Home / ಕವನ / ಕವಿತೆ / ಹಣತೆಯ ಕೊರಗು…..

ಹಣತೆಯ ಕೊರಗು…..

ಹಚ್ಚಿಟ್ಟ ಹಣತೆ ಆರಿ ಹೋಗುವುದು
ಗಾಳಿಯ ಸೋಂಕಿಗೆ
ಉಸಿರಿನ ಉಫ್‌ಗೆ
ನೀರೆಯರ ಸೀರೆಯಂಚಿನ ಸ್ಪರ್ಶಕೆ
ದಾರಿದೀಪವಾಗುವ ಹಮ್ಮನು
ಬಿಟ್ಟು ಬಯಲಾದಾಗ
ನಾನು ಉರಿದು ಬೂದಿಯಾಗುತ್ತೇನೆ
‘ಹಚ್ಚೇವು ಕನ್ನಡದ ದೀಪ’
ಎಂಬ ಹಾಡನ್ನು ಕೇಳುತ್ತ
ಕ್ಷಣದಷ್ಟು ತಮದ ಅಲೆಯನು
ಸರಿಸಿ ಬಾರಿದಿಸಿತು ಅಲೆಯನು
ನನ್ನ ಒಳಗಿನ ಉರಿ
ನನ್ನ ದುರ್ಗತಿಗೆ ಮೊರೆಯಿಡುತ್ತದೆ
ಅಲ್ಪ ಅಸ್ಮಿತೆಯ ಚಿತ್ವವನು
ಕಣ್ಣೆದುರು ತಂದಿಡುವಾಗ
ನೋವು ಭಯವಾಗುತ್ತದೆ.

ಅವನ ಮಧುರ ಮಿಲನದ
ಬಯಕೆ ಹೊತ್ತು ಉರಿದು
ಬೆಳಕ ತೋರುವ ಭ್ರಮೆ
ನಿರಸನವಾಗುತ್ತದೆ.
ನನ್ನ ಆರಿಹೋಗುವಿಕೆಯೆ
ಒಂದು ದುರಂತ!

ನಾನು ಆಶೆ ಉತ್ಸಾಹಗಳ ಪುಂಜ
ಪ್ರೇಮಿಗಳ ಮಿಲನದ
ಜ್ಞಾನದಾಹಗಳ ಸಂಕೇತ..
ಮನೆ-ಮನ ಬಾಗಿಲ ದಂಡೆಯಲಿ
ದೇಗುಲದ ದೇವರ ಅಂಗಳದಲಿ
ಉತ್ಸವದ ದೀಪಗಳ ಸಾಲಿನಲಿ
ಸೊಗಸಾಗಿ ಅಂದವಾಗಿ ಮಿಣುಕುತ್ತ
ಗುಂಪಿನ ಬೆಳಕಿನಲಿ ಪಯಣಿಗರ
ಪಥ ದರ್ಶನ ಮಾಡುತ್ತೇನೆಂಬ
ಹೆಮ್ಮೆಯ ಹೊತ್ತು ಇಂಬಿಟ್ಟು
ಹೊಸೆದ ಮನಸುಗಳ
ನಂಬಿಸಿ, ಹುರಿದುಂಬಿಸಿ
ಜೀವಂತವಾಗಿರುವಾಗ
ಎದುರಾಗುವ ಮಂಡೆಲರ ತೊಡಕು
ಕಂಪನ ಹುಚ್ಚಿಸಿ
ಆರುವ ಭಯವನ್ನೆ ಹುಟ್ಟಿಸುತ್ತದಲ್ಲ!
ಎಂದಿನವರೆಗೆ ನಿಮ್ಮ ಮನೆಯ ಬೆಳಗಲಿ?
ನಿಮ್ಮಾಶೆಗಳಿಗೆ ಬಲವಾಗಿ, ಫಲವಾಗಿ
ಎಷ್ಟು ಉರಿಯಲಿ….

ನಾನು ಪಮದಲ್ಲೊಂದು
ಮಿಣುಕುಹುಳ
ಕ್ಷಣಭಂಗುರ ನನ್ನ ಅಸ್ಮಿತೆ
ಆದರೆ ನಾನೊಂದು ಅನಲ ಕಣ
ಅನುಕೂಲ ಪವನ ಬಲದಿಂದ
ಆಕಾಶಕ್ಕೆ ಹಾರಿ, ಅಂಬರವನು ಸುಡಬಲ್ಲೆ
ಪ್ರಿಯೆಯ ಪ್ರೇಮ ಕತೆಗೆ
ನಾಂದಿಯಾಗಿಯೂ, ಮುಳುವಾಗಬಲ್ಲೆ
ಕಣ ಒಂದೆ ಸಾಕು
ಮನೆ ಸುಡಲು, ಮನ ಸುಡಲು

ಸುಂದರ ಕನಕತುಲ್ಯ
ಬೆಳಕಿನಿಂದ ನಾವೆಲ್ಲರ ಮನ
ಸೂರೆಗೊಂಡರೂ
ಭಯಂಕರ ಬೆಂಕಿಯ ಉಂಡೆ,
ಸುಡುವ ಕಾರ್ಯದ ನಾನು
ಯಾರಿಗೂ ದಾರಿದೀಪವಾಗಲಾರೆನು
ನಿಮ್ಮ ವಿಶ್ವಾಸಕ್ಕೆ ಪ್ರೇಮಕೆ
ಪಾತ್ರನಲ್ಲ……!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...