Home / ಕವನ / ಕವಿತೆ / ಮುಂಬಯಿ ಬದುಕು

ಮುಂಬಯಿ ಬದುಕು

ಹಾಳು ಬೀದಿ ಬಸದಿಯಲಿ
ಗೋಳು ಕ್ಷಯ ಹಿಡಿದ
ಬಾಳಿಗೆ ದೊಂಗಾಲು ಬಿದ್ದು
ಕ್ರಿಮಿಗಳೋಪಾದಿ ಕೊಳೆವ
ನರ ನಾರಾಯಣರ ಬಾಳು
ಬಾಳೆ? ನೋಡಿರೈ ಅವರ

ಜೀವಂತ ಮರಣ
ಗುರಿರಹಿತ ಪಯಣ
ಉದಾಸೀನ ನಯನ, ನಿಶ್ಯಕ್ತ ಹರಣ
ಜೀವನದ ಅಲೆದಾಟ
ರೇಗಾಟ, ಕೂಗಾಟ, ನಿಜವನ್ನೆ ಸುಳಿವಾಟ

ಹರಕಲು ಗೇಹ
ಬಡಕಲು ದೇಹ
ನರಕ ಅದು, ಅಲ್ಲಿಲ್ಲ ನೇಹ!

ಹದಿಬದೆಯ ವ್ಯಾಪಾರ
ಅದರೊಳಗು ತಕರಾರ
ಕುಲ ಲಜ್ಜೆಗಳ ಮಾರಿ ತಾಯ್ತನದ ವ್ಯಭಿಚಾರ –
ಒಣದಾದ ತುಟಿಯಲ್ಲಿ
ಹಿರಿದಾದ ಮೇಲುನಗೆ
ತೆಳ್ಳನೆಯ ಉಸಿರು
ಬಡತನದ ಹೊಗೆ-ಧಗೆ
ಕಣ್ಣು ಕಾಂತಿ ಹೀನ
ಬಯಕೆಗಳ ಬಹುಬಗೆ –
ಗಿರಿಣಿಗಳ ಎಡೆಯಲ್ಲಿ
ಜಜ್ಜಿರುವ ನರರು
ಮೈರುಧಿರ ಬೆವರೆಂದು
ಸುರಿಸುವರು ಅವರು
ಅವರ ಸುಖ-ಅಳು
ಅದಕ್ಕೆಲ್ಲ ಹೆರರು –

ದಣಿದ ದೇಹಕೆ ಸುಖದ ಮೋಹ
ಉಸ್ಸೆನಲು ಓಡುವುದು ಗುಡಿಯೆಡೆಗೆ
ಬಹುದೂರ ಮನೆ
ಉದ್ದ ದಾರಿ ಅದಕಿಲ್ಲ ಕೊನೆ
ಮನದ ಕಿರುಕುಳ-ತಾಪ
ಮನೆಯಲ್ಲ ಅದು ಒಂದು ಕೂಪ

ಬರಿಹೊಟ್ಟೆ ಅರೆನಗ್ನ
ಅರೆಜೀವ ಕೂಸು
ನೂರು ಬಣ್ಣವ ಬಳಿಯೆ
ಕೈಲಿಲ್ಲ ಕಾಸು

ಕಂದಿ ಕಮರಿದ ಎಳೆ ಜೀವಗಳ
ಮೇಲೆ ನಾಡು ಕಟ್ಟಿಹದು ಕನಸು!
ವಯೋವೃದ್ದ ಹೆಗಲಲ್ಲಿ
ಬಡತನದ ಭಾರ
ನೆರೆಬಿದ್ದ ಹಣೆಯಲ್ಲಿ
ವಿವಶತೆಯ ಸಾರ
ನಿಡಿದುಸಿರ ಎಡೆಯಲ್ಲಿ
ಸಾವೆಷ್ಟು ದೂರ!
ಬರೆ ಎಳೆದ ಕಾಯ
ನರ-ನಾಡಿ ಗಾಯ
ತಿಕ್ಕಾಟ ಮನದಲ್ಲಿ
ಕದಡಿರುವ ಧ್ಯೇಯ
ಜಗವಲ್ಲ, ಇದು ಒಂದು
ವಿಧಿ ಬಗೆದ ಹೇಯ!

ಯೌವನಕೆ ಬೆಲೆಯಿಲ್ಲ
ಬರಿದೆ ಹೋಹುದು ತಡವರಿಸಿ
ಬವಣೆಯಲಿ ಬದುಕೆಲ್ಲ
ಬೆಳಕು-ಇದೆ ಸತ್ಯ-ಇದೆ
ಪುಲಿಯ ಬಳಿಯಲಿ ಹಸುವಂತೆ
ಶೌರ್‍ಯ ಸಹನೆಯ ಬಲವಿಲ್ಲ

ಬಲಹೀನ ಕೈಯಿಂದ
ಕಾತರದ ಕಣ್ಣಿಂದ
ಛಲಹೀನ ಒಲವನ್ನು
ಆತುರದ ಸೆಳವಿಂದ
ಬಯಸುತಿದೆ ಹಸುಗೂಸು
ದಯಾದಾನಿವರರಿಂದ…..

ಅರೆ! ದೂರಿದ್ದವರೆ,
ಬಳಿ ಬಂದು ನೋಡಿ
ನಿರ್ಜಿವ ನರರಿಂಗೆ
ಜೀವದಾನವ ಮಾಡಿ
ಉಳಿಸೋಣ ನಾಡನ್ನು
ನಾವೆಲ್ಲ ಕೂಡಿ…..!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...