹೂವ ಬಳಿ
ಅತಿ ಚಂಚಲ ತುಂಬಿಯಾಶೆಯ ಸುಳಿ…..

ಯವ್ವನದ ವೇಳೆಯದು,
ಜವ್ವನೆಯು ಆಶೆ ವಧು

ಝಂಕರನ ಇನಿದನಿಯು
ಇಂಪಾಗಿ ಕೇಳಿದುದು

ಪ್ರಕೃತಿಯ ನಿಜ ಬಯಕೆ
ಸುಕೃತಿಯ ಪ್ರಣಯದಕೆ

ಅನುಭವಿಸಬೇಕೆಂಬ
ತನುವಾಶೆಯುಂಟಾದುದು

ಅದರವನ್ನಾಶಿಸುವಗೆ
ಸಾಧರವನ್ನೀಯೆ ಮಿಗೆ –

ಪ್ರಣಯದುಯ್ಯಾಲೆಯಲಿ ತೂಗಿದುವು
ಕ್ಷಣ ಮಾತ್ರ, ಮರುಚಣವೆ ಮರುಗಿದುವು….

ಬಳಿಯಿದ್ದ ಹೂವೊಂದು ‘ಖುಳ್ಳೆಂ’ ದಿತು!
ಸುಳಿವನ್ನು ತಿಳಿದಾಗ ಹೂವು ನೊಂದಿತು

ರಸಹೀನ ಬಾಳೆಂದು ಬೇಸತ್ತು, ವಿ-
ರಸಗೊಂಡು, ಅದು ಅಲ್ಲೆ ಮುದುಡಿತು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...