Home / ಕವನ / ಅನುವಾದ / ದೇವರಿಗೆ ಬೈದೆ

ದೇವರಿಗೆ ಬೈದೆ

ಒಂದು ದಿನ
ಸಿಟ್ಟಿನ ಭರದಲ್ಲಿ
ಪರಮೇಶ್ವರನಿಗೆ ನಾನು
ತಾಯಿ ಮೇಲೆ ಬೈದೆ
ಅವನುಲೋಕಾಭಿರಾಮವಾಗಿ
ಚಕ್ಕನೆ ನಕ್ಕ
ಪಕ್ಕದ ಮನೆಯ ಬೋರ
ಮುಖವನು ಬರಿದೆ ಕುಗ್ಗಿಸಿ
ಅಂಟು ಮೋರೆಯ ಗಂಟು ಹಾಕಿ
ಸವಾಲು ಮಾಡಿದ
‘ಯಾಕಯ್ಯ ನೀನು’ ಹೀಗೆ
ಆ ನಿರ್ಗುಣ, ನಿರಾಕಾರ
ಅನಾಥ ಜಗನ್ನಾಥನಿಗೆ
ಏನಾದರೂ ಅನ್ನುತ್ತಿ
ಶಬ್ದ ಜಾಲದಲಿ ಅವನ
‘ಧರ್ಮಫಣಿಯನ್ನು ಹಿಡಿಯುತ್ತಿ’
ಇನ್ನೊಮ್ಮೆ ಬೈದೆ ಬಿಗಿಯಾಗಿ
ವಿದ್ಯಾಪೀಠದ ಗೋಡೆ ಬಿರಿಯಿತು
ಮನುಷ್ಯ ಏಕೆ ಸಿಟ್ಟಾಗುತ್ತಾನೆ?
ಈ ವಿಷಯದ ಕುರಿತು ಅಲ್ಲಿ
ಶೋಧ ನಡೆದಿದೆ.
ಹೊಗೆಬತ್ತಿಯ ಧೂಮ ತುಂಬಿದ
ಹೊಟ್ಟೆಯಲ್ಲಿ
ಭಾವವಿಹ್ವಲ ಚರ್ಚೆ ನಡೆದಿದೆ
ನನ್ನ ಹುಟ್ಟು ದಿನದಂದು
ದೇವನಿಗೆ ಇನ್ನೊಮ್ಮೆ ಬೈದೆ
ಚಾಬೂಕಿನೇಟಿನಂತೆ
ಶಬ್ದದೇಟುಗಳ ಒಂದೇ ಸವನೆ
ಬಿಗಿದು ಹೇಳಿದೆ
‘ಪಾಪಿ ಮಗನೆ’ ಮುರುಕು ಭಾಕರಿಗಾಗಿ
ಸರಕು ಕಟ್ಟಿಗೆಯ ಮುರಿಸುವೆ
ತಾಯಿ ಉಟ್ಟ ಚಿಂದಿ ಬಟ್ಟೆಯ ಚೂರಿನಿಂದ
ಬಡಕಲು ಮೈಯ ಒರಸುವೆ
ಗುಟುಕು ಸೆರೆಯ ತೃಷೆಗಾಗಿ
ಕುಂಟಣಿಯನಾಗಿಸುವೆ, ದೇವ
ಆಗದಿದು ಬಾಳಲು ನಿನಗೆ
ಅದಕಾಗಿ ಮಣ್ಣಿನಲಿ ಹೋರುವ
ಶಪಿತ ಪ್ರೇಮಲ, ವತ್ಸಲ,
ತಾಯಿಯಾಗಬೇಕು’
ಬೋರ ನಕ್ಕ
ನಾನು ಬೈದಾಗ ಅವನೂ ನಕ್ಕನೇನೋ?
*****
ಮೂಲ: ಕೇಶವ ಮೆಶ್ರಾಮ
(ಮರಾಠಿ)

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...