Home / ಕವನ / ನೀಳ್ಗವಿತೆ / ರುಗ್ಣ ಯಾಕುಬ

ರುಗ್ಣ ಯಾಕುಬ

ಸುಡಾನವನಾಳಿದ ಅತ್ಯಂತ ಕ್ರೂರಿ ದೊರೆ
ಯಾರೆಂದು ಕೇಳಿದರೆ ಎಲ್ಲರೂ ಹೇಳುವರು-
ಅವನೇ ಯಾಕುಬ
ರುಗ್ಣ ಯಾಕುಬ
ಅವನ ಕತೆ ಕೇಳುವುದು
ನಾಕು ಜನ ಇರುವ ಕಡೆ-ಪ್ರಜಾ
ಜನರೆ ಅವನ ವಿರುದ್ಧ
ದಂಗೆಯೆದ್ದರು ಸಹಾ-ಆ
ದಂಗೆಯನು ಸದೆಬಡಿದು
ಅನೇಕರನು ಹಿಡಿದು
ಕೆಲವರನು ಕೂಡಲೇ
ಕೆಲವರನು ಆಮೇಲೆ

ಅಂಥವರ ನಡುವೊಬ್ಬ
ಮಾಂತ್ರಿಕನೂ ಇದ್ದ
“ಅಲ್ಲಾನ ಸೇವಕ”
ಅಬ್ದುರಹಮಾನ್
ಅಲ್ ಮಸ್‌ಮುದಿ
ಒಂದು ದಿನ ಅಂಥವನ
ಸರದಿಯೂ ಬರಲಾಗಿ :
“ಯಾಕೆ ಸುಮ್ಮನೆ ನನ್ನ
ಕೊಲಿಸುವಿರಿ ? ಕೊಲಿಸಿದರೆ
ನಾ ಕಲಿತ ವಿದ್ಯೆಯೂ
ನನ್ನ ಜತೆ ಹೋಗಿ-
ಇಲ್ಲದಿದ್ದರೆ ನಿಮಗೆ
ಕುಳಿತಲ್ಲೆ ತೋರಿಸುವೆ
ಲೋಕದದ್ಭುತಗಳ
ಅಂಗೈಗೆ ತರಿಸುವೆ!”

ಆಗ ಯಾಕುಬನು
ರುಗ್ಣ ಯಾಕುಬನು :
“ಮಾತುಗಳು ಹಾಗಿರಲಿ
ತಂದು ತೋರಿಸು ನನಗೆ
ಲೋಕದಲೆ ಅತ್ಯಂತ
ಚೆಲುವಾದ ಕುದುರೆಗಳ
ಅಂಥ ದೃಶ್ಯಗಳ !”

ಬರೀ ಒಂದು ಹಿಡಿ ಕೊತ್ತಂಬರಿ
ಒಂದು ಮಣ್ಣಿನ ಪಾತ್ರೆ
ಬೆಂಕಿ, ಇದ್ದಿಲು, ಒಂದು
ಮಸಿಯ ಬುರುಡಿಯೂ
ಬರೆವ ಲೆಕ್ಕಣಿಕೆ
ಪ್ರತ್ಯೇಕ ಮರದ ಪತ್ರೆ

ಆಮೇಲೆ ಯಾಕುಬನ
ರುಗ್ಣ ಯಾಕುಬನ
ಅಂಗೈಲಿ ಮಸಿ ಬಿಂದು
ದುಂಡನೇ ನಿಂದು
“ಅಲ್ಲಾನ ಸೇವಕ”
ಅಬ್ದುರಹಮಾನ್
ಅಲ್ ಮಸ್‌ಮುದಿ
ಮಂತ್ರಗಳ ಹೇಳುವನು
ಕುದುರೆಗಳ ಕರೆಯುವನು

ಕರೆದರೆ ಮೊದಲು
ವಿಶಾಲ ಬಯಲು
ಬಹುಶಃ ಏಶಿಯಾ
ಬಹುಶಃ ಆಫ್ರಿಕಾ
ಆಮೇಲೆ ಅದರ
ಅಂಚಿನಿಂದೆದ್ದು
ಬಂದಂತೆ ಮೋಡ
ಒಂದು ಸಾವಿರ ಘೋಡ
ಓಟದಲಿ ಮೈ-ಮಾಟದಲಿ
ಒಂದನ್ನೊಂದು ಮೀರಿ
ಈ ಕಡೆಗೇ ಸಾರಿ

ಆಮೇಲೆ ಮರುದಿನವು
ಪ್ರತಿದಿನವು ಹೀಗೆಯೇ
ಅದ್ಭುತ ನಗರಿಗಳು
ರಾಜ್ಯಗಳು ಕೋಶಗಳು
ವಿಶಾಲ ಸಮುದ್ರಗಳು
ಮರುಭೂಮಿಗಳು, ಇದೀಗ
ಅರಳಿದ ಗುಲಾಬಿಗಳು
ದೂರದ ಗ್ರಹಗಳೂ

ಪಿರಮಿಡಿನ ರಹಸ್ಯಗಳು
ದಾರಿತಪ್ಪಿದ ನೌಕೆಗಳು
ಯಾರೂ ಬಿಡಿಸದ ಒಗಟುಗಳು
ಸುಂದರ ಹೌರಿಗಳು
ಚರಿತ್ರೆಯ ಪ್ರಸಿದ್ಧ
ಹಾದರಗಳೂ, ಯುದ್ಧಗಳೂ

ವಿಚಿತ್ರ ಜಂತುಗಳು
ವಜ್ರ ವೈಡೂರ್ಯಗಳು
ಮಾತಾಡುವ ಮೀನುಗಳು
ಜನವಿರದ ಸಂತೆಗಳು
ವೇಶ್ಯೆಯರ ಪಡಖಾನೆಗಳು
ಅವರ ವಿನೋದಗಳೂ
ಹುಟ್ಟಿದಾಗಲೆ ನಗುವ ಶಿಶುಗಳೂ
ಕಡಲ ತಳ ಕಾದಿಟ್ಟ
ನಿಧಿಗಳೂ, ಎಷ್ಟೋ ಜನರ
ವಿಧಿಗಳೂ.

ಹೀಗಿತ್ತು. ಇರಲು
ದಿನದಿನದ ಮಾಯಾಬಜಾರ-
ದೊಳಗೆ ಬಯಸಲಿ ಬಯಸದೆ ಇರಲಿ
ಆಗಾಗ
ಬರುವ ಅಪರಿಚಿತ ವ್ಯಕ್ತಿ
ಮುಖವಾಡದಿಂದ ಮುಖ
ಪೂರ್ತಿ ಮುಚ್ಚಿ

ಉತ್ತರದಾತ, ತುಸು ಬಾಗಿರುವಾತ
ದಿರಿಸು ನೋಡಿದರೆ ಅರಬ
ಅಥವ ಅಂಥದೇ ಇನ್ನೊಬ್ಬ
ಯಾಕ ಈ ವೇಷ ?
ಯಾಕೆ ಮುಖವಾಡ ?
“ತೆಗೆದು ಬಿಸಾಕಲು ಹೇಳು !”
ಎಂದು ಯಾಕುಬ
ರುಗ್ಣ ಯಾಕುಬ

“ದುಡುಕಬಾರದು ನಾವು
ಯಾರೀತ, ಹೆಸರೇನು
ಯಾವ ದೇಶದವ- ಯಾರಿಗೂ
ತಿಳಿಯದೆ ಇರುವಾಗ
ತಿಳಿಯದಿರಲೆಂದೆ ಅಲ್ಲಾ ಅವನ
ಮುಖವ ಮುಚ್ಚಿರುವಾಗ”

ಬಾರಿ ಬಾರಿಗೂ ಯಾವುದೋ ಬದಿಯಿಂದ
ಮೂಡುತ್ತಿದ್ದ ವಿಚಿತ್ರ
ಕೆಲವೊಮ್ಮೆ ಕುದುರೆಯ ಮೇಲೆ ಆರೋಹಿ
ಕೆಲವೊಮ್ಮೆ ಹೇಸರಗತ್ತೆಯನೂ ಏರಿ
ಮರುಭೂಮಿಗಳ ಸಂಚಾರಿ
ದಾರಿ ಮರೆತಂತೆಯೂ ತೋರಿ
ಆದರೂ

ಅಂಗೈಯ ಕ್ರೌರ್ಯ
ಒಂದನ್ನೊಂದು ಮೀರಿ
ಮೂಡುತ್ತಿದ್ದುವು
ಯಾಕುಬನ
ರುಗ್ಣ ಯಾಕುಬನ-ಮರುಳು
ಮಾಡುತಿದ್ದವು

ದಿನ ದಿನದ ಕೊಲೆ, ಹಾದರ, ಬಲಾತ್ಕಾರ ಸಂಭೋಗ
ದಿನ ದಿನದ ಶಿಕ್ಷೆ. ಅಂಗಾಂಗ ಛೇದ
ದಿನ ದಿನದ ಅನುಭವದ ಕ್ರೂರ
ಸಾಕ್ಷಾತ್ಕಾರಕ್ಕೆ ಪೂರ್ತಿ ವಶವಾದ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...