Home / ಲೇಖನ / ವಿಜ್ಞಾನ / ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಅನೇಕ ವನಸ್ಪತಿಗಳಿಂದ, ಆಹಾರಬೆಳೆಗಳಿಂದ ಎಣ್ಣೆಯನ್ನು ತಯಾರಿಸಿ ಔಷಧಿ ರೂಪದಲ್ಲಿಯೂ, ಆಹಾರದಲ್ಲಿಯೂ ಬಳೆಸಲಾಗುತ್ತದೆ. ಇದೀಗ ಹೊಂಗೆ ಮರದ ಬೀಜದಿಂದ, ಬೇವಿನ ಮರದ ಬೀಜದಿಂದ ಉತ್ಪಾದಿಸಲ್ಪಟ್ಟ ಎಣ್ಣೆಗಳಿಂದ ಯಂತ್ರಗಳನ್ನು ನಡೆಸಬಹುದೆಂದು ಭಾರತೀಯ ವಿಜ್ಞಾನ ಸಂಸ್ಥೆಯ ಅಂಗಸಂಸ್ಥೆಯಾದ ‘ಸೂತ್ರ’ವು ಕಂಡು ಹಿಡಿದಿದೆ. ಇದರಿಂದ ಮುಂದೊಂದು ದಿನ ವಿದೇಶಿ ಡಿಜಲ್ ಬರದಾಗುತ್ತದೆ ಮತ್ತು ಡಿಜರ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಈ ಎಣ್ಣೆಗಳನ್ನೇ ಬಳೆಸುವ ಕಾಲ ಬರಬಹುದು. ಒಂದು ಕೆ.ಜಿ. ಹೊಂಗೆ ಎಣ್ಣೆ ಅಥವಾ ಬೇವಿನ ಎಣ್ಣೆಯ ಉತ್ವಾದನೆಗೆ ೪ ಕೆ.ಜಿ. ಬೀಜಬೇಕಾಗುತ್ತದಷ್ಟೆ. ಡಿಜಲ್ ಯಂತ್ರಗಳಿಗೆ ವಾಹನಗಳಿಗೆ ಈ ಎಣ್ಣೆಯನ್ನು ಬಳೆಸಬಹುದು ಎಂದು ಕಂಡು ಹಿಡಿಯಲಾಗಿದೆ. ಈಗಾಗಲೇ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ವಿದ್ಯುತ್ ಉತ್ಪಾದಿಸಲು ಪ್ರಯೋಗಿಕವಾಗಿ ಈ ಎಣ್ಣೆಯನ್ನು ಬಳೆಸಲಾಗುತ್ತದೆ. ದಿನದಿನವೂ ಹೆಚ್ಚುತ್ತಿರುವ ಡಿಜಲ್ ಬೆಲೆಯ ದುಬಾರಿ ದರದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಈ ಸಂಸ್ಕರಿಸಿದ ಹೊಂಗೆ, ಅಥವಾ ಬೇವಿನ ಎಣ್ಣೆಯನ್ನು ಯಂತ್ರಗಳಿಗೆ ಬಳಸಿ ಸಮಸ್ಯೆಗಳನ್ನು ಪರಿಸರಿಸಿಕೊಳ್ಳಬಹುದು.

ಈ ಎರಡು ತರಹದ ಎಣ್ಣೆ ತೆಗೆಯುವುದರಿಂದ ಬಹಳ ಉಪಯೋಗವು ಕೂಡ ಇರುತ್ತದೆ. ಈ ಎಣ್ಣೆ ತೆಗೆದ ನಂತರ ಇವುಗಳ ಹಿಂಡಿಯನ್ನು ರೈತರು ತಮ್ಮ ತೆಂಗು, ಅಡಿಕೆ, ಬಾಳೆ ತೋಟಗಳಿಗೆ, ಗದ್ದೆಗಳಿಗೆ ಗೊಬ್ಬರವನ್ನಾಗಿಯೂ ಸಹ ಬಳಸಬಹುದು. ಇದರಿಂದ ಭೂಮಿಯ ಫಲವತ್ತತೆಯೂ ಹೆಚ್ಚಾಗುವುದರ ಜತೆಗೆ ಗಿಡಗಳಿಗೆ ಯಾವುದೇ ರೋಗ ರುಜೀನಗಳು ಬರುವುದಿಲ್ಲ ಮತ್ತು ಹೆಚ್ಚು ಇಳುವರಿಯೂ ಕೂಡ ಬರುತ್ತದೆ. ಇಂಥಹ ಸಾಹಸವನ್ನು ರೈತರು ಯತೇಚ್ಛೆವಾಗಿ ಮಾಡಿ ಮಾದರಿ ಕೃಷಿಕರಾಗಬಹುದು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...