Home / ಕವನ / ನೀಳ್ಗವಿತೆ / ದೇವರು ದೊಡ್ಡವ

ದೇವರು ದೊಡ್ಡವ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಅಲ್ಲವೆ ಮತ್ತೆ
ಮುಂದೆ ಹೋದರು ಕತ್ತೆ
ಹಿಂದೆ ಬಂದರು ಕತ್ತೆ
ಕತ್ತೆಯೇ
ಹಾಗೆಯೇ ಆವತ್ತು
ಅಂಥ ಕತೆ ಕೇಳಿ
ಅಂಥ ಕತೆಯೇ ಅಥವ
ದಂತ ಕತೆಯೇ
ಆಹ ! ಅವನೇ ಬಂದ
ಖದೀಮ
ಹೆಸರು ಮಾತ್ರ ಹಕೀಮ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಕಾಲ ಕ್ರಿಸ್ತಶಕ
ಒಂದು ಸಾವಿರ ವರುಷ
ಜಾಗ ಕೈರೋ ಎಂಬ ದೇಶ
ಅವರೂ ಖಲೀಫರೇ
ಬರುತಾರೆ ಕೆಲವು ಸಲ
ಗರೀಬ ಫಕೀರನ ಹಾಗೆ
ಬರುತಾರೆ ಕೆಲವು ಸಲ
ತಳವಾರನ ವೇಷ

ಇಂಥಾ ಹೊತ್ತಿಗೆ
ಕುಂಟರ ಕುರುಡರ ಪರವೂರವರ
ಸಂತರ ಶ್ರೀಮಂತರ ನಂಬುವುದಾದರು ಹೇಗೆ !

ಮಾರನೆ ದಿನ
ಸೆರೆಮನೆಯಲಿ ಹತ್ತು ಜನ
ಹೆಚ್ಚಿದರೂ ಹೆಚ್ಚೀತು
ಐದಾರು ಹೆಣ
ಕೊಚ್ಚಿದರೂ ಕೊಚ್ಚೀತು

ಹೀಗಿತ್ತವನ
ಹೀಗಿದ್ದವನ
ಹೀಗೇ ಒಂದು ದಿನ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ನಾವು ಮಸೀದಿಯ ಮೆಟ್ಟಿಲ ಮೇಲೆ
ಸುಮ್ಮನೆ ನೋಡುತ್ತ
ಅಂಗಡಿ ಕಣಗಳು ಕೂಡ
ಅರ್ಧಕ್ಕೆ ತೆರೆಯುತ್ತ
ಇನ್ನೂ ಕೆಲವರು ಹುಕ್ಕದ ಸುತ್ತ
ಕತೆಗಳ ಹೇಳುತ್ತ

ಹತ್ತು ಜನ ಹೊಂತಗಾರರು
ಹೀಗೇ ಹಾದಿ ನಡೆದಿದ್ದಾರೆ
ಒಬ್ಬಾನೊಬ, ವ್ಯಾಪಾರಿ
ಜತೆಗೇ ಬರುವುದ
ಕಂಡಿದಾರೆ.
ತಲೆಗೇನೋ ಹೊಳೆದಂತಾಗಿ
ತಟ್ಟನೆ ತಿರುಗಿ ನಿಂತಿದ್ದಾರೆ

“ಸಲಾಂ ಖಲೀಫರ
ಅನಕಾ ದೂರ
ಬರಿಗಾಲಲ್ಲೆ ಬಂದಿದ್ದೀರ !
ಏನ ನಡೆಸೀರಿ
ವ್ಯಾಪಾರ ?”

ಎಂದರು-ಹತ್ತಿರ
ಹತ್ತಿರ ಬಂದರು, ಹತ್ತೂ ಮಂದಿ
ಸುತ್ತ ಮುತ್ತ ಯಾರಿಲ್ಲ
ಬಿಟ್ಟರೆ ಬೀದಿಯ ಹಂದಿ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ
“ಆಹ ! ಏನಂದಿರಿ-
ವ್ಯಾಪಾರ ?
ಅದೂ ಪರವಾಯಿಲ್ಲ!
ಇದೋ!” ಎಂದರು ಖಾವಂದರು
ಮುಷ್ಟಿ ದಿನಾರವ ತೆಗೆದು

ಅವು ಅಂಗೈ ತುಂಬಾ ಹೊಳೆದು
ಸಂಜೆಯ ಸೂರ್ಯನ ಕಿರಣ
ಹೆಕ್ಕಿದುವೊಂದನು ಬಿಡದೆ
ನೋಡದೆ ಬೇರೆ ಕಡೆ

“ಯಾರಿಗೆ ಇವು
ಯಾರಿಗೆ ಹೇಳಿ-
ಕಪ್ಪು ಸಮುದ್ರವ
ಕುಡಿದಾತನಿಗೆ
ಕೆಂಪು ಸಮುದ್ರವ
ಹಿಡಿದಾತನಿಗೆ
ಕೊನೆ ತನಕವು
ಉಳಿವಾತನಿಗೆ !”

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಎಲ್ಲರು ಬಿದ್ದಿದ್ದರು-ಒಬ್ಬ ಮಾತ್ರವೇ
ಎದ್ದು ನಿಂತಿದ್ದ
ಅವ ಖಲೀಫರ ಸಮ್ಮುಖ
ಬಂದು ನಿಂತಿದ್ದ

“ಏನ ನೋಡತಿ, ಮಗನೇ ?
ಕೊನೆಗೂ ಗೆದ್ದವ ನೀನೇ-
ನಮ್ಮ ಕಾಲಿಗೆ ಬಿದ್ದು
ತಗೊ ನಿನ್ನ ನಿಧಿಯನು ನೀನೇ !”

ಆಮೇಲಿನ ಕತೆ
ಗೊತ್ತಿದ್ದದ್ದೇ-
ದೇವರು ದೊಡ್ಡವ ಗೆದ್ದೇ-
ನೆಂದು ಮನಸಿನ ಒಳಗೇ
ನೆತ್ತರ ಒರೆಸಿ
ಖಡ್ಗವ ಮರೆಸಿ
ನಡೆದರು ಮೊದಲಿನ ಹಾಗೇ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...