ಮೌನ

ಮೌನ ಉದ್ದಕ್ಕೆ ಬೆಳೆದಾಗ
ಭೂತ ಬೆಳೆದಂತೆ ಭಯವಾಗುತ್ತದೆ
ಮೌನ ಮನಸ್ಸಿನಲ್ಲಿ ಬೆಳೆದು ಕುಳಿತಾಗ
ತನ್ನವರು ಅನ್ಯರಾದಾಗ
ಜೊತೆಯವರು ಪರರಾಗಿ
ಏಕಾಂತವನ್ನು ಭೋಗಿಸ ಬೇಕಾಗಿ ಬಂದಾಗ
ಮೌನ ಭೀತವಾಗಿರದೆ
ಎಲೆಗಳಿಂದ ಹೊರಟ
ಹವೆಯೂ ರುಂಯೆಂದು
ಶಾಪವಾಗುತ್ತದೆ!
ಮೌನದಿಂದ ದೂರ ಓಡುವವರೆಲ್ಲ
ಚಾದಂಗಡಿಯಲ್ಲಿ
ಶರಾಬುಖಾನೆಯ ಮೇಜಿನಲ್ಲಿ
ಜೊತೆಗೊಬ್ಬರನ್ನು ಹುಡುಕ ತೊಡಗುತ್ತಾರೆ.
ಬೋರು ಹೊಡೆಯುವ ಯಾರದೋ
ಹಾಂಕ್ಕೆ ಹೂಂ ಸೇರಿಸಿ
ಕೇಳಿಸಿ ಕೊಂಡ ಸೋಗು ಹಾಕುತ್ತಾರೆ.
ಕೈಗೆಸಿಕ್ಕ ಒಣ ಕಾದಂಬರಿಯಲ್ಲಿ
ತೊಂಭತ್ತು ಮಿನಿಟುಗಳ ಹಿಂದಿ ಸಿನೇಮಾದಲ್ಲಿ
ಬೀದಿ ಬೀದಿಯ ನುಸುಳಿ
ವಿಂಡೋ ಶೋಪಿಂಗ್ ಮಾಡುತ್ತಾರೆ
ಕವಿಯ ಮನೆಯನ್ನು ಹೊಕ್ಕು
ಬೋರು ಕಾವ್ಯವ ಕೇಳಿ
ಕೇಳದೆಯೆ ವಾಹ! ಎಂದು ಮೆಚ್ಚುತ್ತಾರೆ
ಬಸ್‌ಸ್ಟಾಪಿನಲ್ಲಿ ವ್ಯರ್ಥವೆ ಬಸ್‌ ಬಿಡುತ್ತ
ಮನಸ್ಸು ಚಿಂತೆಯಲ್ಲದ್ದುವ ಮೊದಲೆ
ಸೆರೆಯ ಶರಣು ಹೊಡೆಯುತ್ತಾರೆ
ಯಾವ ಜತನವೂ ನಡೆಯದಿರೆ
ಮನೆಗೆ ಮರಳಿ
ಸತಿ ಸುತರಲ್ಲಿ ಹಿಂದೆ
ಆಡಿದ್ದನ್ನೆ ಆಡಿ
ಕೇಳದ-ಹೇಳದ ಫಾರ್ಮುಲವನ್ನೆ
ಮರುಕಳಿಸಿದಂತಾಗುವುದು
ನಂತರ ಮನೆಯಲ್ಲಿ
ಮನೆಯ ಮುಂದಿರುವ
ಸ್ಮಶಾನದಂತಹ,
ಒಂದು ದೀರ್ಘ ಮೌನ ಹರಡುವುದು
ಈ ಮೌನವನ್ನು ಬಿಗಿದಪ್ಪಿ
ಎಲ್ಲರು ಮಲಗುವರು
ನಿದ್ದೆಯಲ್ಲಿ ಬಡ ಬಡಿಸುವರು
ನನ್ನ ತೆರೆದಿದ್ದ ಕಣ್ಣಿಗೆ
ಬಾಲ್ಕನಿಯಲ್ಲಿ ತೂಗುವ
ಒಣವಸ್ತ್ರ ಕಾಣುವುದು
ನಮ್ಮ ಅಗಸ ಬರಲಿಲ್ಲ?
ನನ್ನ ಲುಂಗಿ ನೀನೆ ಒಗೆದದ್ದು ಲೇಸಾಯಿತು
ರಾತ್ರಿಯಲ್ಲಿ ಅದು….
ನಾನು ನನ್ನಷಕ್ಕೆಂಬಂತೆ
ಅವಳಿಗೆ ಹೇಳುತ್ತೇನೆ
ಕೋಮಿಕ್ಸ್ ಓದುತ್ತಿದ್ದ
ನನ್ನ ಮಗಳ ಮುಖ ಅರಳುತ್ತದೆ
ಅಪ್ಪ, ಮಾತು ಲುಂಗಿಯದಾದರೂ
ನಿನ್ನ ಮೌನ ಮುರಿಯಿತಲ್ಲ!
ಎಂದು ನಗೆ ಕಿಸಕ್ಕೆಂದು ಹೊರಡುತ್ತದೆ.
*****
ಮೂಲ: ಪ್ರೀತಮ್ ಬೇಲಿ
(ಹಿಂದಿ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...