Home / ಕವನ / ಕವಿತೆ / ಹಣತೆಯ ಕೊರಗು…..

ಹಣತೆಯ ಕೊರಗು…..

ಹಚ್ಚಿಟ್ಟ ಹಣತೆ ಆರಿ ಹೋಗುವುದು
ಗಾಳಿಯ ಸೋಂಕಿಗೆ
ಉಸಿರಿನ ಉಫ್‌ಗೆ
ನೀರೆಯರ ಸೀರೆಯಂಚಿನ ಸ್ಪರ್ಶಕೆ
ದಾರಿದೀಪವಾಗುವ ಹಮ್ಮನು
ಬಿಟ್ಟು ಬಯಲಾದಾಗ
ನಾನು ಉರಿದು ಬೂದಿಯಾಗುತ್ತೇನೆ
‘ಹಚ್ಚೇವು ಕನ್ನಡದ ದೀಪ’
ಎಂಬ ಹಾಡನ್ನು ಕೇಳುತ್ತ
ಕ್ಷಣದಷ್ಟು ತಮದ ಅಲೆಯನು
ಸರಿಸಿ ಬಾರಿದಿಸಿತು ಅಲೆಯನು
ನನ್ನ ಒಳಗಿನ ಉರಿ
ನನ್ನ ದುರ್ಗತಿಗೆ ಮೊರೆಯಿಡುತ್ತದೆ
ಅಲ್ಪ ಅಸ್ಮಿತೆಯ ಚಿತ್ವವನು
ಕಣ್ಣೆದುರು ತಂದಿಡುವಾಗ
ನೋವು ಭಯವಾಗುತ್ತದೆ.

ಅವನ ಮಧುರ ಮಿಲನದ
ಬಯಕೆ ಹೊತ್ತು ಉರಿದು
ಬೆಳಕ ತೋರುವ ಭ್ರಮೆ
ನಿರಸನವಾಗುತ್ತದೆ.
ನನ್ನ ಆರಿಹೋಗುವಿಕೆಯೆ
ಒಂದು ದುರಂತ!

ನಾನು ಆಶೆ ಉತ್ಸಾಹಗಳ ಪುಂಜ
ಪ್ರೇಮಿಗಳ ಮಿಲನದ
ಜ್ಞಾನದಾಹಗಳ ಸಂಕೇತ..
ಮನೆ-ಮನ ಬಾಗಿಲ ದಂಡೆಯಲಿ
ದೇಗುಲದ ದೇವರ ಅಂಗಳದಲಿ
ಉತ್ಸವದ ದೀಪಗಳ ಸಾಲಿನಲಿ
ಸೊಗಸಾಗಿ ಅಂದವಾಗಿ ಮಿಣುಕುತ್ತ
ಗುಂಪಿನ ಬೆಳಕಿನಲಿ ಪಯಣಿಗರ
ಪಥ ದರ್ಶನ ಮಾಡುತ್ತೇನೆಂಬ
ಹೆಮ್ಮೆಯ ಹೊತ್ತು ಇಂಬಿಟ್ಟು
ಹೊಸೆದ ಮನಸುಗಳ
ನಂಬಿಸಿ, ಹುರಿದುಂಬಿಸಿ
ಜೀವಂತವಾಗಿರುವಾಗ
ಎದುರಾಗುವ ಮಂಡೆಲರ ತೊಡಕು
ಕಂಪನ ಹುಚ್ಚಿಸಿ
ಆರುವ ಭಯವನ್ನೆ ಹುಟ್ಟಿಸುತ್ತದಲ್ಲ!
ಎಂದಿನವರೆಗೆ ನಿಮ್ಮ ಮನೆಯ ಬೆಳಗಲಿ?
ನಿಮ್ಮಾಶೆಗಳಿಗೆ ಬಲವಾಗಿ, ಫಲವಾಗಿ
ಎಷ್ಟು ಉರಿಯಲಿ….

ನಾನು ಪಮದಲ್ಲೊಂದು
ಮಿಣುಕುಹುಳ
ಕ್ಷಣಭಂಗುರ ನನ್ನ ಅಸ್ಮಿತೆ
ಆದರೆ ನಾನೊಂದು ಅನಲ ಕಣ
ಅನುಕೂಲ ಪವನ ಬಲದಿಂದ
ಆಕಾಶಕ್ಕೆ ಹಾರಿ, ಅಂಬರವನು ಸುಡಬಲ್ಲೆ
ಪ್ರಿಯೆಯ ಪ್ರೇಮ ಕತೆಗೆ
ನಾಂದಿಯಾಗಿಯೂ, ಮುಳುವಾಗಬಲ್ಲೆ
ಕಣ ಒಂದೆ ಸಾಕು
ಮನೆ ಸುಡಲು, ಮನ ಸುಡಲು

ಸುಂದರ ಕನಕತುಲ್ಯ
ಬೆಳಕಿನಿಂದ ನಾವೆಲ್ಲರ ಮನ
ಸೂರೆಗೊಂಡರೂ
ಭಯಂಕರ ಬೆಂಕಿಯ ಉಂಡೆ,
ಸುಡುವ ಕಾರ್ಯದ ನಾನು
ಯಾರಿಗೂ ದಾರಿದೀಪವಾಗಲಾರೆನು
ನಿಮ್ಮ ವಿಶ್ವಾಸಕ್ಕೆ ಪ್ರೇಮಕೆ
ಪಾತ್ರನಲ್ಲ……!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...