Home / ಕವನ / ಕವಿತೆ / ಅಮಾನುಷ

ಅಮಾನುಷ

ದೇವರು, ಧರ್ಮವೆಂದರೆ ಸಾಕು
ಶಾಕಿನಿ, ಢಾಕಿನಿ ಪಿಶಾಚಿಗಳಾಗುವರು
ಮನುಷ್ಯರನ್ನು ಹೆಣ್ಣು, ಗಂಡನ್ನದೆ, ಶಿಶುಗಳನ್ನೂ ಬಿಡದೆ
ಜೀವದಲ್ಲಿದ್ದಂತೆಯೇ
ಹಸಿ ಹಸಿ ಮಾಂಸ, ಖಂಡಗಳನ್ನು ಹರಿಹರಿದು ಜಗಿಯುತ್ತ
ಬಿಸಿ, ಬಿಸಿ ರಕ್ತವನ್ನು ಗಟ ಗಟ ಕುಡಿಯುತ್ತ
ಮೂಳೆಗಳನ್ನು ಕಟ ಕಟ ಕಡಿಯುತ್ತ
ಭಯಂಕರ ಉನ್ಮಾದದ ನಗೆ ನಗುತ್ತ
ಹೃದಯ ವಿಜ್ರಾವಕವಾಗಿ ಕಿರಿಚುತ್ತ
ಪ್ರಳಯದ ಕುಣಿತದಲ್ಲಿ ತೊಡಗುವರು.

ನಾನಾ ಕಾರಣಗಳಿಗಾಗಿ
ಇವರ ಸುಲಭ ತುತ್ತಾಗುವರು
ಪ್ರೀತಿ ಪಾತ್ರರಾಗುವವರೆಂದರೆ ಹೆಂಗಸರು, ಮಕ್ಕಳು.

ಮಕ್ಕಳ ಒಂದೊಂದೇ ಎಳೆಯ ಭಾಗವನ್ನು
ಕತ್ತರಿಸಿ, ಕತ್ತರಿಸಿ,
ವಿಕೃತ ಭಕ್ತಿಯಲ್ಲಿ,
ಬಹು ಅಕ್ಕರೆಯಿಂದ,
ನಿಧಾನವಾಗಿ, ವಿಧಿಪೂರ್ವಕವಾಗಿ ನೈವೇದ್ಯ ಮಾಡುವರು
ಪ್ರಸಾದವೆಂದು ಕಣ್ಣಿಗೊತ್ತಿಕೊಂಡು
ಚಿಗುರೆಲೆಯಂತೆ ಮೆಲ್ಲುವರು
ಕೆಟ್ಟ ಪ್ರೀತಿ ಹೊಂದುವರು.

ಹೆಂಗಸನ್ನು, ಅದರಲ್ಲೂ ಗಂಡ ಸತ್ತವಳನ್ನು
ಅವಳದೆಲ್ಲವನ್ನೂ ಕಾಲಕಸ ಮಾಡಿ
ಕೊರಡುಮಾಡಿ,
ಸ್ವರ್ಗಾರೋಹಣ ಮಾಡಿಸುವೆನೆಂದು
ಸತ್ತವನ ಜೊತೆಗೆ ಸಿದಿಗೆ ಬದಿಗೆಗೆ ಕಟ್ಟಿ
ಸಕಲ ಭಾಜಾ ಭಜಂತ್ರಿಯಲ್ಲಿ
ಅಮಾನುಷ ಮಂತ್ರ, ಘೋಷಣೆಗಳ ಒದರುತ್ತ
ದುರ್ವ್ಯಕ್ತಿಗಳು ಮೆರವಣಿಗೆಯಲ್ಲಿ ಹೊತ್ತು ತಂದು
ವಾಸನೆ ಬರದಿರಲೆಂದು
ಸುವಾಸನಾ ಕಟ್ಟಿಗೆಗಳಿಂದ ನಿರ್ಮಿಸಿದ ಚಿತೆಯ ಮೇಲಿಟ್ಟು
ಕೆಂಪು ಕಣಿಗಲೆ ಹೂವುಗಳಲ್ಲಿ ಅರ್ಚಿಸಿ,
ಸತ್ತವರ ಅಪೂರ್ವ ಮೌನ ಗೋಷ್ಠಿಯಲ್ಲಿ
ಯಮ ಕಿಂಕರರ ಕಾವಲಿನಲ್ಲಿ
ಪೆಟ್ರೋಲ್ ಸುರಿದು ಧಗ್ಗನೆ ಉರಿ ಹೊತ್ತಿಸಿ
ಚಿಟಿಲ್, ಚಿಟಿಲ್ ಅಂತ ಉರಿ ಧಗ, ಧಗ ಉರಿಯುತ್ತಿದ್ದರೆ
ಇವರಿಗೆ ಎಲ್ಲಿಲ್ಲದ ಹುರುಪು
ಆ ಪಾಪದ ಹೆಣ್ಣು ಮಗಳು ಉರಿ, ಸಂಕಟ ತಾಳಲಾರದೆ
ಕಿರಿಚಾಡುವುದನ್ನು, ಒದರಾಡುವುದನ್ನು
ಸುಮ್ಮನೆ ಕಣ್ಣು ಬಿಟ್ಟು ಕೊಂಡು ನೋಡುತ್ತ
ಜೈ, ಜೈ ಕಾರ ಹಾಕುತ್ತಿರುತ್ತಾರೆ.
ಅವಳು ಪೂರ್ಣವಾಗಿ ಸುಟ್ಟು ಬೂದಿಯಾಗಿ
ಅದು ತಣ್ಣಗಾಗಿ ಆರುವವರೆವಿಗೆ
ಆ ಕಾಲಿನ ಭಾರ ಈ ಕಾಲಿಗೆ ವರ್ಗಾಯಿಸದಂತೆ
ಕಾದಿರುತ್ತಾರೆ.

ನಂತರ, ಪ್ರೇತ ಗೀತೆ ಹಾಡುತ್ತ, ಹೆಜ್ಜೆ ಹಾಕುತ್ತ
ಪ್ರದಕ್ಷಿಣೆ ಬಂದು
ಅಮಾನವೀಯ ಧನ್ಯತೆಯ ಕುರುಹಾಗಿ
ಆ ಚಿತಾ ಭಸ್ಮವನ್ನು ಮಸ್ತಕಗಳಲ್ಲಿ ಧರಿಸುವವರು ಯಾರೋ!
ಉಡಿಗಳಲ್ಲಿ ತುಂಬಿ ಕೊಳ್ಳುವವರು ಯಾರೋ!
ಭವಿಷ್ಯ ವಿರದವರ ಕೆಟ್ಟ ಸಡಗರವ
ನೋಡ ಬಾರದು!!
ಈ ಮನುಷ್ಯರು ಒಳ್ಳೆಯದಕ್ಕೆಂದರೆ ತಲೆ ಹೊಯ್ದರೂ
ಮುಂದೆ ಬರುವುದಿಲ್ಲ.
ಇಂತಹುದಕ್ಕಾದರೆ ನೀನ ಕರಿ ಬೇಡ ಹಿಂಡು, ಹಿಂಡು ಬರುತ್ತಾರಲ್ಲಾ
ಏನಿದು!
ಥೂ!! ಇಂತಾ ಜನ್ಮ ಏಳೇಳು ಜನ್ಮಕ್ಕೂ… ಕೊಟ್ಟರೂ…
ನನಗೆ ಬೇಡ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...