Home / ಕವನ / ಕವಿತೆ / ಹಬ್ಬ

ಹಬ್ಬ

ಹುಟ್ಟೂರು
ಹೆತ್ತವರು, ಒಡಹುಟ್ಟಿದವರು, ನೆಂಟರಿಷ್ಟರ ಬಗ್ಗೆ ಮಾತಾಡುವಾಗ
ಹೊಟ್ಟೆ ತುಂಬಿದಂತಾಗುತ್ತೆ
ಹಿಟ್ಟು ಕಾರವನ್ನೇ ತಿಂದರೂ
ಒಂದ್ಸಾರಿ ನೋಡಿಕೊಂಡು ಬರಬೇಕೆನಿಸುತ್ತೆ
ಯಾವ ಕಾಲನೂ ಹೇಳಬೇಡ ಮಹಾನವಮಿ ಕಾಲವೊಂದು
ಬಿಟ್ಟ ಮೇಲೆ

ದಿಣ್ಣೆ, ದೀಪಾಂತರ ತುಂಬಾ
ಆಸೆಯೆ ಆಕಾರ ತಳೆದಂತೆ ಬೆಳೆದ
ಹೂಪೀಸು, ವಡೆತಲೆಯ ಫಲ ಪೈರು
ಗಾಳಿಗೆ ತೊನೆದಾಡುತ್ತಿರುವಾಗ
ಬಯಲಾದ ಬಯಲೆಲ್ಲಾ ಸಂಗೀತ ನೃತ್ಯದಲ್ಲಿ ತೇಲುವುದು,

ದೊಡ್ಡವಳು ತಾಯಿ ಗಂಗಮ್ಮ ಕೃಪೆಮಾಡಿ ಬಂದು
ನೆರೆ ತೊರೆ ಹಳ್ಳ ಕೊಳ್ಳಗಳಲ್ಲಿ ಅತ್ತಿತ್ತ ಆಡ್ಡಾಡುವ
ಕೆರೆ ಕಟ್ಟೆಗಳಲ್ಲಿ ವಿಶ್ರಾಂತಿ ಪಡೆಯುವ
ಬೆಟ್ಟ ಗುಡ್ಡಗಳ ನೆತ್ತಿಯನ್ನು ಜಾರುಬಂಡಿ ಮಾಡಿಕೊಂಡು
ಆಟವಾಡುವ ದೃಶ್ಯ
ಕಣ್ಣಿಗೆ ಬೀಳಲು ಪುಣ್ಯ ಮಾಡಿರಬೇಕು.
ಸರ್ತಿ ಸರ್ತಿಗೆ ಬರುವ ಈ ಹಿರಿಯರ ಹಬ್ಬಕ್ಕೆ ಕರೆಯದಿದ್ದರೂ
ನಿಲ್ಲಲಾರೆ

ಗಂಡ ಮಕ್ಕಳ ಕೂಡಿಕೊಂಡು
ಪುಟ್ಟ ಮೆರವಣಿಗೆಯಲ್ಲಿ ಸಾಗಿ ಬರುವೆ
ಜೀವನಾ ದ್ರವ್ಯವನು ಕೂಡಿಸಿ ಕೊಳ್ಳುವೆನು
ದೂರದಲ್ಲಿರುವಾಗಲೇ ಕೂನು ಹಿಡಿದ ಚಿಕ್ಕವರು
ಓಡೋಡಿ ಬಂದು
ಅತ್ತೆ, ಮಾವ ಬಂದರೆಂದು ಡಂಗುರ ಸಾರುವುದು
ಹಿರಿಯರು, ಎಲ್ಲರೂ ಬಾಗಿಲಿಗೆ ಬಂದು
ಉಲ್ಲಾಸದ ನಗೆಯಲ್ಲಿ ಸ್ವಾಗತದ ಸೆಳೇವು ನೀಡುವುದು
ಜೀವನದಿ ಮರೆಯಲಾಗದ ಸುಖಾನುಭವವ ತರುವುದು.

ಊಟ ಉಪಚಾರ ಮುಗಿದು
ಎರಡೂ ಕಡೆಯ ಮಕ್ಕಳ ಪ್ರತಿಭಾ ಪಾಠಗಳ ವರದಿಯ ಜೊತೆಜೊತೆಗೆ
ಪರಸ್ಪರ ಸುಖ ಸಂಕಥಾ, ಆಮೋದ ಪ್ರಮೋದದ ನೆರಿಕೆಯಲ್ಲಿ
ಇಣುಕುವಾಗ

ಮಾತಿಗೆ ನೂರು ಮುಖವಾಗಿ
ಸರಿಹೊತ್ತಾದರೂ ಕೊಡುಹ ಮುಗಿಯುವುದಿಲ್ಲ
ಒಬ್ಬೊಬ್ಬರೆ ನೆಂಟರು ಬಂದು ಸೇರಿದ ಹಾಗೆ ಉದ್ದುದ್ದ ಬೆಳೆವುದು
ಹಬ್ಬವೇ ಮುಗಿದು ಊರಿಗೆ ಹೊರಟು ಅರ್ಧ ದಾರಿಗೆ ಬಂದರೂ
ಮುಗಿಯುವ ಲಕ್ಷಣ ಕಣುವುದಿಲ್ಲ.

ಬಿಡುವಾಗಿ ಊರು, ಹೊಲಗಳ ಸುತ್ತ
ಒಂದು ಸುತ್ತು ಹಾಕಿ ಬರುವಾಗ
ಬಾಲ್ಯವು ಮರುಕಳಿಸುವುದು
ಎಲ್ಲಾ ಮುಗಿದು ಹೊರಟು ನಿಂತಾಗ
ಕ್ಷಣ ಕಾಲ
ಎಂದಿನಂತೆ ಕಣ್ಣು ಮಂಜಾಗುವವು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...