Home / ಲೇಖನ / ವಿಜ್ಞಾನ / ಸಿಡಿಲಿನ ಶಕ್ತಿ!!

ಸಿಡಿಲಿನ ಶಕ್ತಿ!!

‘ಸಿಡಿಲು’ ಎಂದಾಕ್ಷಣ ಯಾರಿಗೆ ತಾನೆ ಹೆದರಿಕೆ ಇಲ್ಲ. ಇದರ ಅಬ್ಬರ, ಶಬ್ದ ಬೆಂಕಿಯ ವೇಗಗಳನ್ನು ಕಂಡರೆ ಪ್ರಾಣಭಯ ಪಡುವವರೇ ಹೆಚ್ಚು. ಈಗಾಗಲೇ ಸಹಸ್ರಾರು ಜನ ಸತ್ತಿರುವ, ನೂರಾರು ಕಟ್ಟಡಗಳು ನೆಲಕ್ಕುರುಳಿರುವ, ಅಸಂಖ್ಯಾತ ಮರಗಳು ಸೀಳಿಕೊಂಡಿರುವ ಉದಾಹರಣೆಗಳಿವೆ, ಮಳೆಗಾಲ ಬಂತೆಂದರೆ ಸಿಡಿಲು-ಮಿಂಚುಗಳ ಅರ್ಭಟ ಹೆಚ್ಚಾಗುತ್ತದೆ.

ವಿದ್ಯುತ್ ಕಣಗಳ ಸಮೂಹವು ವೇಗದಿಂದ ಅಪ್ಪಳಿಸುವುದಕ್ಕೆ ನಾವು ‘ಸಿಡಿಲು’ ಎನ್ನುತ್ತೇವೆ. ಈ ಸಿಡಿಲಿನಿಂದ ಉತ್ಪತ್ತಿಯಾಗುವ ಶಕ್ತಿ ಸು.೧೦೦ ಕೋಟಿ ವೊಲ್ಟೇಜ್ ನಷ್ಟಿರುತ್ತದೆ ಎಂದರೆ ನಂಬಲಿಕ್ಕಾಗುವುದೇ ಇಲ್ಲ. ಸಿಡಿಲಿನಿಂದ ಉದ್ಭವಿಸುವ ಮಿಂಚುಗಳು ೩೦೦ ಅಡಿಗಳಿಂದ ನಾಲ್ಕು ಮೈಲಿ ದೂರದವರೆಗೂ ಪ್ರವಹಿಸುತ್ತವೆ. ಇವುಗಳ ಉಷ್ಣತೆ ೩೦,೦೦೦ ಡಿಗ್ರಿ ಸೆಂಟಿಗ್ರೇಡ್ ವರೆಗೂ ಇರುತ್ತದೆ. ಇದು ಸೂರ್ಯಕಿರಣಗಳ ಉಷ್ಣತೆಗಿಂತಲೂ ೫ ಪಟ್ಟು ಅಧಿಕವಾಗಿರುತ್ತದೆ. ಭೂಮಿಯ ಮೇಲೆ ನಿರಂತರವಾಗಿ ಎಲ್ಲೋ ಒಂದು ಕಡೆ ಸಿಡಿಲು ಬೀಳುತ್ತಲೇ ಇರುತ್ತದೆ. ಸೆಕೆಂಡಿಗೆ ೫೦ ರವರೆಗೂ ಬೀಳುವುದು ಸಾಮಾನ್ಯ. ಇವುಗಳಿಂದ ಭವನಗಳು ಕುಸಿಯದಿರಲು ಮಿಂಚು ಸಂವಾಹಕಗಳನ್ನು ಬಳಸುತ್ತಾರೆ. ಇವುಗಳ ಮೂಲಕ ಸಿಡಿಲು ಪ್ರವಹಿಸಿ ಅಪಾಯವಿಲ್ಲದೇ ಭೂಮಿಯೊಳಗೆ ಸಿಡಿಲು ನುಸುಳುತ್ತದೆ. ರೇಡಿಯೋಗಳು, ಟ್ಟಾನ್ಸಿಸ್ಟರ್‌ಗಳು, ಆಂಟೇನಾಗಳು ಈ ಸಿಡಿಲುಗಳನ್ನು ಆಕರ್ಷಿಸುತ್ತವೆ. ಪ್ರಪಂಚದಲ್ಲಿಯೇ ಹೆಚ್ಚಾಗಿ ದಕ್ಷಿಣ ಆಫ್ರಿಕಾದಲ್ಲಿಯೇ ಸಿಡಿಲಿನ ಅಬ್ಬರ ಹೆಚ್ಚಾಗಿರುತ್ತದೆಂದು ಸಿಡಿಲಿನ ಬಗೆಗೆ ಸಂಶೋಧನೆ ನಡಿಸಿದ ವಿಜ್ಞಾನಿಗಳು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...