Home / ಲೇಖನ / ಪುಸ್ತಕ / ಪಾಪಿಯೂ – ಅರಿಕೆ

ಪಾಪಿಯೂ – ಅರಿಕೆ

“ಚಕ್ಖುಪಾಲ ಮಹಾತೇರ” ಮತ್ತು “ಪಾಪಿ”ಯ ಮೂಲ ಬುದ್ಧಘೋಷನ ಜಾತಕ ಕತೆಗಳು (ಬರ್‍ಮಿ ಭಾಷೆಯಿಂದ ಇಂಗ್ಲೀಷಿಗೆ ಕ್ಯಾಪ್ಟನ್ ಟಿ. ರೋಜರ್ಸ್), “ಜುಲೇಖ”, “ರುದಾಕಿ” ಮತ್ತು “ಫಿರ್ದೌಸಿ”ಯು ಹಿಂದೆ ಅರಬ್ಬಿ ಮತ್ತು ಪರ್ಶಿಯನ್ ಸಾಹಿತ್ಯದ ವಿವಿಧ ಕೃತಿಗಳಿವೆ. “ಸುಲೇಮಾನ”ದ ಹಲವು ವಿವರಗಳನ್ನು ಬೈಬಲಿನ ಹಳೆ ಒಡಂಬಡಿಕೆ, ಆಂದ್ರೆ ಮಾಲ್ರೋನ Anti-Memoirs ಮತ್ತು ಐಸಾಕ್ ರೋಸೆನ್ ಫೀಲ್ಡನ ಸಣ್ಣ ಕತೆಯೊಂದರಿಂದ ತೆಗೆದುಕೊಳ್ಳಲಾಗಿದೆ. ರಿಸರ್ಡ್ ಹ್ಯಾರಿಸ್‌ನ Death of a Revolutionary ಎಂಬ ಪುಸ್ತಕ “ಬೊಲೀವಿಯಾದಲ್ಲಿ ಚೆ”ಯ ರಚನೆಗೆ ಕಾರಣ. “ಇಮಾಂ ಬಾರಾ”ಕ್ಕೆ ವಿವರಗಳನ್ನೊದಗಿಸಿದ್ದು ಅಬ್ದುಲ್ ಹಲೀಮ್ ಶರಾರರ Lucknow : The Last phase of an Oriental Culture (ಇಂಗ್ಲೀಷಿಗೆ ಇ ಎಸ್. ಹಾರ್ಕೋರ್ಟ್ ಮತ್ತು ಫಕೀರ್ ಹುಸೇನ್) ಎಂಬ ಕೃತಿ. “ರುಗ್ಣ ಯಾಕುಬ”, “ದೇವರು ದೊಡ್ಡವ”, “ಅಲ್ಲಾ ನಿದ್ರಿಸುತಾನೆ ಇಲ್ಲಾ”, “ಖೂನಿ”, “ಬಾಲ್ತ ಸ್ಹಾರ್! ಬಾಲ್ತ ಸ್ಹಾರ್!” ಮತ್ತು “ಜೂಲಿಯಾನ” ಅರ್ಜೆಂಟೀನಾದ ಸಾಹಿತಿ ಜೋರ್ಜ್ ಲೂಯಿ ಬೋರ್‍ಹೆಸ್‌ನ ಕತೆಗಳನ್ನೋದಿ ಬರೆದುವು. ಈ ಕವಿತೆಗಳನ್ನು ಬರೆಯುವಾಗ ಆಗತ್ಯವೆನಿಸಿದ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. “ರುದಾಕಿ” ಕವಿತೆಯಲ್ಲಿ ಬರುವ ನಾವಿಕನ ಕತೆಗೆ ಆಧಾರ ನನ್ನದೇ ಕಿರುಕಾದಂಬರಿ ಅನೇಕ. ಇಲ್ಲಿಯೂ ಕತೆ ವ್ಯತ್ಯಾಸಗೊಂಡಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...