Home / ಕವನ / ಕವಿತೆ / ಹಬ್ಬ

ಹಬ್ಬ

ಹುಟ್ಟೂರು
ಹೆತ್ತವರು, ಒಡಹುಟ್ಟಿದವರು, ನೆಂಟರಿಷ್ಟರ ಬಗ್ಗೆ ಮಾತಾಡುವಾಗ
ಹೊಟ್ಟೆ ತುಂಬಿದಂತಾಗುತ್ತೆ
ಹಿಟ್ಟು ಕಾರವನ್ನೇ ತಿಂದರೂ
ಒಂದ್ಸಾರಿ ನೋಡಿಕೊಂಡು ಬರಬೇಕೆನಿಸುತ್ತೆ
ಯಾವ ಕಾಲನೂ ಹೇಳಬೇಡ ಮಹಾನವಮಿ ಕಾಲವೊಂದು
ಬಿಟ್ಟ ಮೇಲೆ

ದಿಣ್ಣೆ, ದೀಪಾಂತರ ತುಂಬಾ
ಆಸೆಯೆ ಆಕಾರ ತಳೆದಂತೆ ಬೆಳೆದ
ಹೂಪೀಸು, ವಡೆತಲೆಯ ಫಲ ಪೈರು
ಗಾಳಿಗೆ ತೊನೆದಾಡುತ್ತಿರುವಾಗ
ಬಯಲಾದ ಬಯಲೆಲ್ಲಾ ಸಂಗೀತ ನೃತ್ಯದಲ್ಲಿ ತೇಲುವುದು,

ದೊಡ್ಡವಳು ತಾಯಿ ಗಂಗಮ್ಮ ಕೃಪೆಮಾಡಿ ಬಂದು
ನೆರೆ ತೊರೆ ಹಳ್ಳ ಕೊಳ್ಳಗಳಲ್ಲಿ ಅತ್ತಿತ್ತ ಆಡ್ಡಾಡುವ
ಕೆರೆ ಕಟ್ಟೆಗಳಲ್ಲಿ ವಿಶ್ರಾಂತಿ ಪಡೆಯುವ
ಬೆಟ್ಟ ಗುಡ್ಡಗಳ ನೆತ್ತಿಯನ್ನು ಜಾರುಬಂಡಿ ಮಾಡಿಕೊಂಡು
ಆಟವಾಡುವ ದೃಶ್ಯ
ಕಣ್ಣಿಗೆ ಬೀಳಲು ಪುಣ್ಯ ಮಾಡಿರಬೇಕು.
ಸರ್ತಿ ಸರ್ತಿಗೆ ಬರುವ ಈ ಹಿರಿಯರ ಹಬ್ಬಕ್ಕೆ ಕರೆಯದಿದ್ದರೂ
ನಿಲ್ಲಲಾರೆ

ಗಂಡ ಮಕ್ಕಳ ಕೂಡಿಕೊಂಡು
ಪುಟ್ಟ ಮೆರವಣಿಗೆಯಲ್ಲಿ ಸಾಗಿ ಬರುವೆ
ಜೀವನಾ ದ್ರವ್ಯವನು ಕೂಡಿಸಿ ಕೊಳ್ಳುವೆನು
ದೂರದಲ್ಲಿರುವಾಗಲೇ ಕೂನು ಹಿಡಿದ ಚಿಕ್ಕವರು
ಓಡೋಡಿ ಬಂದು
ಅತ್ತೆ, ಮಾವ ಬಂದರೆಂದು ಡಂಗುರ ಸಾರುವುದು
ಹಿರಿಯರು, ಎಲ್ಲರೂ ಬಾಗಿಲಿಗೆ ಬಂದು
ಉಲ್ಲಾಸದ ನಗೆಯಲ್ಲಿ ಸ್ವಾಗತದ ಸೆಳೇವು ನೀಡುವುದು
ಜೀವನದಿ ಮರೆಯಲಾಗದ ಸುಖಾನುಭವವ ತರುವುದು.

ಊಟ ಉಪಚಾರ ಮುಗಿದು
ಎರಡೂ ಕಡೆಯ ಮಕ್ಕಳ ಪ್ರತಿಭಾ ಪಾಠಗಳ ವರದಿಯ ಜೊತೆಜೊತೆಗೆ
ಪರಸ್ಪರ ಸುಖ ಸಂಕಥಾ, ಆಮೋದ ಪ್ರಮೋದದ ನೆರಿಕೆಯಲ್ಲಿ
ಇಣುಕುವಾಗ

ಮಾತಿಗೆ ನೂರು ಮುಖವಾಗಿ
ಸರಿಹೊತ್ತಾದರೂ ಕೊಡುಹ ಮುಗಿಯುವುದಿಲ್ಲ
ಒಬ್ಬೊಬ್ಬರೆ ನೆಂಟರು ಬಂದು ಸೇರಿದ ಹಾಗೆ ಉದ್ದುದ್ದ ಬೆಳೆವುದು
ಹಬ್ಬವೇ ಮುಗಿದು ಊರಿಗೆ ಹೊರಟು ಅರ್ಧ ದಾರಿಗೆ ಬಂದರೂ
ಮುಗಿಯುವ ಲಕ್ಷಣ ಕಣುವುದಿಲ್ಲ.

ಬಿಡುವಾಗಿ ಊರು, ಹೊಲಗಳ ಸುತ್ತ
ಒಂದು ಸುತ್ತು ಹಾಕಿ ಬರುವಾಗ
ಬಾಲ್ಯವು ಮರುಕಳಿಸುವುದು
ಎಲ್ಲಾ ಮುಗಿದು ಹೊರಟು ನಿಂತಾಗ
ಕ್ಷಣ ಕಾಲ
ಎಂದಿನಂತೆ ಕಣ್ಣು ಮಂಜಾಗುವವು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...