Home / ಲೇಖನ / ಹಾಸ್ಯ / ಪಾಯಸ ಪುರಾಣ!

ಪಾಯಸ ಪುರಾಣ!

ನನ್ನ ಮದುವೆ ಆದ ಮೊದಲ ವರ್ಷದ (೧೯೬೧) ದೀಪಾವಳಿಗೆ ಮಾವನವರಿಂದ ಆಮಂತ್ರಣ ಬಂದಿತ್ತು. ಮಾವನ ಮನೆ ತಲುಪಿದಾಗ ಅಲ್ಲಿ ಇನ್ನೂ ಇಬ್ಬರು ಅಳಿಯಂದಿರು ಆಗಲೇ ಬಂದು ಬೀಡುಬಿಟ್ಟಿದ್ದರು. ಅಳಿಯಂದಿರು ತಂದಿರುವ ಪಟಾಕಿ, ಮತಾಪು, ಸಿಹಿ ತಿಂಡಿಗಳ ಪ್ಯಾಕೆಟ್ಗಳನ್ನು ಮೊಮ್ಮಕ್ಕಳು ಅಜಮಾಯಿಶಿ ಮಾಡುತ್ತಿದ್ದರು. ನನ್ನ ಸರಕನ್ನು ಬಿಚ್ಚಿ ಎಲ್ಲರ ಮುಂದೆ ಹರಡಿದೆ. ಬರೀ ಸಿಹಿ ತಿಂಡಿಗಳ ಸಮ್ಮಿಶ್ರ ಸರ್ಕಾರವೋ ಎಂಬಂತೆ ಅವುಗಳೇ ರಾರಾಜಿಸುತ್ತಿದ್ದವು.

ಮಧ್ಯೆ ಮಧ್ಯೆ ಕಾಫಿ ಸಮಾರಾಧನೆ ನಡೆಯುತ್ತಿತ್ತು. ಅತ್ತೆಯವರಿಗೆ ಸಂಭ್ರಮವೋ ಸಂಭ್ರಮ. ಕಾಫಿ ವಿತರಿಸುವಾಗ ಕೊಟ್ಟವರಿಗೇ ಮತ್ತೆ ಮತ್ತೆ ಬಂದು ಕೊಡುವರು. ಕೊಂಚ ಮರೆವಿನ ಸ್ವಭಾವದವರು. “ಹಬ್ಬದ ಅಡುಗೆ ಸಿದ್ಧವಾಗುತ್ತಿದೆ. ಯಾವ ಸಿಹಿ ಭಕ್ಷ ನೀವುಗಳು ಇಷ್ಟಪಡುತ್ತೀರಾ? ಒಬ್ಬಟ್ಟು ಮಾಡಲೇ?” ಅತ್ತೆಯವರು ಕೇಳಿದರು. ಎಲ್ಲರೂ “ಏನೂ ಸಿಹಿ ತಿಂಡಿ ಮಾಡುವ ತೊಂದರೆ ತೆಗೆದುಕೊಳ್ಳಬೇಡಿ. ಅಷ್ಟೊಂದು ವೆರೈಟಿ ಸಿಹಿ ತಿಂಡಿಗಳು ಮೇಳೈಸಿವೆ. ಅವನ್ನೆಲ್ಲಾ ವಿಚಾರಿಸಿಕೊಳ್ಳಬೇಡವೆ?” ಎನ್ನುತ್ತ ಒಕ್ಕೊರಳಿನಿಂದ ಅತ್ತೆಯವರ ಹುಮ್ಮಸ್ಸಿಗೆ ತಣ್ಣೀರು ಎರಚಿದರು. “ಹೌದು, ಅವರುಗಳು ಹೇಳುತ್ತಿರುವುದು ಸರಿಯಾಗಿಯೇ ಇದೆ; ಈಗ ತಂದಿರುವ ಸಿಹಿಗಳನ್ನಲ್ಲಾ ಬೆರಸಿ ‘ಮಿಕ್ಸರ್’ ಮಾಡಿಬಿಟ್ಟು, ಅದೊಂದು ಮಾದರಿಯ ಸಿಹಿಯಾಗಿ ಬಿಡುತ್ತದೆ. ಬರೀ ಪಾಯಸವನ್ನು ಮಾಡು. ಪಾಯಸ ಮಾತ್ರ ತುಂಬಾ ಚೆನ್ನಾಗಿರಲಿ, ಹದವಾಗಿರಲಿ, ಈ ಊಟದಲ್ಲಿ ಹೊರಗಡೆಯಿಂದ ತಂದಿರುವ ಸ್ವೀಟ್ ಗಳು ಆಷ್ಟು ಹಿತವಾಗಿರುವುದಿಲ್ಲ’ ಏನಿದ್ದರೂ ಪಾಯಸದ ಸಮಾನ ಮತ್ತೊಂದು ಸಿಹಿ ಇರುವುದಿಲ್ಲ” ಎಂದರು ನಮ್ಮ ಮಾವನವರು. ಅವರು ಆಡುವ ಮಾತಿಗೆ ಮನೆಯಲ್ಲಿ ಎದುರಿಲ್ಲ.

ಪೂಜೆ ಮುಗಿದು ತೀರ್‍ಥ ಪ್ರಸಾದಗಳ ವಿನಿಯೋಗ ಆದನಂತರ ಊಟಕ್ಕೆ ಸಿದ್ಧತೆ ನಡೆಯಿತು. ಬಾಳೆ ಎಲೆಗಳಲ್ಲಿ ಸುತ್ತಲೂ ಬಿಸಿಬಿಸಿಯಾಗಿ ಮಾಡಿರುವ ಪಲ್ಯ, ಕೋಸಂಬರಿ, ಚಿತ್ರಾನ್ನ, ಗೊಜ್ಜು ಇತ್ಯಾದಿಗಳ ಮೇಳ. ಎಲ್ಲರೂ ಊಟಕ್ಕೆ ಕುಳಿತೆವು. ಮೊಮ್ಮಗ ಶ್ರೀಹರಿ ಕದ್ದು ಕದ್ದು ಪಾಯಸದ ರುಚಿ ನೋಡುತ್ತಿದ್ದ. ನಾವು ಊಟ ಮಾಡಲು ಸಿದ್ದರಾಗುವುದೇ ತಡ, ಶ್ರೀಹರಿ ‘ಅಜ್ಜೀ, ಅಜ್ಜೀ, ಪಾಯಸ ಸಪ್ಪೆ’ ಕೂಗಿಕೊಂಡ. ಮತ್ತೆ ಇನ್ನೆರಡು ಮಕ್ಕಳು ‘ಹೌದು ಅಜ್ಜೀ, ಪಾಯಸ ತುಂಬಾ ಸಪ್ಪೆ, ಬಾಯಿಗೆ ಇಡೋಕೆ ಆಗೊಲ್ಲ’ ಎಂದವು. ‘ಯಾಕಮ್ಮ ಪಾಯಸಕ್ಕೆ ಕಡಿಮೆ ಬೆಲ್ಲ ಹಾಕಿದ್ದೀಯಾ? ಎಲ್ಲರೂ ಸಪ್ಪೆ ಎನ್ನುತ್ತಿದ್ದಾರೆ. ‘ನನ್ನವಳು ಬಾಯಿ ಹಾಕಿದಳು. ಮರವೆಯ ಅತ್ತೆಯವರಿಗೆ ಜ್ಞಾನೋದಯವಾಯಿತು. ತಾವು ಬೆಲ್ಲದ ಪಾಕವನ್ನು ಇಟ್ಟಿದ್ದು ಪಾಯಸ ಕುದಿಯುತ್ತಿರುವಾಗ ಹಾಕೋಣವೆಂದು ಅಂದುಕೊಂಡಿದ್ದರು ಏನೋ ಗಡಿಬಿಡಿ, ಸಂಭ್ರಮದ ಭರಾಟೆಯಲ್ಲಿ ದೂರದಲ್ಲಿದ್ದ ಪಾಕದ ಪಾತ್ರೆ ಕಣ್ಣಿಗೆ ಬೀಳದೆ ಮಾಡಿದ ಪಾಯಸ ಬೆಲ್ಲದಿಂದ ವಂಚಿತವಾಯಿತು. ತುಂಬಾ ನೊಂದುಕೊಂಡರು ‘ಎಲ್ಲರೂ ನಿಧಾನವಾಗಿ ಊಟ ಮಾಡಿರಿ. ಇನ್ನು ಎರಡು ನಿಮಿಷಗಳಲ್ಲಿ ಪಾಯಸ ಸಿದ್ದವಾಗಿಬಿಡುತ್ತದೆ’ ಎಂದು ಹೇಳಿ ಸಂಭಾಳಿಸಿಕೊಂಡರು.

“ಈಗ ಇಲ್ಲಿ ಜಮಾಯಿಸಿರುವ ಸ್ವೀಟ್ಗಳ ಕೂಟವೇ ಮಜಭೂತಾಗಿದೆ; ಈಗ ನಿನ್ನ ಪಾಯಸ ಯಾರಿಗೆ ಬೇಕೇ?” ಮಾವನವರು ನುಡಿದರು. ಊಟದ ಮಧ್ಯೆ ‘ನಗೆ ಕೂಟ’ ಸಂಭ್ರಮ ತಂದಿತ್ತು. ಪ್ರತಿ ದೀಪಾಪಳಿಗೂ ಈ ಘಟನೆಯ ನೆನಪು ಹಸಿರಾಗುತ್ತದೆ. ಮಾಡಿಟ್ಟ ಪಾಯಸ ಹಾಗೆಯೇ ಉಳಿದಿತ್ತು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...