Home / ಕಥೆ / ಸಣ್ಣ ಕಥೆ / ಹಮ್ ನಹಿಂ ಗದ್ಧಾ

ಹಮ್ ನಹಿಂ ಗದ್ಧಾ

ಕೆಲವು ವರ್ಷಗಳ ಹಿಂದ ಲಕ್ಷಣಾವತಿಯಲ್ಲಿ ೧೭ನೆಯ ವರ್ಗದ ದೇಶೀಯ ಸಿಪಾಯರ ದಂಡು ಇದ್ದಿತು. ಸಿಪಾಯರ ಮನೆಗಳು ‘ಮೈದಾನಿನಲ್ಲಿ’ ಕಟ್ಟಿದ್ದುವು; ಹಾಗೂ ಸೈನ್ಯದ ಅಧಿಕಾರಿಗಳ ‘ಬಂಗ್ಲೆಗಳು’ ಜನರಲ್ ಸಾಹೇಬರ ಮತ್ತು ಕರ್ನಲ್ ಸಾಹೇಬರ ‘ಬಂಗ್ಲೆಗಳು’ ‘ಲೆಫೆನೆಂಟ್’ ಸಾಹೇಬರ ‘ಬಂಗ್ಲಗಿಂತಲೂ’ ಎತ್ತರದಲ್ಲಿ ಇದ್ದುವು. ಈ ಮೂವರು ‘ಆಫೀಸರರ’ ಬಟ್ಟೆಗಳನ್ನೆಲ್ಲಾ ಒಗೆಯುವ ಆಗಸನು ಒಬ್ಬನೇ. ಜನರಲ್ ಸಾಹೇಬರ ಮತ್ತು ಕರ್ನೆಲ್ ಸಾಹೇಬರ ‘ಬಂಗ್ಲೆಗಳು’ ಎತ್ತರದಲ್ಲಿ ಕಟ್ಟಿದುದರಿಂದ, ಆಗಸನು ಅವರ ವಸ್ತಗಳನ್ನು ಒಯ್ಯುವುದಕ್ಕೆ ಕತೆಯನ್ನು ಇಟ್ಟುಕೊಳ್ಳ ಬೇಕಾಯಿತು. ಆದರೆ ಲಫ್ಟೆನೆಂಟ್ ಸಾಹೇಬರ ಬಟ್ಟೆಗಳಿಗೆ ತನ್ನ ಬೆನ್ನನ್ನೇ ವಾಹನವಾಗಿ ಕೊಡುತಿದ್ದನು. ಇದರಲ್ಲಿ ನೂತನವೇನೂ ಇರಲಿಲ್ಲವೆಂದು ತಾನಾಗಿಯೇ ತೋರುವುದು. ಆದರೆ ಆಗಸನ ಈ ನಡತೆಯನ್ನು ನೋಡಿ ಲೆಫ್ಟೆನೆಂಟ್ ಸಾಹೇಬರು ರೇಗಿ ಬಿದ್ದರು. ಜನರಲ್ ಮತ್ತು ಕರ್ನಲ್ ಸಾಹೇಬರುಗಳ ವಸ್ತ್ರಗಳನ್ನು ಕತ್ತೆಯ ಮೇಲೂ, ತನ್ನ ವಸ್ತ್ರಗಳನ್ನು ಮಾತ್ರ ಬೆನ್ನ ಮೇಲೂ ಏಕೆ ಕೊಂಡುಹೋಗುತ್ತಿದ್ದನು ಎಂದು ಸಾಹೇಬರ ಬುದ್ಧಿಗೆ ತಿಳಿಯಲಿಲ್ಲ. ತನಗೆ ಇದೊಂದು ಬಗೆಯ ಅವಮಾನವೆಂದು ತಿಳಿದು, ಸಾಹೇಬರು ಆ ಬಡ ಪಾಪಿಗೆ ಬುದ್ಧಿ ಕಲಿಸಬೇಕೆಂದು ನಿಶ್ಚಯ ಮಾಡಿದರು.

ಸಾಹೇಬರು ಕಾರಣಾಂತರದಿಂದ ಅನೇಕ ಮಂದಿ ಸ್ನೇಹಿತರನ್ನು ಮನೆಗೆ ಒಂದು ದಿನ ಸಾಯಂಕಾಲ ಆಮಂತ್ರಿಸಿದ್ದರು. ಅತಿಥಿಗಳಲ್ಲಾ ಮನೆಯೊಳಗೆ ಕೂಡುತ್ತಲೇ ಸಾಹೇಬರ ಬಟ್ಟೆಗಳನ್ನು ಎಂದಿನಂತೆ ಬೆನ್ನ ಮೇಲೆ ಹೊತ್ತುಕೊಂಡು ‘ಡೋಭಿಯು’ ಒಳಕ್ಕೆ ಬಂದನು. ಅತಿಥಿಗಳ ಸಮಕ್ಷಮದಲ್ಲಿ ಅಗಸನು ತನಗೆ ತೋರಿಸಿದ ಈ ಅತ್ಯಾಚಾರವನ್ನು ನೋಡಿ, ಸಾಹೇಬರು ಉರಿದು ಬಿದ್ದರು. ಅದಲ್ಲದ ತಾನು ದೇಶಭಾಷಯಲ್ಲಿ ಎಷ್ಟರ ಮಟ್ಟಿಗೆ ಅಭ್ಯಾಸ ಮಾಡಿರುವನೆಂದು ತನ್ನ ಮಿತ್ರಮಂಡಳಿಗೆ ತೋರಿಸುವುದಕ್ಕೆ ಸಾಹೇಬರು ಕಾಂಕ್ಷಿತರಾಗಿ, ಅಗಸನಿಗೆ “ಕಂ ಹಿಯರ್ ಯು ನಿಗ್ಗರ್” ಎಂದು ಓದರಿದರು.

ಬಡ ಅಗಸನು ನಡುನಡುಗಿ ಮುಂದುಹೋಗಿ ದೊಡ್ಡ ಸಲಾಂ ಮಾಡಿದನು.

“ವ್ಹಾಯ್ ಜನರಲ್ ಸಾಹೀಬ್ ಎಂಡ್ ಕರ್ನೆಲ್ ಸಾಹೆಬ್ ತುಂ ಗಿವ್ ಗದ್ಧಾ ಎಂಡ್ ಹಂ ನಹಿ?” ಎಂದು ಸಾಹೇಬರು ಕುಪಿತಸ್ವರದಿಂದ ಹೇಳಿದರು.

ಅಗಸನ ಬುದ್ಧಿ ಅಡಿಮೇಲಾಯಿತು; ಅವನಿಗೆ ಈ ಸಿಟ್ಟು ಮಾತಿನ ಅರ್ಥವೇನೆಂದು ತಿಳಿದುಬರಲಿಲ್ಲ. ಅವನು ಮೌನದಿಂದ ಇರುವುದೇ ಲೇಸಂದು ತಿಳಿದು ನಿರುತ್ತರನಾದನು. ಆದರಿ ಅವನ ನಿರುತ್ತರದಿಂದ ಸಾಹೇಬರು ಇನ್ನೂ ಕೆರಳಿದಂತಾಗಿ “ಡೆಯರ್ ಯೂ ಡಿನ್ಯಾ ಇಟ್, ಅಯ್ಲ್ ಬ್ರೇಕ್ ಎವೆರಿ ಬೋನ್ ಫೊರ್ ಯೂ-ಮಾಲುಂ?” ಎಂದರು.

“ಖುದಾವಂದ್! ಆಪ್ ಕ್ಯಾ ಕಹತೇ ಹೈ ಮೈ ಸಮಜ್ತಾ ನಹಿಂ? ಎಂದು ‘ಢೋಬಿ’ ಯು ಉತ್ತರಿಸಿದನು.

“ಸಮಜ್ತೆ ನೈ? ಒಲ್ ರ್‍ಯಾಟ್, ಆಯ್ ವಿಲ್ ಎಕ್ಸ್‍ಪ್ಲೇನ್ ಟು ಯೂ, ದೇಖೊ.”

“ಜೀ ಹುಜೂರ್”

“ದೇಕ್ಹೋ! ಕರ್ನಲ್ಸಾಹಬ್ ಗದ್ಧಾ, ಜನರಲ್ ಸಾಹಬ್ ಗದ್ಭಾ; ಹಂ ಗದ್ಧಾ ನಹಿ”

ಇದಕ್ಕೆ ಅಗಸನು ಸುಮ್ಮನಿರಲಾರದೆ “ನಹಿ ಸಾಹೆಬ್, ಆಪ್ ಕೈಸಾ ಗದ್ಧಾ? ಆಪ್ ಗದ್ಧಾ ನಹಿ” ಎಂದನು.

ಇದನ್ನು ಕೇಳುತಲೇ ಸಾಹೇಬರು ಕ್ರೋಧದಿಂದ “ಯೂ ಸ್ಟುಪಿಡ್ ಅಸ್ಸ್, ಯು ಡೆಯರ್ ಡಿನೈ ಮಿ ಯುವರ್ ಡೊಂಕಿ? ವೊಟ್ ಡು ಯು ಮೀನ್? ಹಂ ಗದ್ಧಾ, ಒಫ್ ಕೋರ್ಸ್, ಹಂ ಗದ್ಧಾ.”

ಸಾಹೇಬರ ಮನಸ್ಸು ನೆಟ್ಟಗಾದ ಸ್ಥಿತಿಯಲ್ಲಿ ಇರಲಾರದೆಂದು ಸಾಹೇಬರ ಈ ಮಾತುಗಳಿಂದ ಬಡ ಅಗಸನು ನಿಶ್ಚಯಿಸಿದನು; ತಾನು ಕತ್ತೆ ಎಂದು ಹೇಳಿಸಿಕೊಳ್ಳುವ ಹಟವನ್ನು ಸಾಹೇಬರು ಏಕೆ ಹಿಡಿದಿರುವರು ಎಂದು ಅವನಿಗೆ ತಿಳಿಯಲಿಲ್ಲ. ಅಲ್ಲಿ ನೆರದಿದ್ದ ಅತಿಥಿಗಳೆಲ್ಲರೂ ಸಾಹೇಬರ ನುಡಿಗಳಿಂದ ವಿನೋದಗೊಂಡರು. ಆದರೆ ಆಗಸನು ತನ್ನನ್ನು ಅಪಮಾನಗೊಳಿಸಿದನೆಂದು ಸಾಹೇಬರು ತಿಳಿದು, ತನ್ನ ಮುಷ್ಟಿಯಿಂದ ಎರಡು ಮೂರು ಪ್ರಹಾರಗಳನ್ನು ಕೊಟ್ಟು ಹೇಳಿದೇನೆಂದರೆ, “ಸೇ, ಯು ಇನ್‌ಫರ್‌ನಲ್ ಆಸ್ಫ಼್!-ಸೇ, ಲೆಫ್ಟನಂಟ್ ಸಾಹೆ ಗದ್ಧಾ, ಅಲ್‍ಬತ್ ಗದ್ಧಾ, ಒಲ್‍ವೆಸ್ ಗದ್ಧಾ” “ಬೊಲೋ, ಹಂ ಗದ್ಧಾ ಹೈ, ಅದರ್ ವಾಯಸ್ ಅ ವಿಲ್ ಕಿಲ್ ಯು.”

ಲೆಫ್ಟನೆಂಟ್ ಸಾಹೇಬರೂಡನೆ ಚರ್ಚಿಸುವುದು ವ್ಯರ್ಥವೆಂದು ತಿಳಿದು ಆಗಸನು “ಆವ್ರ್ ಖುದಾ ವಂದ್ ಜಬ್ತೊ ಜೈಸಿ, ಆಪ್ ಕೀ ಮರ್ಜಿ, ಆಪ್ ಬಹುತ್ ಬಡಾ ಗದ್ಧಾ” ಎಂದನು.

ಈ ಸಂಗತಿಯನ್ನು ಸಾಹೇಬರು ತನ್ನ ಹಿಂದೂಸ್ಥಾನೀ ಮುನ್ಶಿಗೆ ಹೇಳಿದರು. ಮುನ್ಶಿಯು ಇದರ ಯಥಾರ್ಥ ಸ್ಥಿತಿಯನ್ನು ತಿಳಿಸುತ್ತಲೇ ಸಾಹೇಬರಿಗೆ ಅದ ನಾಚೆಕೆಯನ್ನು ವಾಚಿಸುವುದಕ್ಕಿಂತಲೂ ನೀವು ಯೋಚಿಸುವುದೇ ಲೇಸು. ಹೇಗೂ ಅದು ಮುನ್ಶಿಯ ಸಂಬಳವನ್ನು ಹೆಚ್ಚಿಸುವಂತೆ ಪರಿಣಮಿಸಿತು. ದೇಶ ಭಾಷೆಯ ಅಭ್ಯಾಸಕ್ಕೆ ಸ್ವಲ್ಪ ಹೆಚ್ಚು ಗಮನವನ್ನು ಕೊಡುವುದಕ್ಕೆ ಸಾಹೇಬರು ತೊಡಗಿದರು; ಮತ್ತು ತಾನು ಚೆನ್ನಾಗಿ ದೇಶ ಭಾಷೆಯನ್ನು ತಿಳಿದ ಹೊರತು ಅದರಿಂದ ಒಂದೇ ಒಂದು ಅಕ್ಷರವನ್ನು ಉಚ್ಚರಿಸಲಾರೆನೆಂದು ನಿಶ್ಚೈಸಿದರು.
*****
(ಸುವಾಸಿನಿ – ೧೯೦೨)

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...