Home / ಕವನ / ಕವಿತೆ / ಬೆರಳ ಕೇಳಿದರೆ ಕೈಯ ಕೊಡುವವನು

ಬೆರಳ ಕೇಳಿದರೆ ಕೈಯ ಕೊಡುವವನು

ಬೆರಳ ಕೇಳಿದರೆ ಕೈಯ ಕೊಡುವವನು
ಕೈಯ ಕೇಳಿದರೆ ಕೊರಳನೆ ಕೊಡುವವನು
ನಮ್ಮ ಏಕಲವ್ಯ
ಕೊರಳ ಕೇಳಿದರೆ ಒಡಲನ ಕೊಡನೆ
ತನ್ನ ಪ್ರಾಣವ ತೆರನೆ
ಹೇ ಗುರು ದ್ರೋಣ

ಆ ಶಿಷ್ಯನಿರುವಂಥ ಗುರುಗಳೆ ಗುರುಗಳು
ಆ ಕತೆಯಿರುವಂಥ ಭಾರತವೆ ಭಾರತ
ಆವತ್ತಿಗಾ ಕತೆ ಈವತ್ತಿಗೇನೋ
ಹೇ ಗುರು ದ್ರೋಣ

ಕಾಲ ಬದಲಾಗುವುದು ಕತೆ ಬದಲಾಗುವುದು
ಗುರು ಬದಲಾಗುವರು ಶಿಷ್ಯರು ಬದಲಾಗುವರು
ಗುರುಭಕ್ತಿಯೆನ್ನುವುದು ನಗೆಪಾಟಲಾಗುವುದು
ಏಕಲವ್ಯ ಬರೆ ಭಿಲ್ಲನಾಗುವನು
ಹೇ ಗುರು ದ್ರೋಣ

ಭಿಲ್ಲನೇ ಅವನು ಭಿಲ್ಲನೆನ್ನುವುದು ಸರಿ
ಬಿಲ್ಲುವಿದ್ಯೆಯಲಿ ಪರಿಣತನು ಅಹುದು
ಅವನಿಗೇತಕೆ ಒಂದು ಮೂರುತಿಯ ಭಯಭಕುತಿ
ಅದು ಎಂಥ ಗುರುವೊ ಅದು ಎಂಥ ಋಣವೊ
ಹೇ ಗುರು ದ್ರೋಣ

ಕತೆ ಯಾಕಿಲ್ಲಿ ತಡೆಯುತ ಹೋಯಿತೊ
ಸಾಮ್ರಾಜ್ಯಗಳ ತಲೆ ಮುಗಿಯಿಸಿತೊ
ಕಲಿಸಿದ ಗುರು ಕಲ್ಪಿಸಿದ ಗುರು ಮನದೊಳು ಸಂಕಲ್ಪಿಸಿದ ಗುರು
ಕನಸಲಿ ಕಾಣಿಸಿದ ಗುರು
ಎಲ್ಲ ಗುರುಗಳು ಜಗದಾದಿ ಗುರುವೆಂದು
ಶರಣಾಯಿತೊ
ಹೇ ಗುರು ದ್ರೋಣ
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ತೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...