Home / ಕವನ / ಕವಿತೆ / ಸ್ವಾತಂತ್ರ ಗೀತೆ

ಸ್ವಾತಂತ್ರ ಗೀತೆ

ನನ್ನ ದೇಶದ ವಿಶಾಲ ಹೂದೋಟದಿಂದ
ವಿವಿಧ ಹೂಗಳ ಒಂದುಗೂಡಿಸಿ,
ಒಂದು ಹೂದಾನಿ ಅಲಂಕರಿಸಿ,
ಮೇಜಿನ ಮೇಲಿಟ್ಟು
ಜಗತ್ತಿಗೇ ತೋರಿಸಿ ಹೇಳಿದೆ-
ನೋಡಿ ಇಲ್ಲಿ ಕಾಶಿ, ಮಥುರಾ,
ಅಜಮೀರ, ಅಮೃತಸರ್
ಕಾಶ್ಮೀರ್, ಕನ್ಯಾಕುಮಾರಿಯ
ಸುಂದರ ಹೂಗಳಿವೆ-
ಮಂದಿರವೂ ಇಲ್ಲಿದೆ-
ಮಜ್ಜಿದವೂ ಇಲ್ಲಿದೆ ಮತ್ತೇ
ತಾಜಮಹಲಿನ ನೆರಳುಗಳೂ ಇಲ್ಲಿವೆ-
ಪೈಗಂಬರರ ಪರಿಛಾಯೆ-
ರಾಮನ ನಾಮವೂ ಇಲ್ಲಿದೆ
ಹಿಂದು-ಮುಸಲ್ಮಾನರಿಬ್ಬರೂ
ಭಾರತಾಂಬೆಯ ಎರಡು ಕಣ್ಣುಗಳು,
ಅವರ ರಕ್ತದ ಓಕುಳಿ
ಅಶುಭದ ಸಂಕೇತ;

ಉನ್ನತ ಹಿಮಾಲಯದ ಎತ್ತರ
ಜಗತ್ತಿನ ದೃಷ್ಟಿಯಲ್ಲಿ
ಕುಬ್ಜವಾಗಲೆಂದೂ ಬಿಡೆವು ನಾವು.
ಮಾನವೀಯ ಮೌಲ್ಯಗಳು
ನಾಶವಾಗುವದನೆಂದೂ ಸಹಿಸೆವು ನಾವು
ದೇಶದ ಸರಹದ್ದುಗಳಿಗೆ
ಮಮತೆಯಿಂದ ಚುಂಬಿಸಿ,
ಹರಡಿದ ನಮ್ಮ ಕನಸುಗಳನು
ಒಟ್ಟುಗೂಡಿಸುವೆವು ನಾವು.
ಪರದೇಶಿ ಹದ್ದುಗಳ ನೆರಳು
ಪವಿತ್ರ ಭಾರತದ ಮೇಲೆ
ಎಂದಿಗೂ ಸಹಿಸೆವು ನಾವು.

ಸ್ನೇಹದ ಹಸ್ತ ನೀಡದೇ
ಗುಲಾಮಿಯ ಕೋಳ ತೊಡಿಸುವ
ಸಾಮ್ರಾಜ್ಯ ಶಾಹಿಗಳ ನೀತಿಗೆ
ಪಾಠ ಕಲಿಸುವೆವು ನಾವು
ಗುಲಾಮಗಿರಿಯ ಕೊಳವನು,
ಕತ್ತರಿಸುವ ಖಡ್ಗವ ವಾಗುವೆವು ನಾವು.
ಭಾರತದ ಸ್ವತಂತ್ರ ಸೂರ್ಯನ
ಪ್ರಖರ ತೇಜಸ್ಸನ್ನು ಜಗತ್ತಿಗೇ
ತೆಗೆದು ತೋರುವೆವು ನಾವು.
ಸ್ವಾತಂತ್ರ ಗೀತೆಯನು
ಸಂಭ್ರಮದಿಂದ ಹಾಡುವೆವು ನಾವು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...