Home / ಕವನ / ಕವಿತೆ / ಬಾಗಿಲ ತೆಗೆಯಮ್ಮ

ಬಾಗಿಲ ತೆಗೆಯಮ್ಮ

ಕಳೆಯನು ಕಳೆಯದೆ ನಾನಿನ್ನ ಕಾಣೆನು
ಸರಸಮ್ಮ ನೀನೆಷ್ಟು ಕಳವಂತಿಯೆ
ಹೊಲದಲ್ಲಿ ತುಂಬಿರುವ ದನಗಳನಟ್ಟದೆ
ಬೆಳೆಯನ್ನು ಕಾಣೆನು ರಸವಂತಿಯೆ || ೧ ||

ಈ ಮಣ್ಣು ಈ ನೀರು ಗಾಳಿ ಬೆಂಕಿಗಳಿಂದ
ಹೊಲದಲ್ಲಿ ಬೆಳೆಯನು ಬೆಳೆಯಬಹುದು
ಬರಿಸೊಪ್ಪೆ ಬೆಳೆದರೆ ಹೊಟ್ಟಿಗೆ ಬರಿಮಣ್ಣು
ಕಳೆಯ ಕಾಳಿಲ್ಲದೆ ಗೆಯ್ಮೆ ಬರಿದು || ೨ ||

ಅಡವಿಯ ಪೈಣದಿ ಕಣ್ಣು ಕಾಣಿಸದಂತೆ
ಎಡರು ತೊಡರುಗಳಲ್ಲಿ ನಾನಿರುವೆನು
ತೊಡರನು ಬಿಡಿಸಲೇ ಬಡಿದಾಟ ಸಾಗಿದೆ
ಹೊಡಮುರಿದೇಳ್ವುದು ಬಯಕೆ ಬಳ್ಳಿ || ೩ ||

ಆಗೊಮ್ಮೆ ಈಗೊಮ್ಮೆ ಮರಗಳ ಸಂದೀಲೆ
ಹಣಿಕೆ ಹಾಕುವುದಿನ್ನು ಬಯಕೆ ಬಾನು
ಛಳಕು ಹೊಡೆದಂತಾಗಿ ಬೆಳಕನ್ನು ಕಾಣುವೆ
ಕೈಯಲ್ಲಿ ಸಿಗಲದು ಕೋಲು ಏನು || ೪ ||

ಭೂಮಿಗೆ ಬಾರದೆ ಮಿಂಚನು ಮೆರೆಯುತ್ತ
ಮೋಡದ ಮರೆಯಿಂದ ನೀನಿಳಿಯಲಾರೆ
ನಿನಗಾಗಿ ಕಾಯುತ್ತ ಹಳ್ಳ ಕೆರೆಗಳಂತೆ
ಬರಿದಾದ ಎದೆಯಿಂದ ನಾನೇರಲಾರೆ || ೫ ||

ನೂರಾರು ಸಂತೆಯ ಮಾಡಿದರು ಬರಿಗೈಯಿ
ಕೊಡುವುತ್ತ ನಿಂತೇನು ಹತಭಾಗ್ಯನು
ತಿರುಗಿ ದಣಿದದ್ದೊಂದೆ ಕೂಗಿ ಮಾರಿದ್ದೊಂದೆ
ಕೈಯಲ್ಲಿ ಉಳಿದಿಲ್ಲ ಚಿಕ್ಕಾಸೇನೂ || ೬ ||

ಎಷ್ಟೊತ್ತು ಕಾಯ್ಬೇಕು ತೆಗೆಯಮ್ಮ ಬಾಗಿಲ
ಭಿಕ್ಷುಕ ನಿಂತೀನಿ ಮನಿಯ ಮುಂದೆ
ಏನಾದರೊಂದಿಷ್ಟು ಉಳಿದಿದ್ದು ಕೊಟ್ಟರೆ
ಹರಸುತ್ತ ಹೋಗುವೆ ಇನ್ನು ಮುಂದೆ || ೭ ||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...