Home / ಕವನ / ಕವಿತೆ / ಮುಮ್ತಾಜಳ ಮಹಲು

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನ್ನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಇಮಾರತ್ತು ಕಟ್ಟಿಸಿ,
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು
ಆದರೆ ನನ್ನ ಪ್ರೀಯತಮನ
ಹೃದಯಲೇ ಕಟ್ಟಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್.

ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು-
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್ಪದ ಮೊಹರುಗಳು ಕಂಡಾವು.
ಮುಮ್ತಾಜ್ ಯಮುನೆಯ
ತೀರದಲ್ಲೊಮ್ಮೆ ನಿಂತು
ಕಣ್ಬಿಟ್ಟು ನೋಡಿದರೆ ನಿನಗೆ
ವೀರ ಸೈನಿಕರ ರಕ್ತದಿಂದ
ತಿಳಿಜಲದ ಯಮುನೆ
ಕೆಂಪಾದುದ ಕಂಡೀತು.

ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಎನೆಂದು
ಎಲ್ಲರಿಗೂ ಗೊತ್ತು.
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲ್ಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೇಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡಶಿಲ್ಪಿಗಳ ಆಕ್ರಂದನಗಳೆಷ್ಟೋ
ಹೆಪ್ಪುಗಟ್ಟಿದ ಅವರ ಕನಸುಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಸಹ ತಾಜಮಹಲಿನ
ಮಿನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಅಳಿದು ಹೋಗುತ್ತಿರುವ
ಗೋರಿಗಳಲ್ಲಿ ಗುಣುಗುಟ್ಟುತ್ತದೆ.
ನೂಪುರಗಳ ನುಣುಪಾದ
ಗೋಡೆಗಳಲ್ಲಿ ರಕ್ತಸಿಕ್ತವಾಗುತ್ತದೆ.

ನಿನ್ನ ಬಾದಶಹನ ಹೃದಯದಲ್ಲಿ
ನೀನೊಬ್ಬಳೇನೂ ಅಲ್ಲ
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲ್ಲಿ ಮೈಮರವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕಿಕತ್ತುಗಳಿಂದ
ಸುತ್ತುವರೆದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...