Home / ಕವನ / ಕವಿತೆ / ನನಗೆ ಮಾತನಾಡಲು ಬಿಡಿ

ನನಗೆ ಮಾತನಾಡಲು ಬಿಡಿ

ನನ್ನ ಬಂಧುಗಳೇ,
ನಾನು ತಲೆಯೆತ್ತಿ ನಡೆದರೆ,
ನಿಮಗೆ ಅಹಂಕಾರಿಯಂತೆ ಕಾಣುವೆನು

ತಲೆ ಬಗ್ಗಿಸಿ ನಡೆದರೆ,
ಅಬಲೆ, ಅಪರಾಧಿಯಂತೆ ಕಾಣುವೆನು.
ಮೌನವಾಗಿದ್ದರೆ ಮೂಕಿ, ಎನ್ನುವಿರಿ.
ಮಾತನಾಡಿದರೆ ವಾಚಾಳಿ ಎನ್ನುವಿರಿ.
ಹೇಳಿ ನಾನು ಹೇಗೆ ನಡೆದುಕೊಳ್ಳಲಿ ?

ನಿಮ್ಮ ಈ ಅಪಮಾನವನ್ನು ನಾನು
ಎಲ್ಲಿಯವರಿಗೆ ಸಹಿಸಲಿ? ನೀವೇ ಹೇಳಿ.
ಎಲ್ಲಿಯವರೆಗೆ ಎದೆಯಲಿ ಸಹಿಸುವ
ಜ್ವಾಲೆಯನ್ನು ಸಹಿಸಿಕೊಂಡಿರಲಿ?
ಹೇಳಿ? ನೀವೇ ಹೇಳಿ ಬಂಧುಗಳೇ.

ಎಲ್ಲಿಯವರೆಗೆ ನಾನು ನಿಮ್ಮ
ಮಾರಾಟದ ಸರಕುಗಳಿಗೆ
ವಿಜ್ಞಾಪನಾ ವಸ್ತುವಾಗಿರಲಿ?
ಎಲ್ಲ ಸ್ತ್ರೀಯ ಸೌಂದರ್ಯದ ಹಿಂದೆ
ಒಂದಿಲ್ಲೊಂದು ರಹಸ್ಯವಿದೆಯೆಂದು ಹೇಳುವಿರಿ,
ಅದುವೇ ನಿಮ್ಮ “ಫೌಂಡೇಶನ್ ಕ್ರೀಮ್”
ಎಂದು ಪ್ರಚಾರ ಗಿಟ್ಟಿಸುವಿರಿ.
ಹೇಳಿ ನಾನು ಎಲ್ಲಿಯವರೆಗೆ
ಅಗ್ಗದ ಪ್ರಚಾರ ಮಾಧ್ಯಮವಾಗಿರಲಿ?
ಎಲ್ಲಿಯವರೆಗೆ ನೀವು ಸೃಷ್ಟಿಸಿದ
“ಮಿಥಿಕ್” ಬಂಧಿಯಾಗಿರಲಿ?
ಹೇಳಿ ಬಂಧುಗಳೇ ನೀವೇ ಹೇಳಿ.

ನಾನು ಎಲ್ಲಿಯವರೆಗೆ
ನಿಮ್ಮ ಮನೋರಂಜನೆಯ
ಮಾಧ್ಯಮವಾಗಿರಲಿ?
ಹೆಣ್ಣು ದೇವತೆಯೆಂದು ಹೇಳುವಿರಿ.
ಮತ್ತೇ ಅವಳ ವ್ಯಾಪಾರ ಮಾಡುವಿರಿ,
ಇಂತಹ ನಿಮ್ಮ ಭೋಗ ಸಂಸ್ಕೃತಿಯನ್ನು
ಕಂಡ ನಾನು ಇದನ್ನು
ಉಚ್ಚ ಸಂಸ್ಕೃತಿಯೆಂದು
ಹೇಗೆ ಹೇಳಲಿ?
ನೀವೇ ಹೇಳಿ ಬಂಧುಗಳೇ,
ನೀವೇ ಹೇಳಿ,
ಇಲ್ಲ ನೀವು, ಹೇಳುವದಿಲ್ಲ.
ಅದಕ್ಕೆ-
ನಾನೀಗ ಸುಮ್ಮನಿರಲಾರೆ,
ನನ್ನ ಬಾಯಿಯನ್ನು
ಸಂಪ್ರದಾಯಗಳ ಬೇಡಿಯಿಂದ
ಬಿಗಿಯಬೇಡಿ.
ನನಗೆ ಮಾತನಾಡಲು ಬಿಡಿ.

ಶತಮಾನಗಳ
ಭಯಂಕರ ಮೌನವನು
ಮುರಿದು ಮಾತನಾಡಲೇಬೇಕು.
ಬದುಕಿಯೂ ಸತ್ತಂತಿರುವ
ಕ್ರೂರ ಬದುಕನು ಬಹಿಷ್ಕರಿಸಿ
ಬಯಲಿಗೆ ಬರಲೇಬೇಕು.

ಬಿಟ್ಟುಬಿಡಿ ನನ್ನ ಬಂಧಿಸಬೇಡಿ
ನಿಮ್ಮ ಕ್ರೂರ ಕೈಗಳಿಂದ.
ಮೂಕ ಬದುಕನು ಬಿಟ್ಟು
ನಾನು ಮಾತನಾಡಲೇಬೇಕು.
ಸಂಘರ್ಷದ ಹಾದಿಯಲ್ಲಿ ಸಾಗಲೇಬೇಕು
ಬಿಟ್ಟುಬಿಡಿ ನನ್ನ ಬಂಧಿಸಬೇಡಿ
ಸಂಪ್ರದಾಯಗಳ ಶೈಯಿಲೆಯಿಂದ
ಬಿಟ್ಟು ಬಿಡಿ ನನ್ನ ಬಿಟ್ಟು ಬಿಡಿ
ನನಗೆ ವಾತನಾಡಲು ಬಿಡಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...