Home / ಲೇಖನ / ವಿಜ್ಞಾನ / ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಕೀಟಗಳು

ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಕೀಟಗಳು

ಪ್ಲಾಸ್ಟಿಕ್ ಮಾಯೆ ಎಂಥಹ ಅಪಾಯಕಾರಿ ಎಂಬುವುದು ಎಲ್ಲರಿಗೂ ಗೊತ್ತು. ದನಕರುಗಳಿಗೆ ತೊಂದರೆ, ನೀರನ ಹರಿವಿಗೆ ತಡೆ, ಬೆಳೆಗಳ ಬೇರುಗಳಿಗೆ ತೊಂದರೆ ಅಲ್ಲದೇ ಇವುಗಳಿಂದ ಪರಿಸರಮಾಲಿನ್ಯ ಕೂಡಾ ಯತೆಚ್ಚೆವಾಗಿ ಆಗಿ ಮಾನವನಿಗೆ ಮಾರಕವಾಗುವ ವಿಷಯ ತಿಳಿದಿದೆ. ದನಗಳು ತಿಂದರೆ ಸತ್ತುಹೋಗುತ್ತವೆ, ಮನುಷ್ಯ ತಿಂದರೆ ಕರುಳನ್ನು ಸುತ್ತಿಸಿಕೊಂಡು ಮರಣ ಅಪ್ಪುತ್ತಾನೆ. ಭೂಮಿಯಲ್ಲಿ ಹೂತರೆ ನೂರಿನ್ನೂರು ವರ್ಷವಾದರೂ ಕರಗದೇ ಇರುತ್ತದೆ. ಇವುಗಳನ್ನು ಸುಟ್ಟುಹಾಕಿದರೆ ಇದರಿಂದ ಉತ್ಪತ್ತಿಯಾಗುವ ಅಪಾಯಕಾರಿ ಹೊಗೆ (ಇಂಗಾಲ ಡೈ ಆಕ್ಸೈಡ್) ಯು ಮನುಷ್ಯನ ಉಸಿರಾಟವನ್ನೇ ನಿಲ್ಲಿಸಿ ಬಿಡುತ್ತದೆ. ಇಂಥಹ ಅಪಾಯಕಾರಿ ಪಾಲಿಥಿನನ್ನೇ ತಡೆಹಿಡಿಯಬೇಕೆಂದು ಸರಕಾರ ಆಜ್ಞೆ ಹೊರಡಿಸಿದರೂ ಸಫಲವಾಗಲಿಲ್ಲ. ಪ್ರಜ್ಞಾವಂತ ಜನರು ಇದನ್ನು ಅರ್ಥಮಾಡಿಕೊಳ್ಳದೇ ಈ ಮಾಯೆಗೆ ಮರುಳಾಗಿದ್ದಾರೆ.

ಇಂಥಹ ಸಂದರ್ಭದಲ್ಲಿ ಛತ್ತೀಸಗಡದ ಯುವ ವಿಜ್ಞಾನಿ ಅವಧಿಯ ಎಂಬುವರು ಸೊಸೈಟಿ ಫಾರ್ ಪಾರ್‍ಥೆನಿಯಂ ಮ್ಯಾನೋಜಮೆಂಟ್ ಸಂಯೋಜಕರಾಗಿದ್ದುಕೊಂಡು ಈ ಪ್ಲಾಸ್ಟಿಕನ್ನು ತಿಂದು ಅರಗಿಸಿಕೊಳ್ಳಬಲ್ಲ ಕೀಟಗಳನ್ನು ಪತ್ತೆಹಚ್ಚಿದ್ದಾರೆ. ೧೩೫ ಕೀಟಗಳ ಮೇಲೆ ಪ್ರಯೋಗ ನಡಿಸಿದ (೨ ವರ್ಷ) ‘ಅವಧಿಯಾ’ ಎಂಬ ವಿಜ್ಞಾನಿ ಇವುಗಳಲ್ಲಿ ೫ ಕೀಟಗಳು ಈ ಪಾಲಿಥಿನನ್ನು ತಿಂದು ಅರಗಿಸಿಕೊಳ್ಳಬಲ್ಲದೆಂದು ದೃಢೀಕರಿಸಿದ್ದಾರೆ. ಈ ‘ಪ್ಲಾಸ್ಬಿಕ್ ಬಗ್’ ಅನ್ನು ತಾನು ೧೯೯೯ರಲ್ಲಿ ಕಂಡು ಹಿಡಿದಿದ್ದಾಗಿ ಹೇಳಿದ್ದಾರೆ. ಚಳಿಗಾಲದಲ್ಲಿ ಈ ಕೀಟಗಳು ರೈತನಿಗೆ ಮಿತ್ರನಂತೆ ಇರುತ್ತವೆ ಎಂದೂ ಹೇಳಿದ್ದಾರೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...