Home / ಲೇಖನ / ವಿಜ್ಞಾನ / ಕೆಲವು ಪಶು ಆಹಾರಗಳು ವಿಷಯುಕ್ತ?!

ಕೆಲವು ಪಶು ಆಹಾರಗಳು ವಿಷಯುಕ್ತ?!

ಪರಂಪರಾನು ಕಾಲದಿಂದಲೂ ಪಶುಗಳನ್ನು ಪವಿತ್ರವೆಂದು ಪೂಜಿಸುತ್ತೇವೆ. ಪಶುಗಳ ಅಸ್ತಿತ್ವ ಇಲ್ಲದಿದ್ದರೆ ಮನ್ಯುಷನ ಬದುಕು ನಿಸಾರವಾಗುತ್ತಿತ್ತು. ಗೊಬ್ಬರ, ಹಾಲು, ಬೆಣ್ಣೆ, ತುಪ್ಪ, ಮಜ್ಜಿಗೆಯಂತಹ ಪದಾರ್ಥಗಳಲ್ಲಿ ಮನುಷ್ಯನ ಪೌಷ್ಠಿಕ ಆಹಾರದ ಅವಿಭಾಜ್ಯ ಅಂಗಗಳಾಗಿರುವುದು ಐತಿಹಾಸಿಕ ಸತ್ಯ. ಹೀಗಾಗಿ ಇವುಗಳನ್ನು ರೋಗರುಜೀನಗಳಿಲ್ಲದಂತೆ ಸಂರಕ್ಷಿಸಿ ಅದರಿಂದಾಗುವ ಪ್ರಯೋಜನವನ್ನು ಪಡೆಯಬಹುದು. ಇವು ಮೂಕ ಪ್ರಾಣಿಗಳಾಗಿದ್ದರಿಂದ ನೋವು ಕಷ್ಟಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ನಾವೇ ಈ ದನಗಳ ಶಕ್ತಿವರ್ಧನೆಗೆ ಅಗತ್ಯವಾದ ಪೂರಕವಾದ ಆಹಾರವನ್ನು ಹಾಕಬೇಕಿದೆ.

ಇತ್ತೀಚಿನ ವಿದ್ಯಮಾನದಲ್ಲಿ ಹಾಲು ಸಮೃದ್ಧಿಯಾಗಿ ಕೊಡಲಿ, ಎಂಬ ಕಾರಣಕ್ಕಾಗಿ ನಾವು ಅಂಗಡಿಯಲ್ಲಿ ದೊರೆಯುವ ಸಿದ್ದಪಶು ಆಹಾರಗಳನ್ನೇ ತಿನ್ನಿಸುತ್ತೇವೆ. ಹಾಲಿನ ಹೆಚ್ಚಳಕ್ಕಾಗಿ ‘ಯುರಿಯೂ’ವನ್ನೂ ಮಿಶ್ರ ಮಾಡಲಾಗುತ್ತದೆ. ಶೇ. ಒಂದರಷ್ಟು ಮಿಶ್ರಮಾಡುತ್ತೇವೆಂದು ಆಹಾರ ತಯಾರಕರು ಹೇಳಿದರೆ ಪಶುವೈದ್ಯರು ಶೇ. ೩೦ ರಷ್ಟು ಮಿಶ್ರಣವಾಗುತ್ತದೆಂದು ಹೇಳುತ್ತಾರೆ. ಈ ಶೇ. ೩ ರಷ್ಟಿನ ಯೂರಿಯಾದ ಜತೆಗೆ ಕೆಲವು ಸಲ ಮರಳು, ಮಣ್ಣುಗಳು ಮಿಶ್ರವಾಗುತ್ತದೆಂದು ಹೇಳುತ್ತಾರೆ. ಇಂಥಹ ಯೂರಿಯಾ, ಮರಳು, ಮಣ್ಣು ಮಿಶ್ರಿತ ಆಹಾರವನ್ನು ಸೇವಿಸುವ ದನಗಳು ಹಾಲನ್ನೇನೋ ಹೆಚ್ಚು ಕೊಡಬಹುದು. ಆದರೆ ಇದೇ ಆಹಾರ ಪಶುಗಳಿಗೆ ವಿಷವಾಗಿ ಪರಿಣಮಿಸುತ್ತದೆ, ಎಂಬ ಸತ್ಯ ಬಹಳ ಜನಕ್ಕೆ ತಿಳಿಯದು. ಚಿನ್ನದ ಮೊಟ್ಟೆಯನ್ನಿಡುವ ಕೋಳಿಯ ಹೊಟ್ಟೆಯನ್ನೇ ಸೀಳಿದ ಸ್ವಾರ್ಥದ ಕಥೆ ನೆನಪಾಗುತ್ತದೆ. ನಮ್ಮ ಸ್ವಾರ್ಥದ ದೆಸೆಯಿಂದಾಗಿ ಇಂಥಹ ಆಹಾರಗಳನ್ನು ನಾವು ದನಗಳಿಗೆ ಕೊಡುತ್ತ ಹೋದರೆ ಗರ್ಭ ಕಟ್ಟುವಲ್ಲಿ ವಿಫಲವಾಗುವುದು, ಬೆದೆಗೆ ಸರಿಯಾಗಿ ಬಾರದಿರುವುದು, ಗರ್ಭಪಾತ ಸಮಸ್ಯೆಯುಂಟಾಗುವುದು, ಚರ್ಮ ರೋಗಗಳು ಬರುವುದು, ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳು ಬರುವುದು. ಮುಂತಾದ ರೋಗಗಳು ಪ್ರಾರಂಭವಾಗುತ್ತವೆ. ಹಾಲು ಹೆಚ್ಚು ಕೊಡುತ್ತದೆಂಬ ಕಾರಣಕ್ಕೆ ಈ ಹಾಲನ್ನು ಕೊಡುವ ಪಶುವಿಗೆ ವಿಷಯುಕ್ತ ಆಹಾರವನ್ನುಣಿಸಿ ಅಪ್ರತ್ಯಕ್ಷವಾಗಿ ಇವುಗಳ ನಾಶಕ್ಕೆ ನಾವೇ ಕಾರಣರಾದಂತಾಗುವುದಿಲ್ಲವೆ? ಯೋಚಿಸಬೇಕು.

ನಮ್ಮ ದೇಶಿ ಪದ್ದತಿಯಲ್ಲಿಯೇ ಅಧಿಕ ಹಾಲನ್ನು ಕೊಟ್ಟು ಆರೋಗ್ಯಕ್ಕೆ ಹೆಚ್ಚು ಪುಷ್ಠಿ ನೀಡುವ ಪಶು ಆಹಾರಗಳನ್ನು ನಾವೇ ತಯಾರಿಸಿಕೊಳ್ಳಬಹುದು. ರಾಗಿ, ಜೋಳ, ಹುರುಳಿ, ಅಕ್ಕಿತೌಡು, ಗೋಧಿಬೂಸಾ, ಹತ್ತಿ ಹಿಂಡಿ, ಸೇಂಗಾ ಹಿಂಡಿ, ಹೀಗೆ ಅನೇಕ ತೆರನಾಗಿ ನಮ್ಮ ಸಸ್ಯಮೂಲದಿಂದಲೇ ತಯಾರಿಸಲ್ಪಟ್ಟ ದೇಶಿ ಸಂಸ್ಕೃತಿಯ ಆಹಾರಗಳನ್ನು ನಾವು ದನಗಳಿಗೆ (ಪಶುಗಳಿಗೆ) ಕೊಟ್ಟರೆ ದೈಹಿಕವಾಗಿ ದಷ್ಟ- ಪುಷ್ಟವಾಗುವುದರ ಜತೆಗೆ ಸಮೃದ್ಧಿಯಾಗಿ ಹಾಲನ್ನು ಕರಿಯುತ್ತವೆ. ಇದೆಲ್ಲ ಎಲ್ಲಿಯ ಗೊಡವೆ, ಎಂದು ಅಂಗಡಿಗಳಲ್ಲಿ ಸಿಗುವ ವಿದೇಶಿ ಮೂಲ ಸಂಸ್ಕಾರಣೆಯ ಆಹಾರವನ್ನು ತಂದು ತಿನ್ನಿಸಿದರೆ, ನಾವೇ ದನಗಳಿಗೆ ಕೈಯಾರೆ ವಿಷ‌ಉಣಿಸಿದಂತಾಗುತ್ತದೆ. ದೇಶಿ ಪದ್ದತಿಯ ಪಶು ಆಹಾರಗಳಲ್ಲಿರುವ ಜೀವಸತ್ವಗಳ ಬಗೆಗೆ ನಮ್ಮ ಕೃಷಿಕರು, ಧನಿಕರು ಸಾಕುವವರು ಚಿಂತಿಸಬೇಗಿದೆಯಲ್ಲವೆ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...