Home / ಕವನ / ಅನುವಾದ / ಕುಬ್ಜರು

ಕುಬ್ಜರು

ನಾವೆಲ್ಲ ಕುಬ್ಜರು
ಮನಸ್ಸು, ಬುದ್ಧಿ, ಭಾವನೆಯಿಂದ
ಚೇತನ, ಚಿಂತನ, ವಿವೇಕದಿಂದ
ನಾವು ವಿಶಿಷ್ಟರಲ್ಲ
ಸಾಮಾನ್ಯರು, ಅದಕೆಂದೆ
ಎಲ್ಲ ಕಾಲದಲ್ಲಿಯು
ಕುಬ್ಜರಿರ ಬೇಕೆಂದೆ
ಲೋಕದ ಬಯಕೆ.
ವಕ್ತಾರರಿಗೆ ಶೋತೃಗಳಾಗಿ
ನೇತಾರರಿಗೆ ಹಿಂಬಾಲಕರಾಗಿ
ಭೋಧಕರಿಗೆ ಪಾಠಕರು
ಅಂದೋಲನಕೆ ಗುಂಪು
ಧರ್ಮಕ್ಕೆ ಭಕ್ತರಾಗಿ,
ಸಂಪ್ರದಾಯಗಳಿಗೆ ಮತಿಮಂದರಾಗಿ
ಆಡಳಿತೆಗೆ ಬಾಬುಗಳು
ಗಿರಣಿಗಳಿಗೆ ಕಾರ್ಮಿಕರಾಗಿ
ತೋಪುಗಳಿಗೆ ಕಾರ್ತೂಸ್
ಪಕ್ಷದೊಡೆಯರಿಗೆ ಯಸ್‌ಮೆನ್
ಆಳುವವರಿಗೆ ಗುಲಾಮರಾಗಿ
ವ್ಯವಸ್ಥೆಗೆ ಭ್ರಷ್ಟರು
ಡೆಮೊಕ್ರಸಿಗೆ ಮಿಡಿಯೊಕರು
ಮತವಾದಿಗಳಿಗೆ ಮೂರ್ಖರು
ಪಾರ್ಟಿಯ ಅಂಧ ಅನುಯಾಯಿಗಳಾಗಿ
ನಾವೆಲ್ಲ
ಯುಗ ಯುಗದಿಂದ
ಅವರಿಗಾಗಿಯೆ ಬದುಕಿ ಬಂದಿದ್ದೇವೆ
ಕ್ರೀತದಾಸರು ನಾವು
ಇತಿಹಾಸದ ಚಿಂದಿ ಹೊಲಿಯುತ್ತೇವೆ
ಇತಿಹಾಸ ಅವರದು
ನಾವು ಶಾಯಿ ಮಾತ್ರ
ವಿಜಯ ಅವರದು
ನಾವು ಗಾಯಾಳುಗಳು
ಎಂದೆಂದಿಗೂ
ಗಾಯಗೊಂಡ ಸಿಪಾಯಿಯಾಗಿ
ಆ ದೈತ್ಯರ ಸೇವೆಗೈಯುತ
ಬದುಕ ಬೇಕಾಗಿದೆ
ಕುಬ್ಜರಾಗಿ.
*****
ಮೂಲ: ಗಿರಿಜಾ ಕುಮಾರ ಮಾಥುರ್
(ಹಿಂದಿ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...