Home / ಲೇಖನ / ವಿಜ್ಞಾನ / ಕ್ರಿಮಿನಾಶಕಗಳು ನೆಲವನ್ನು ಜನವನ್ನು ಕೊಲ್ಲುತ್ತವೆ

ಕ್ರಿಮಿನಾಶಕಗಳು ನೆಲವನ್ನು ಜನವನ್ನು ಕೊಲ್ಲುತ್ತವೆ

ಇತ್ತೀಚಿನ ದಿನಗಳಲ್ಲಿ ಹೊಲಗದ್ದೆ ತೋಟಗಳಲ್ಲಿ ಬೆಳೆಯುವ ಬೆಳೆಗಳಿಗೆ ಏನೆಲ್ಲ ಜಾಡ್ಯಗಳು ತಗುಲಿಕೊಂಡು ಪೈರನ್ನು ನಾಶಪಡಿಸುತ್ತಿರುವುದು ಸರ್ವ ವೇದ್ಯ. ಈ ಬೆಳೆಗಳಿಗೆ ತಗುಲವ ಕೀಟಗಳ ಭಾದೆಗಳಿಂದ ಬೆಳೆಗಳನ್ನು ರಕ್ಷಿಸಲು ನಮ್ಮದೇಶಿ ಔಷಧಿಗಳು ಬೇಕಾದಷ್ಟು ಇದ್ದರೂ ಕೇವಾ ಸಮೃದ್ಧಿ ಮತ್ತು ಪ್ರತಿಷ್ಟೆಯಿಂದಾಗಿ ಬಹುರಾಷ್ಟ್ರೀಯ ಕಂಪನಿಗಳಿಂದ ತಯಾರಾದ ನಿಧಾನ ವಿಷಯುಕ್ತ ಔಷಧಿಯನ್ನು ಬಳೆಸುವುದರಲ್ಲಿ ಇತ್ತೀಚೆಗೆ ನಮ್ಮ ರೈತರು ದಾಪುಗಾಲು ಹಾಕುತ್ತಿದ್ದಾರೆ. ಕೇವಲ ಫಸಲನ್ನು ಹೆಚ್ಚು ಪಡಿಯುದರಲ್ಲಿ ಗಮನ ಹರಿಸಿದ್ದು ಭವಿಷ್ಯತ್ತಿನಲ್ಲಿ ಬೆಳೆ ಬೆಳೆಯುವ ಭೂಮಿಯೇ ಬಂಜರು ಆಗುತ್ತದೆಂಬ ಕಲ್ಪನೆ ಕೂಡ ಇರುವುದಿಲ್ಲ. ಶತಮಾನಗಳ ಅನುಭವ ಮತ್ತು ಜ್ಞಾನಗಳಿಂದ ರೂಪಿತಗೊಂಡ ಸಾಂಪ್ರದಾಯಿಕ ಸ್ವಾಭಾವಿಕ ಬೇಸಾಯ ಪದ್ಧತಿಗಳಿಂದ ಬಹುಮುಂದೆ ಓಡುತ್ತಿದ್ದಾನೆ ರೈತ ಪರಂಪರೆಗಳ ಮೌಲ್ಯಗಳಿಗೆ ತಿಲಾಂಜಲಿ ಇಕ್ಕಿದಾನೆ.

ಅತಿಬೇಗನೆ ಪರಿಣಾಮ ಬೀರುವ ರಾಸಾಯನಿಕ ಗೊಬ್ಬರಗಳು, ಔಷಧಗಳು ಅಸ್ವಾಭಾವಿಕ ತಳಿಗಳಿಂದಾಗಿ ತಲೆಮಾರುಗಳಿಂದ ಪರಿಪೂರ್ಣತೆ ಸಾಧಿಸಿದ ಕೃಷಿಪದ್ದತಿಗಳು, ತಳಿ ವೈವಿಧ್ಯತೆಗಳು ಇಂದು ಕಾಣದಂತಾಗಿವೆ. ಅತಿಯಾದ ರಸಗೊಬ್ಬರಗಳನ್ನು ಸಿಂಪಡಿಸುವುದರಿಂದ ಫಲಪ್ರದವಾದ ಭೂಮಿ ಪ್ರದೇಶವೆಲ್ಲ ಜಾಳು, ಕ್ಷಾರಗಳಿಲ್ಲದೇ ಹುಳಿ ಮಣ್ಣಾಗಿ ಪರಿವರ್ತನೆಗೊಂಡು ಕೃಷಿಗೆ ಅನುಕೂಲವಾದ ನೆಲ ಬರಡಾಗುತ್ತದೆ. ಬಂಜರವಾಗುತ್ತದೆ. ವರ್ಷಾನುಗಳಿಂದ ಸತತವಾಗಿ ಕೇವಲ ಪ್ರಧಾನ ಪೋಷಕಗಳ ಬಳಕೆಯಿಂದಾಗಿ ಭೂಮಿಯ ಸತ್ವವೆಲ್ಲ ಖಾಲಿಯಾಗಿ ಹೋಗಿದೆ. ಅಸಮತೋಲನ ರಾಸಾಯನಿಕಗಳ ಬಳಕೆಯಿಂದಾಗಿ ಬೆಳೆಯ ಪ್ರತಿರೋಧಕತೆ ಬಲಹೀನಗೊಂಡು ಆಹಾರದ ಪ್ರಮಾಣ ಮತ್ತು ಗುಣಮಟ್ಟದ ನಷ್ಟದಲ್ಲಿ ರೈತ ಇಂದು ಬಳಲುತ್ತಿದ್ದಾನೆ. ಮಣ್ಣಿನ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಗಳು ಊಹಿಸಲಾರದಷ್ಟು ಬದಲಾಗಿದ್ದು ನೈಸರ್ಗಿಕ ಸಾರಜನಕ ಸ್ಥೀರಿಕರಣ ಕ್ರಿಯೆ ಚಿಂದಿಯಾಗಿದೆ. ಪರಿಸರದ ಹಲವು ಸ್ವಾಭಾವಿಕ ಚಕ್ರಗಳು ಸಮರಸಗೊಳ್ಳುವಲ್ಲಿ ವಿಫಲವಾಗಿವೆ. ಕೃಷಿಯಲ್ಲಿನ ಜೀವ ವೈವಿಧ್ಯ ನಶಿಸಿ ಹೋಗಿದೆ. ಈ ರಸಗೊಬ್ಬರಗಳ ಪ್ರಭಾವದಿಂದಾಗಿ ಮಣ್ಣಿನ ಸಾವಯವ ವಸ್ತುಗಳು ಕ್ಷೀಣಿಸುವುದರ ಜತೆಗೆ ಜೈವಿಕ ಗುಣಗಳು ನಾಶಗೊಳ್ಳುತ್ತಿವೆ. ಆಮ್ಲಜನಕ ಮತ್ತು ತೇವಾಂಶ ಧಾರಣಶಕ್ತಿ ಕುಂದುತ್ತದೆ. ಅಂತರ್ಜಲ ಮಟ್ಟ ಕುಸಿಯುತ್ತದೆ. ಹಲವು ರಾಸಾಯನಿಕಗಳು ಬೆಳೆಯಿಂದ ಕೆಳಗೆ ಬಿದ್ದು ಹೆಚ್ಚಾಗಿ ಮಣ್ಣನ್ನು ಸೇರುವ ಸಂಭವವಿರುತ್ತದೆ. ಇವು ಮಣ್ಣಿನೊಳಗೆ ಇದ್ದು ಕೆಲವೊಮ್ಮೆ ಆಹಾರ ಸರಪಳಿಗೆ ಸೇರಿದ ಉದಾಹರಣೆಗಳು ಇಲ್ಲದಿಲ್ಲ. ಸಂಪೂರ್ಣ ಬೆಳೆಯ ರೋಗಗಳಿಗೆ ಬೀಳದೆ ಇರುವ D.D.T. ಯು ತಾಯಿಯ ಎದೆಹಾಲಿನಲ್ಲೂ ಕಾಣಿಸಿಕೊಳ್ಳಬಹುದು. ಶಿಶು ಮತ್ತು ಪಶು ಆರೋಗ್ಯದ ಮೇಲೆ ನೀರಿನಲ್ಲಿ ಬೆರೆತ ನೈಟ್ರೈಟ್, ವಿಷಯುಕ್ತತೆಗಳ ಪರಿಣಾಮಗಳ ಹಲವಾರು ಪ್ರದೇಶಗಳಿಂದ ದಾಖಲಾಗಿವೆ. ಮಾನವ, ಭೂಮಿ ಪರಿಸರದ ನಡುವೆ ಇರುವ ಸರಪಳಿಯ ಬಿಚ್ಚುವ ಕಾಲದೂರವಿಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...