Home / ಕವನ / ಕವಿತೆ / ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು :
“ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ
ತಲೆಯೆಂದರೆ ನಿನ್ನದೆ ! ಆದ್ದರಿಂದ
ಆತ್ಮವಿದ್ಯೆ ನಿನಗೇ
ಕಲಿಸುವೆ ನಾನು ಪ್ರತ್ಯಕ್ಷ.”

ನಗಾರಿಯೊಂದ ತರಿಸಿದ.
ಅದಕ್ಕೆ ಸರೀ ಬಾರಿಸಿದ.
ಅದರ ಸದ್ದು ಸುತ್ತಲೂ
ಗಿರಿಕಂದರ ವ್ಯಾಪಿಸಿತು.
ಹಕ್ಕಿಗಳೂ ಹಾರಿದುವು
ಕೋತಿಗಳೂ ಓಡಿದವು.
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:
“ಎಲ್ಲಿಂದ ಹೊರಟಿತು, ಎಲ್ಲಿಗೆ ಹೋಯ್ತು ?
ಹಿಡಿವಂತಿಲ್ಲ ಕೈಯಲ್ಲಿ
ಕರೆವಂತಿಲ್ಲ ವಾಪಸು
ಆದರೂ-
ನಗಾರಿ ನಮ್ಮ ಕೈಯೊಳಗೆ !”
**

ಬೆಂಕಿಯೊಂದ ಮಾಡಿದ-ಅದಕ್ಕೆ
ಹಸೀ ಉರುವಲು ಹಾಕಿದ.
ಹೊಗೆ!

ಕಪ್ಪು, ಕಂದು, ನೀಲಿ
ಎಲ್ಲಾ ಕಡೆ ಹೊರಳಿ
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:

“ಹೇಗೆ ಹಸೀ ಸೌದೆಯಿಂದ
ಹುಟ್ಟುತ್ತದೆ ಹೊಗೆ-ಹಾಗೆ
ಆತ್ಮದಿಂದ ಎಲ್ಲವೂ !”
**

ದೋಣಿಯೊಂದ ತರಿಸಿದ-ತಳಕ್ಕೆ
ಎರಡು ತೂತು ಕೊರೆಸಿದ.
ನೀರು ಒಳಕ್ಕೆ ಧಾವಿಸಿತು
ಮೊಗೆದಷ್ಟೂ ಮುಗಿಯದೆ.
ಈಜಿ ದಡ ಸೇರಿದರು.
“ನೋಡಿದಿಯಾ !” ಎಂದ ಯಾಜ್ಞವಲ್ಕ್ಯ
“ದೇಹವೆಂದವರೆ ಒಡಕು ದೋಣಿ
ನಂಬಿದವಗೆ ಗತಿಯಿಲ್ಲ–
ಆತ್ಮಜ್ಞಾನವೆಂದರೆ
ಅದು ಈಜಿನ ಹಾಗೆ !”
**

ಆರಗಿಣಿಯೊಂದ ತರಿಸಿದ
ಪಂಚವರ್ಣದ ಗಿಣಿ, ಸಣ್ಣ ಕಣ್ಣಿನ ಗಿಣಿ
ನೋಡಿದರೆ ಇನ್ನೂ
ನೋಡವೇಕೆಂಬ ಗಿಣಿ
ಹಾಡುವುದಕ್ಕೆ ಕಲಿಯಿತು
ವೇದಗಳ ಪಠಿಸಿತು
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಹಾಡುತ್ತದೆ, ನುಡಿಯುತ್ತದೆ
ಮಾತ್ರ-
ಯಾಕೆ ಏನು ತಿಳಿಯದು.
ಆತ್ಮಜ್ಞಾನ ಇರದ ಹೊರತು
ಏನು ಹೇಳಿ ಏನು !”
**

ಹೇಂಟೆಯೊಂದ ತರಿಸಿದ
ಪ್ರತಿದಿನವೂ ತಿನಿಸಿದ.
ಬೆಳಗಿಂಜಾಮ ಕೂಗುತಿತ್ತು
ಎಲ್ಲರ ಎಬ್ಬಿಸುತಿತ್ತು
ಮಾತ್ರ-ಎಷ್ಟೇ ದಿನ ಕಳೆದರೂ
ಇಡಲಿಲ್ಲ ತತ್ತಿ
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಆತ್ಮಕ್ಕೆ ಬೇಕು ಪರಮಾತ್ಮ
ಇಲ್ಲದೇ-
ದಕ್ಕಲಾರದು ಬ್ರಹ್ಮಾಂಡ !
**

ಮುಗಿಯಿತೇ ಎಂದಳು ಮೈತ್ರೇಯಿ
ಹೂಂ ಎಂದ ಯಾಜ್ಞವಲ್ಕ್ಯ.
ಒಂದು ಮಾತ್ರ ಮರೆತಿರೆಂದು
ಸೀರೆ ರವಿಕೆ ಬಿಚ್ಚಿದಳು
ಲಂಗ ಒದ್ದು ಜಾಡಿಸಿದಳು.
“ನೋಡಿದಿರಾ!” ಎಂದಳು ಮೈತ್ರೇಯಿ :
“ಸೀರೆಯೆಂದರಹಂಕಾರ
ರವಿಕೆ ತಪ್ಪು ಗ್ರಹಿಕೆ
ಬಾಡಿಯೆಂದರೆ ಕಿಲಾಡಿ
ಲಂಗ ಆಶಾಭಂಗ-ಇನ್ನು
ನೂರಕ್ಕೆ ನೂರು ಸಾಚಾ
ಆಗಬೇಕೆಂದರೆ ಇದೋ !” ಎಂದು
ಕಿತ್ಕೆಸೆದಳು ಕಾಚ !
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...