Home / ಕವನ / ಕವಿತೆ / ಬಿಡುಗಡೆಯ ಕವಿತೆ

ಬಿಡುಗಡೆಯ ಕವಿತೆ

ಹೆಣ್ಣಾಗಿ ಹುಟ್ಟಿದೆನೆಂದು
ಹಣೆಬರಹಕೆ ಹಳಿಯದಿರು,
ನಿನ್ನ ತುಳಿದವರು
ನಾಚಿ ನೀರಾಗುವ ಕಾಲ
ದೂರವಿಲ್ಲ ಕೇಳು.

ಮನು ಮಹಾಶಯರ
ಧರ್ಮ ಶಾಸ್ತ್ರಗಳ ಹೊತ್ತು
ಗೊಡ್ಡು ವಿಚಾರಗಳಿಗೆ ತಲೆಕೊಟ್ಟು
ಕೆರೆ-ಬಾವಿಗಳಿಗೆ
ಹಾರವಾಗುವದ ನಿಲ್ಲಿಸು,

ತುಂಬಿದ ಸಭೆಯಲ್ಲಿ
ಅಸಹಾಯಕಳಾಗಿ ನಿಂತು
ಸೀರೆಯನು ಸೆಳಸಿಕೊಳ್ಳುತ್ತ
ಅವಮಾನದ ಬೆಂಕಿಯಲಿ
ಬೇಯುವದ ನಿಲ್ಲಿಸು.

ಸಂಶಯದ ಸುಳಿಗೆ ಸಿಕ್ಕು
ಅಗ್ನಿ ಪರೀಕ್ಷೆಗೆ ಮೈಯೊಡ್ಡಿ
ಶೀಲವನ್ನು ಶಂಕಿಸಿಕೊಳ್ಳುವ
ಸೀತೆಯಾಗುವದ ನಿಲ್ಲಿಸು.

ಹೃದಯಹೀನರ ಸಂತೆಯಲಿ
ಕೇವಲ ವಸ್ತುವಾಗಿ,
ಹೊಡೆತಕ್ಕೆ ಮೈಕೊಟ್ಟು,
ಒಳಗೊಳಗೇ ರೋದಿಸುವ
ಕಪ್ಪು ಕತ್ತಲೆ ಕೋಣೆಗೆ
ಕೈದಿಯಾಗುವುದ ನಿಲ್ಲಿಸು.

ನಿನ್ನೊಡಲ ತುಂಬ
ಈಡೇರದೇ ಬಿಕ್ಕುತಿಹ
ಸತ್ತಬಯಕೆಗಳ ಚೀತ್ಕಾರ
ಸಂಪ್ರದಾಯಗಳ ಕಪ್ಪು ಹೊಗೆ
ದಟ್ಟ ನೋವಿನ ಛಾಯೆಗೆ
ಧ್ವನಿಯ ನೀಡು.

ನಾನು, ನೀನು, ಸೀತೆ
ಮತ್ತೆ ದೌಪದಿ
ಎಲ್ಲರೂ ನೊಂದವರು,
ದಾಸ್ಯದ ಕೊಂಡಿ ಕಳಚಿ
ಹೊರಗೆ ಬಾ ಗೆಳತಿ,

ಕೈಗೆ ಕೈ ಕೂಡಿಸು
ನವಚೇತನ ನಮ್ಮದು
ಬದುಕಿನ ಹೋರಾಟ
ಮುಗಿಯಲಿಲ್ಲ ಗೆಳತಿ
ಮುಗಿಯಲಿಲ್ಲವೋ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...