Home / ಕವನ / ಅನುವಾದ / ಸಾವಿಗೆ ಒಡೆತನವಿಲ್ಲ

ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...