Home / ಕವನ / ಅನುವಾದ / ಸಾವಿಗೆ ಒಡೆತನವಿಲ್ಲ

ಸಾವಿಗೆ ಒಡೆತನವಿಲ್ಲ

ಸಾವಿಗೆ ಸ್ವಾಮಿತ್ವವಿಲ್ಲ
ಸತ್ತವರು ನಗ್ನರಾಗುವರು
ಗಾಳಿಯಲೆಯಲಿ ಸುಳಿವ
ಮನುಷ್ಯನಲಿ ಮತ್ತು ಪಶ್ಚಿಮ ಚಂದ್ರನಲಿ
ಬೆರೆತು ಹೋಗುವರು.
ಅವರ ಎಲುವನ್ನು ಸರಿಯಾಗಿ ಹೆಕ್ಕುವಾಗ
ಶುದ್ಧ ಎಲುಬು ಮಾಯಾವಾಗುವುದು,
ಅವರ ಮೊಣಕ್ಕೆ ಪಾದಗಳಲಿ
ನಕ್ಷತ್ರ ಕಾಣುವುದು;
ಹುಚ್ಚರಾಗಿಯು ಅವರು ಮತಿವಂತರು,
ಸಮುದ್ರದಾಳದಲಿ ಮುಳುಗಿಯು
ಮತ್ತೆ ಏಳುವರು;
ಪ್ರೇಮಿಗಳು ಸಾಯುವರು
ಪ್ರೇಮ ಸಾಯದು
ಮತ್ತು ಸಾವಿಗೆ ಒಡೆತನವಿಲ್ಲ.
ಸಾಗರದಲೆಗಳ ಸುಳಿಯೊಳಗೆ
ಬಹುಕಾಲ ಸೇರಿಕೊಂಡರವರು
ಉದ್ದಕೆ ಒರಗಿ ಸಾಯಲಾರರು ಗಾಳಿಯಿಂದ.
ಚುಚ್ಚುವ ಮೊನಚು ಸರಲಿಗೆ
ಎದೆ ಕೊರೆಯುವಾಗಲು
ಗಾಲಿಗೆ ಬಿಗಿಯುವಾಗಲು
ಅವರು ಮುರಿಯರು ಬೇನೆಯಿಂದ.
ವಿಶ್ವಾಸ ಅವರ ಕೈಯಲಿ
ಎರಡು ತುಂಡಾಗುವುದು ಮತ್ತು
ಒಂದು ಕೋಡಿನ ದುಷ್ಟ ಮೃಗ
ಅವರನ್ನು ತೊಂದರೆಗೆ ಒಳಪಡಿಸುವುದು,
ಹೋಳಾಗಿ ಮುಗಿದರು ಅವರು ಒಡೆಯುವುದಿಲ್ಲ
ಸಾವಿಗೆಂದೂ ಸ್ವಾಮಿತ್ವವಿಲ್ಲ.
ಅವರ ಕಿವಿಯಲ್ಲಿ ಇನ್ನು ನೀರ್‌ಹಕ್ಕಿ
ಕೂಗಲಾರದು
ತೆರೆಗಳು ದಂಡೆಗೆ ಬಡಿದು
ಸದ್ದು ಮಾಡಲಾರವು
ಹೂವರಳುವಲ್ಲಿ ಇನ್ನು ಹೂವರಳದು
ಮಳೆಯ ಹೊಡೆತಕೆ ತಲೆ ಎತ್ತದು
ಸತ್ತ ಹುಚ್ಚು ಉಗುರಿನಂತಾದರು
ಮಲ್ಲಿಗೆಯ ಸುತ್ತಿಗೆಯಿಂದ
ಪಾತ್ರಗಳ ತಲೆಗೆ ಹೊಡೆದರು
ಬಿಸಿಲು ಬೀಳುವ ತನಕ ತಡೆದರು
ಬಿಸಿಲಿನಲ್ಲಿ.
ಸಾವಿಗೆ ಸ್ವಾಮಿತ್ವವೆಲ್ಲಿ.
*****
ಮೂಲ: ಸೈಲನ್ ಥೋಮಸ್
(And Death Shall Have No Dominion)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...