Home / ಕವನ / ಕವಿತೆ / ರೇಷ್ಮೆ ಹುಳಗಳು

ರೇಷ್ಮೆ ಹುಳಗಳು

ದುಷ್ಟ ಗಂಗೋತ್ರಿಗೆ
ಗಂಡಂದಿರ ಬಲಿ ಕೊಟ್ಟ
ನಿಮಗೆ ಮುಂಡೆಯರ
ಪಟ್ಟವೇ ಗಟ್ಟಿಯಾಯಿತೇನು?

ಉಕ್ಕಿ ಬಂದ ನಿಮ್ಮ ಹರೆಯ
ಅಂತರಂಗದಲೇ ಹಿಂಗಿತೇನು?
ಮೆಟ್ಟಿಬಂದ ಕಣ್ಣೀರು
ಗೊಂಡಾರಣ್ಯದ ಗೂಢಕ್ಕಿಳಿದು
ಗಟ್ಟಿ ಘನವಾಯಿತೇನು?

ಸಿಡಿದು ಹೋದ ಕನಸುಗಳು
ಕಡಲಾಚೆಯ ನೋವುಗಳು
ಬೆಂಕಿಯಿಲ್ಲ ಕಿಡಿಯಿಲ್ಲ
ಬರೀ ಬೂದಿಯ ಗೂಡುಗಳು.

ಒಡೆದು ಹೋದ ಕನ್ನಡಿಯಲ್ಲಿ
ಛಿದ್ರಗೊಂಡ ಕನಸುಗಳನು
ಬದುಕಿನ ಮುಸ್ಸಂಜೆಯಲಿ
ಮತ್ತೆ ಹೇಗೆ ಸಂಧಿಸುವಿರಿ?

ಬಯಕೆಗಳ ಗೋರಿಯ ಮೇಲೆ
ತೃಪ್ತಿಯ ಮುಖವಾಡವನು
ಎಲ್ಲಿಯತನಕ ಧರಿಸುವಿರಿ?
ವಿಧವೆಯ ಹಣೆಪಟ್ಟಿ ಹೊತ್ತು
ಎಲ್ಲಿಯವರೆಗೆ ನರಳುವಿರಿ?

ಕೋಗಿಲೆಯ ಕತ್ತನು
ಹಿಸುಕುವ ನಿಮ್ಮ ವಸಂತಗಳು
ಚೈತ್ರದ ಚಿಗುರುಗಳು
ಕಮರಿದ ಆಸೆಗಳು
ಬಣ್ಣ ಕಳೆದುಕೊಂಡು
ಬರಡಾದ ಚಿತ್ರಗಳು

ನಿಮ್ಮಾಳದಲ್ಲಿ ಬೇರುಬಿಟ್ಟ
ಬಿಳಲುಗಳ ಬೊಡ್ದೆಗಳಿಗೆ
ಅಲುಗಾಡಿಸಲಾರದೇ ಏದುಸಿರು ಬಿಡುತ್ತ
ಎಲ್ಲಿಯವರೆಗೆ ಜೋತು ಬೀಳುವಿರಿ?

ಅಂತಸ್ತುಗಳ ಅಂಕುಶದಡಿಯಲಿ
ಅಧೀರವಾಗಿ ಅಂಕೆ ತಪ್ಪುವ
ನಿಮ್ಮ ಅತೃಪ್ತ ಆತ್ಮಗಳು
ಗೂಡಿನಲ್ಲಿಯೇ ಕೊನೆಗಾಣುವ
ರೇಷ್ಮೆಯ ಹುಳಗಳು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...