Home / ಕವನ / ಕವಿತೆ / ಮುಂಬಯಿ ಬದುಕು

ಮುಂಬಯಿ ಬದುಕು

ಹಾಳು ಬೀದಿ ಬಸದಿಯಲಿ
ಗೋಳು ಕ್ಷಯ ಹಿಡಿದ
ಬಾಳಿಗೆ ದೊಂಗಾಲು ಬಿದ್ದು
ಕ್ರಿಮಿಗಳೋಪಾದಿ ಕೊಳೆವ
ನರ ನಾರಾಯಣರ ಬಾಳು
ಬಾಳೆ? ನೋಡಿರೈ ಅವರ

ಜೀವಂತ ಮರಣ
ಗುರಿರಹಿತ ಪಯಣ
ಉದಾಸೀನ ನಯನ, ನಿಶ್ಯಕ್ತ ಹರಣ
ಜೀವನದ ಅಲೆದಾಟ
ರೇಗಾಟ, ಕೂಗಾಟ, ನಿಜವನ್ನೆ ಸುಳಿವಾಟ

ಹರಕಲು ಗೇಹ
ಬಡಕಲು ದೇಹ
ನರಕ ಅದು, ಅಲ್ಲಿಲ್ಲ ನೇಹ!

ಹದಿಬದೆಯ ವ್ಯಾಪಾರ
ಅದರೊಳಗು ತಕರಾರ
ಕುಲ ಲಜ್ಜೆಗಳ ಮಾರಿ ತಾಯ್ತನದ ವ್ಯಭಿಚಾರ –
ಒಣದಾದ ತುಟಿಯಲ್ಲಿ
ಹಿರಿದಾದ ಮೇಲುನಗೆ
ತೆಳ್ಳನೆಯ ಉಸಿರು
ಬಡತನದ ಹೊಗೆ-ಧಗೆ
ಕಣ್ಣು ಕಾಂತಿ ಹೀನ
ಬಯಕೆಗಳ ಬಹುಬಗೆ –
ಗಿರಿಣಿಗಳ ಎಡೆಯಲ್ಲಿ
ಜಜ್ಜಿರುವ ನರರು
ಮೈರುಧಿರ ಬೆವರೆಂದು
ಸುರಿಸುವರು ಅವರು
ಅವರ ಸುಖ-ಅಳು
ಅದಕ್ಕೆಲ್ಲ ಹೆರರು –

ದಣಿದ ದೇಹಕೆ ಸುಖದ ಮೋಹ
ಉಸ್ಸೆನಲು ಓಡುವುದು ಗುಡಿಯೆಡೆಗೆ
ಬಹುದೂರ ಮನೆ
ಉದ್ದ ದಾರಿ ಅದಕಿಲ್ಲ ಕೊನೆ
ಮನದ ಕಿರುಕುಳ-ತಾಪ
ಮನೆಯಲ್ಲ ಅದು ಒಂದು ಕೂಪ

ಬರಿಹೊಟ್ಟೆ ಅರೆನಗ್ನ
ಅರೆಜೀವ ಕೂಸು
ನೂರು ಬಣ್ಣವ ಬಳಿಯೆ
ಕೈಲಿಲ್ಲ ಕಾಸು

ಕಂದಿ ಕಮರಿದ ಎಳೆ ಜೀವಗಳ
ಮೇಲೆ ನಾಡು ಕಟ್ಟಿಹದು ಕನಸು!
ವಯೋವೃದ್ದ ಹೆಗಲಲ್ಲಿ
ಬಡತನದ ಭಾರ
ನೆರೆಬಿದ್ದ ಹಣೆಯಲ್ಲಿ
ವಿವಶತೆಯ ಸಾರ
ನಿಡಿದುಸಿರ ಎಡೆಯಲ್ಲಿ
ಸಾವೆಷ್ಟು ದೂರ!
ಬರೆ ಎಳೆದ ಕಾಯ
ನರ-ನಾಡಿ ಗಾಯ
ತಿಕ್ಕಾಟ ಮನದಲ್ಲಿ
ಕದಡಿರುವ ಧ್ಯೇಯ
ಜಗವಲ್ಲ, ಇದು ಒಂದು
ವಿಧಿ ಬಗೆದ ಹೇಯ!

ಯೌವನಕೆ ಬೆಲೆಯಿಲ್ಲ
ಬರಿದೆ ಹೋಹುದು ತಡವರಿಸಿ
ಬವಣೆಯಲಿ ಬದುಕೆಲ್ಲ
ಬೆಳಕು-ಇದೆ ಸತ್ಯ-ಇದೆ
ಪುಲಿಯ ಬಳಿಯಲಿ ಹಸುವಂತೆ
ಶೌರ್‍ಯ ಸಹನೆಯ ಬಲವಿಲ್ಲ

ಬಲಹೀನ ಕೈಯಿಂದ
ಕಾತರದ ಕಣ್ಣಿಂದ
ಛಲಹೀನ ಒಲವನ್ನು
ಆತುರದ ಸೆಳವಿಂದ
ಬಯಸುತಿದೆ ಹಸುಗೂಸು
ದಯಾದಾನಿವರರಿಂದ…..

ಅರೆ! ದೂರಿದ್ದವರೆ,
ಬಳಿ ಬಂದು ನೋಡಿ
ನಿರ್ಜಿವ ನರರಿಂಗೆ
ಜೀವದಾನವ ಮಾಡಿ
ಉಳಿಸೋಣ ನಾಡನ್ನು
ನಾವೆಲ್ಲ ಕೂಡಿ…..!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...