Home / ಕವನ / ಅನುವಾದ / ಮಧುರ ನೀರವ ಚಿಂತನೆಗಳ ಅಧಿವೇಶನಕೆ

ಮಧುರ ನೀರವ ಚಿಂತನೆಗಳ ಅಧಿವೇಶನಕೆ

ಮಧುರ ನೀರವ ಚಿಂತನೆಗಳ ಅಧಿವೇಶನಕೆ
ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ;
ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ,
ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು.
ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ
ಹುಗಿದ ಪ್ರಿಯಮಿತ್ರರಿಗೆ ಮರಮರಳಿ ಬೇಯುವೆನು.
ಹಿಂದೆಂದೊ ತೊರೆದ ಪ್ರೀತಿಯ ನೋವಿಗಳುವೆ, ಅಳಿ-
ದೆಷ್ಟೊ ದೃಶ್ಯಗಳ ಬರಿವೆಚ್ಚಕ್ಕೆ ನೋಯುವೆನು.
ಹಳೆಯ ದುಃಖಕ್ಕೆಲ್ಲ ಹೊಸದಾಗಿ ಕೊರಗುವೆ
ಒಂದೊಂದು ವ್ಯಥೆಯನೂ ತಿರುತಿರುಗಿ ನೆನೆಯುತ್ತ,
ಹಿಂದೆ ಅದಕೆಂದೆ ಪಟ್ಟೆಲ್ಲ ದುಃಖದ ಪರಿವೆ
ಇಲ್ಲ ಎಂಬಂತೆ ಹೊಸ ಹೊಸದಾಗಿ ಕುದಿಯುತ್ತ.
ಅದರೀ ನಡುವೆ ಪ್ರಿಯಮಿತ್ರ ನೆನೆದೆನೊ ನಿನ್ನ,
ತುಂಬುವುದು ನಷ್ಟ ಕೊನೆಗೊಳಿಸುವುದು ವ್ಯಥೆಯನ್ನ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 30
When to the sessions of sweet silent thought

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...