Home / ಲೇಖನ / ವಿಜ್ಞಾನ / ತಂಬಾಕಿನ ‘ನಿಕೋಟಿನ್’ನಿಂದ ಸಸ್ಯಗಳ ರೋಗ ನಿವಾರಕ ಔಷಧಿ

ತಂಬಾಕಿನ ‘ನಿಕೋಟಿನ್’ನಿಂದ ಸಸ್ಯಗಳ ರೋಗ ನಿವಾರಕ ಔಷಧಿ

‘ತಂಬಾಕು’ ಭಾರತದ ವಾಣಿಜ್ಯ ಬೆಳೆಯಾಗಿದ್ದು, “ನಿಕೋಟಿಯಾನ್ ಟಿಬ್ಯಾತಮ್” ಎಂಬ ಸಸ್ಯವರ್ಗಕ್ಕೆ ಸೇರಿದೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇದನ್ನು ಹೆಚ್ಚಾಗಿ ಬೆಳೆಯುತ್ತಾರೆ. ಇದರ ಸೇವನೆ ಆರೋಗ್ಯಕ್ಕೆ ಹಾನಿಕರ, ಎಂದು ವೈದ್ಯಕೀಯವಾಗಿ ದೃಧೀಕರಿಸಿದೆಯಾದರೂ ಈ ವ್ಯಾಮೋಹದಿಂದ ಬಹಳಜನ ಹೊರಬರಲಾಗಿಲ್ಲ.

ತಂಬಾಕಿನಲ್ಲಿರುವ ‘ನಿಕೋಟಿನ್’ ಅಪಾಯಕಾರಿ ವಿಷವಾಗಿದ್ದು ಇದರ ಅರ್ಧ ಹನಿಯನ್ನು ಸೇವಿಸಿದರೆ ಮನುಷ್ಯನ ಪ್ರಾಣವೇ ಹೋಗಬಹುದು. ಈ ನಿಕೋಟಿನ್ ಜತೆಗೆ ಪರ್ಘರಾತ್, ಪೈರಿಡಿನ್, ಅವೋನಿಯಾ, ಆಲ್ಡಿಹೈಡ್, ಎಂಬ ವಿಷಕಾರಕ ವಸ್ತುಗಳು ಈ ತಂಬಾಕಿನಲ್ಲಿವೆ. ಇಂಥಹ ಅಪಾಯಕಾರಕ ತಂಬಾಕನ್ನು ನಮ್ಮ ವಿಜ್ಞಾನಿಗಳು ರೈತನಿಗೆ ಉಪಯುಕ್ತವಾಗುವಂತೆ ೧೯೮೨ರಲ್ಲಿ ಸಂಶೋಧಿಸಿದ್ದಾರೆ. ರೈತನು ಬೆಳೆಯುವ ಈ ಸೊಪ್ಪು, ರೈತನ ಬೆಳೆಗಳನ್ನು ಹಾಳುಗೆಡುವ ಕೀಟಗಳನಾಶಕ್ಕೆ ಬಳಸಲಾಗುತ್ತದೆ. ಮತ್ತು ಇದು ಜನಪ್ರಿಯ ಕೀಟನಾಶಕವೂ ಕೂಡ ಆಗಿದೆ. ಈ ಕೀಟನಾಶಕವು ಬಿಳಿ ನೊಣ, ಸಸ್ಯ ಹೇನು, ಥ್ರಿಪ್ಸ್ ಮತು ನುಸಿಪೀಡೆಗಳ ನಿಯಂತ್ರಣಕ್ಕೆ ಹಾಗೂ ಅವುಗಳ ನಾಶಕ್ಕೆ ತುಂಬ ಉಪಕಾರಿಯಾಗಿದೆ. ತಂಬಾಕಿನಲ್ಲಿರುವ ‘ನಿಕೋಟಿನ್’ ಕೀಟನಾಶಕವು ಕೀಟಗಳ ಶ್ವಾಸನಳಿಕೆ, ತ್ವಚೆ ಮತ್ತು ಆಹಾರದ ಮೂಲಕ ದೇಹವನ್ನು ಒಳಸೇರಿ ಅವುಗಳ ನರಮಂಡಲದ ಕಾರ್ಯಚಟುವಟಿಕೆಯಲಿ ಏರುಪೇರುಂಟಾಗಿ ಅವು ಸಾಯುವಂತೆ ಮಾಡುತ್ತದೆ.

ಕೀಟನಾಶಕವನ್ನು ತಯಾರಿಸುವ ವಿಧಾನ : ಈ ಕ್ರಿಮಿನಾಶಕವನ್ನು ರೈತರು ಮನೆಯಲ್ಲಿಯೇ ತಯಾರಿಸಬಹುದಾಗಿದೆ. ಮೊದಲು ೧೦ ಲೀಟರ್ ನೀರು, ಒಂದು ಕೆ.ಜಿ. ಯಷ್ಟಾದ ತಾಜಾ ತಂಬಾಕಿನ ಎಲೆಗಳನ್ನು ತೆಗೆದುಕೊಳ್ಳಬೇಕು. ಈ ತಂಬಾಕಿನ ಎಲೆಗಳನ್ನು ಹತ್ತು ಲೀಟರ್ ನೀರನಲ್ಲಿ ಹಾಕಿ ಚೆನ್ನಾಗಿ ಕುದಿಸಬೇಕು. ನೀರಿನಲ್ಲಿ ಕುದಿಸಿ ಹದಗೊಂಡ ಎಲೆಗಳನ್ನು ಹಿಂಡಿ ಕಷಾಯ ತಯಾರಿಸಬೇಕು ಈ ಕಷಾಯಕ್ಕೆ ಪುನಹ ೧೦ ಲೀಟರ್ ನೀರನ್ನು ಸೇರಿಸಿ ಚನ್ನಾಗಿ ಕಲಕಬೇಕು. ಈ ಕಷಾಯವು ಚನ್ನಾಗಿ ಕೆಲಸ ಮಾಡಲು ಹಾಗೂ ಬೆಳಗಳ ಮೇಲೆ ಸರಿಯಾಗಿ ಹರಡಲು ಸಿಂಪಡಿಸುವ ಮುನ್ನ ಕಷಾಯಕ್ಕೆ ೧೦೦ ಗ್ರಾಂ ಸಾಬೂನಿನ (ಸೋಪಿನ ಪುಡಿ) ಪುಡಿಯನ್ನು ಸೇರಿಸಬೇಕು. ಇದು ಮಾರುಕಟ್ಟೆಯಲ್ಲಿ ಪುಡಿರೂಪದಲ್ಲಿ ಹಾಗೂ ದ್ರವ ರೂಪದಲಿ ದೊರೆಯುತ್ತದೆ. ‘ನಿಕೋಟಿನ್’ ಪುಡಿಯನ್ನು ಸಸ್ಯಗಳ ಮೇಲೆ ಸಿಂಪಡಿಸಿದಾಗ ಅದು ವಾತಾವರಣದಲ್ಲಿರುವ ತೇವಾಂಶದೊಡನೆ ಬೆರೆತು ‘ನಿಕೋಟಿನ್’ ಎಂಬ ವಿಷ ವಸ್ತುವನ್ನು ಬಿಡುಗಡೆ ಮಾಡಿ ಕೀಟಗಳು ನಾಶವಾಗುತ್ತವೆ. ದ್ರವರೂಪದ ತಂಬಾಕನ್ನು ಸಿಂಪಡಿಸುವಾಗ ಸುಣ್ಣ ಅಥವಾ ಸಾಬೂನಿನ ಪುಡಿಯನ್ನು ಮಿಶ್ರಮಾಡಿ ಚನ್ನಾಗಿ ಕಲಿಸಿ ಸಿಂಪಡಿಸಬೇಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...