Home / ಕವನ / ಕವಿತೆ / ಹಣತೆಯ ಕೊರಗು…..

ಹಣತೆಯ ಕೊರಗು…..

ಹಚ್ಚಿಟ್ಟ ಹಣತೆ ಆರಿ ಹೋಗುವುದು
ಗಾಳಿಯ ಸೋಂಕಿಗೆ
ಉಸಿರಿನ ಉಫ್‌ಗೆ
ನೀರೆಯರ ಸೀರೆಯಂಚಿನ ಸ್ಪರ್ಶಕೆ
ದಾರಿದೀಪವಾಗುವ ಹಮ್ಮನು
ಬಿಟ್ಟು ಬಯಲಾದಾಗ
ನಾನು ಉರಿದು ಬೂದಿಯಾಗುತ್ತೇನೆ
‘ಹಚ್ಚೇವು ಕನ್ನಡದ ದೀಪ’
ಎಂಬ ಹಾಡನ್ನು ಕೇಳುತ್ತ
ಕ್ಷಣದಷ್ಟು ತಮದ ಅಲೆಯನು
ಸರಿಸಿ ಬಾರಿದಿಸಿತು ಅಲೆಯನು
ನನ್ನ ಒಳಗಿನ ಉರಿ
ನನ್ನ ದುರ್ಗತಿಗೆ ಮೊರೆಯಿಡುತ್ತದೆ
ಅಲ್ಪ ಅಸ್ಮಿತೆಯ ಚಿತ್ವವನು
ಕಣ್ಣೆದುರು ತಂದಿಡುವಾಗ
ನೋವು ಭಯವಾಗುತ್ತದೆ.

ಅವನ ಮಧುರ ಮಿಲನದ
ಬಯಕೆ ಹೊತ್ತು ಉರಿದು
ಬೆಳಕ ತೋರುವ ಭ್ರಮೆ
ನಿರಸನವಾಗುತ್ತದೆ.
ನನ್ನ ಆರಿಹೋಗುವಿಕೆಯೆ
ಒಂದು ದುರಂತ!

ನಾನು ಆಶೆ ಉತ್ಸಾಹಗಳ ಪುಂಜ
ಪ್ರೇಮಿಗಳ ಮಿಲನದ
ಜ್ಞಾನದಾಹಗಳ ಸಂಕೇತ..
ಮನೆ-ಮನ ಬಾಗಿಲ ದಂಡೆಯಲಿ
ದೇಗುಲದ ದೇವರ ಅಂಗಳದಲಿ
ಉತ್ಸವದ ದೀಪಗಳ ಸಾಲಿನಲಿ
ಸೊಗಸಾಗಿ ಅಂದವಾಗಿ ಮಿಣುಕುತ್ತ
ಗುಂಪಿನ ಬೆಳಕಿನಲಿ ಪಯಣಿಗರ
ಪಥ ದರ್ಶನ ಮಾಡುತ್ತೇನೆಂಬ
ಹೆಮ್ಮೆಯ ಹೊತ್ತು ಇಂಬಿಟ್ಟು
ಹೊಸೆದ ಮನಸುಗಳ
ನಂಬಿಸಿ, ಹುರಿದುಂಬಿಸಿ
ಜೀವಂತವಾಗಿರುವಾಗ
ಎದುರಾಗುವ ಮಂಡೆಲರ ತೊಡಕು
ಕಂಪನ ಹುಚ್ಚಿಸಿ
ಆರುವ ಭಯವನ್ನೆ ಹುಟ್ಟಿಸುತ್ತದಲ್ಲ!
ಎಂದಿನವರೆಗೆ ನಿಮ್ಮ ಮನೆಯ ಬೆಳಗಲಿ?
ನಿಮ್ಮಾಶೆಗಳಿಗೆ ಬಲವಾಗಿ, ಫಲವಾಗಿ
ಎಷ್ಟು ಉರಿಯಲಿ….

ನಾನು ಪಮದಲ್ಲೊಂದು
ಮಿಣುಕುಹುಳ
ಕ್ಷಣಭಂಗುರ ನನ್ನ ಅಸ್ಮಿತೆ
ಆದರೆ ನಾನೊಂದು ಅನಲ ಕಣ
ಅನುಕೂಲ ಪವನ ಬಲದಿಂದ
ಆಕಾಶಕ್ಕೆ ಹಾರಿ, ಅಂಬರವನು ಸುಡಬಲ್ಲೆ
ಪ್ರಿಯೆಯ ಪ್ರೇಮ ಕತೆಗೆ
ನಾಂದಿಯಾಗಿಯೂ, ಮುಳುವಾಗಬಲ್ಲೆ
ಕಣ ಒಂದೆ ಸಾಕು
ಮನೆ ಸುಡಲು, ಮನ ಸುಡಲು

ಸುಂದರ ಕನಕತುಲ್ಯ
ಬೆಳಕಿನಿಂದ ನಾವೆಲ್ಲರ ಮನ
ಸೂರೆಗೊಂಡರೂ
ಭಯಂಕರ ಬೆಂಕಿಯ ಉಂಡೆ,
ಸುಡುವ ಕಾರ್ಯದ ನಾನು
ಯಾರಿಗೂ ದಾರಿದೀಪವಾಗಲಾರೆನು
ನಿಮ್ಮ ವಿಶ್ವಾಸಕ್ಕೆ ಪ್ರೇಮಕೆ
ಪಾತ್ರನಲ್ಲ……!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...