Home / ಕವನ / ಅನುವಾದ / ದೇವರಿಗೆ ಬೈದೆ

ದೇವರಿಗೆ ಬೈದೆ

ಒಂದು ದಿನ
ಸಿಟ್ಟಿನ ಭರದಲ್ಲಿ
ಪರಮೇಶ್ವರನಿಗೆ ನಾನು
ತಾಯಿ ಮೇಲೆ ಬೈದೆ
ಅವನುಲೋಕಾಭಿರಾಮವಾಗಿ
ಚಕ್ಕನೆ ನಕ್ಕ
ಪಕ್ಕದ ಮನೆಯ ಬೋರ
ಮುಖವನು ಬರಿದೆ ಕುಗ್ಗಿಸಿ
ಅಂಟು ಮೋರೆಯ ಗಂಟು ಹಾಕಿ
ಸವಾಲು ಮಾಡಿದ
‘ಯಾಕಯ್ಯ ನೀನು’ ಹೀಗೆ
ಆ ನಿರ್ಗುಣ, ನಿರಾಕಾರ
ಅನಾಥ ಜಗನ್ನಾಥನಿಗೆ
ಏನಾದರೂ ಅನ್ನುತ್ತಿ
ಶಬ್ದ ಜಾಲದಲಿ ಅವನ
‘ಧರ್ಮಫಣಿಯನ್ನು ಹಿಡಿಯುತ್ತಿ’
ಇನ್ನೊಮ್ಮೆ ಬೈದೆ ಬಿಗಿಯಾಗಿ
ವಿದ್ಯಾಪೀಠದ ಗೋಡೆ ಬಿರಿಯಿತು
ಮನುಷ್ಯ ಏಕೆ ಸಿಟ್ಟಾಗುತ್ತಾನೆ?
ಈ ವಿಷಯದ ಕುರಿತು ಅಲ್ಲಿ
ಶೋಧ ನಡೆದಿದೆ.
ಹೊಗೆಬತ್ತಿಯ ಧೂಮ ತುಂಬಿದ
ಹೊಟ್ಟೆಯಲ್ಲಿ
ಭಾವವಿಹ್ವಲ ಚರ್ಚೆ ನಡೆದಿದೆ
ನನ್ನ ಹುಟ್ಟು ದಿನದಂದು
ದೇವನಿಗೆ ಇನ್ನೊಮ್ಮೆ ಬೈದೆ
ಚಾಬೂಕಿನೇಟಿನಂತೆ
ಶಬ್ದದೇಟುಗಳ ಒಂದೇ ಸವನೆ
ಬಿಗಿದು ಹೇಳಿದೆ
‘ಪಾಪಿ ಮಗನೆ’ ಮುರುಕು ಭಾಕರಿಗಾಗಿ
ಸರಕು ಕಟ್ಟಿಗೆಯ ಮುರಿಸುವೆ
ತಾಯಿ ಉಟ್ಟ ಚಿಂದಿ ಬಟ್ಟೆಯ ಚೂರಿನಿಂದ
ಬಡಕಲು ಮೈಯ ಒರಸುವೆ
ಗುಟುಕು ಸೆರೆಯ ತೃಷೆಗಾಗಿ
ಕುಂಟಣಿಯನಾಗಿಸುವೆ, ದೇವ
ಆಗದಿದು ಬಾಳಲು ನಿನಗೆ
ಅದಕಾಗಿ ಮಣ್ಣಿನಲಿ ಹೋರುವ
ಶಪಿತ ಪ್ರೇಮಲ, ವತ್ಸಲ,
ತಾಯಿಯಾಗಬೇಕು’
ಬೋರ ನಕ್ಕ
ನಾನು ಬೈದಾಗ ಅವನೂ ನಕ್ಕನೇನೋ?
*****
ಮೂಲ: ಕೇಶವ ಮೆಶ್ರಾಮ
(ಮರಾಠಿ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...