Home / ಲೇಖನ / ಹಾಸ್ಯ / ಧಾರವಾಡದ ಅಶ್ವರತ್ನ

ಧಾರವಾಡದ ಅಶ್ವರತ್ನ

ಅರ್ಥಾತ್
ಟಾಂಗಾದ ಕುದರಿ

(ಸೆಟ್ಟಿರಿಗೆ ಧಾರವಾಡದಿಂದ ಹುಬ್ಬಳ್ಳಿಗೆ ಹೋಗಬೇಕಾಗಿತ್ತು. ತುಂಬ ಗಡಬಡಿಯ ಕೆಲಸ ಅವರಿಗೆ. ಉಗೆ ಬಂಡಿ ಬಿಡುವದಕ್ಕೆ ಸ್ವಲ್ಪವೇ ಅವಕಾಶ ಉಳಿದಿತ್ತು. ಬಾಡಿಗೆಗೆ ಒಂದು ಟಾಂಗಾ ಗೊತ್ತು ಮಾಡಿ ಸೆಟ್ಟರು ಅದರಲ್ಲಿ ಕುಳಿತರು. ಬೇಗ ಬೇಗ ಟಾಂಗಾ ಹೊಡೆಯೆಂದು ಅಡಿಗಡಿಗೆ ಅವಸರ ಪಡಿಸಲು ತೊಡಗಿದರು. ಟಾಂಗಾದವನು ಹಾಗೆ ಮಾಡದಿದ್ದುದರಿಂದ, ಸೆಟ್ಟರು ಕುದುರೆಗೇ ದೋಷಕೂಡಲಾರಂಭಿಸಿದರು. ಸೆಟ್ಟರ ಮಾತುಗಳನ್ನು ಕೇಳಿ ಟಾಂಗಾದವನು ಹೆಮ್ಮೆಯ ನುಡಿಗಳಲ್ಲಿ ಹೇಳಲಾರಂಭಿಸಿದ)

(ವಿ. ಸೂ. ಟಾಂಗಾದವನ ಭಾಷೆ ಉರ್ದು ಮಿಶ್ರಿತ ಕನ್ನಡವಿತ್ತು, ಆದರೆ ಸಂಪಾ ದಕರ ಮತ್ತು ವಾಚಕರ ಸೌಕರ್ಯಕ್ಕಾಗಿ ಆದನು ಕನ್ನಡದಲ್ಲಿಯೇ ಕೊಟ್ಟಿರುತ್ತದೆ.)

ಟಾಂಗಾದವ: ಏನು ಸೆಟ್ಟರಽ! ಹೆಂತಾ ಕುದುರಿಗೆ ಏನು ಹೆಸರ ಇಡತದೀರಿ….? ಇದು ಜತ್ತಿ ಪಂಡ್ರಾಪೂರ್‌ ಕಡೇದು ಕುದರಿ ಐತಿ !…ನಾ ನೋಡ್ರಿ…. ಟಾಂಗಾ ಮಾಡಿ ಮೂವತ್ತು ವರ್ಸ ಅದೂ. ಅದರ ಮೂವತ್ತ ವರ್ಸದಾಗ, ಒಂದೂ ಹಿಂತಾ ಕುದರೀನಽ ನೋಡಿಲ್ಲ….ಭಾಳ ಅಂದರ ಭಾಳ ಹುಶಾರಿ! ಹಿಂತಾ ಕುದರಿ ಲಕ್ಸದಾಗ ಒಂದು ಎಲ್ಯಾರೆ ಹುಟ್ಟಿರತೈತಿ!

ಸೆಟ್ಟರು: ಟಾಂಗಾ ನಿಂದರಿಸಿದ್ಯಾಕೊ? ಹೊಡಿಯಲಾ ಲಗೂನಽ!

ಟಾಂಗಾದವ: ಇಲ್ರೀ…. ಕುದರಿ ಲದ್ದೀಹಾಕಲಾಕ ನಿಂತೈತಿ…….? ಬಾಕಿ ಕುದರಿ ಹಾಂಗೆಲ್ಲಾ ಓಡೂಮುಂದ ಲದ್ದೀಹಾಕೂವದಿಲ್ಲ ಈ ಕುದರಿ…! ಓಣೆಗುಂಟಽ ಲದ್ದೀ ಹಾಕಲಾಕ ಇದೇನು ಕ್ವಾಣ ಏನ್ರಿ ಸೆಟ್ಟರ?

ಸೆಟ್ಟರು: ಕುಂಟತಽದೇನೋ ಸಾಬಾ ನಿನ್ನ ಕುದರಿ?

ಟಾಂಗಾದವ: ಹೌದರಿ….ಜರಾಽನಽ ಕುಂಟತೈತಿ ! ನೀವು ಒಳೇ ಹುಡಿಕಿ ಹಿಡದ್ರಿ ನೋಡ್ರಿ ಇದರ ಕುಂಟೂದನ್ನ! ಇಲ್ಲದಿರಕ, ಇದು ಬೆರಕೀ ಹೆಣ್ಣಜಾತಿ; ಟಾಂಗಾ ಫಾಸ ಆಗೂಮುಂದ ಒಳ್ಳೇ ಪೋಲೀಸ ಸಾಬನ ಕಣ್ಣೀಗೇ ಇಂಗ ಹಚ್ಚಿತು ನೋಡ್ರಿ!.. ಎರಡ ಹೆಜ್ಜೀ ಕುಂಟತೈತೋ ಇಲ್ಲೋ… ಮುಂದ ನಡಗೀ ನಡದ್ಹಾಂಗ ಮಾಡತೈತಿ! ಪೋಲೀಸಸಾಬ ಬಿಟ್ಟು ಅವನ ಕಾಕಾ ಬಂದರೂ ತಿಳಿಯೂ ಹಾಂಗಿಲ್ಲ…! ಹಿಂಗಾಲ ಎಡಗಾಲು ಕುಂಟ ಇದ್ದದ್ದು ನನಗಽ ಗೊತ್ತು. ಅದಕ್ಕಽ ಗೊತ್ತು! ಬಲ್ ಬೆರಕಿ ಅಂದರ ಬಲ್‌ಬೆರಕಿ…! ಕಾಲ ಕಟ್ಟಿ ಮೆಯ್ಯಲಾಕ ಬಿಟ್ಟಾಗ, ಹುಡಗೂರ ಕರದರ ಹತೀಲಿ ಬರತೈತಿ…. ಅದಽ ನನ್ನ ನೋಡಿದರ ಓಡೂದಽ ಮಾಡತೈತಿ! ಹಿಂತಾ ಬೆಂಡ್ಲ ಜಾತೀದು ಐತಿ…! ಹೂಡಲಿಕ್ಕೆ ಹತ್ತಿದಾಗ ಹೊಸದಾಗಂತೂ ಹುಡೂತಲೇನಽ ನೆಲಕ್ಕಽ ಕುಂಡ್ರೂದು ಮಾಡತಿತ್ತು..! ಕುಂತೈತೀ ಅಂತ ಬಿಚ್ಚಿ ಬಿಡೂತಲೇನಽ ಎದ್ದು ಓಡೇ ಓಡೂದು! ಹಿಂತಾ ಕುದುರೇನಽ ಸಿಗಾಕಿಲ್ಲ…! ನಾನೂ ಏನ ಹಾಂಗಽ ಬಿಡಲಿಲ್ಲ. ನಾಡಾಗಿಲ್ಲದ ಬೆರಕಿ ! ಇದಕ್ಕ ಒಂದ ಬೇತಾ ಮಾಡಿದೆ; ನಮ್ಮ ಅಂಗಳದಾಗೆ ಮಳೇ ನೀರು ನಿಂತಿದ್ದೂ: ಅಲ್ಲೆ ಟಾಂಗಾ ಹೂಡಿದೆ ಕುದರೀ ಹೊಟ್ಟಿಗೆ ಒಂದೆರಡು ಒಳ್ಳೇ ಸುಣ್ಣದ ಹಳ್ಳು ಕಟ್ಟಿದ್ದೆ. ಕುದರಿ ಕೂಂಡ್ರೂದಷ್ಟಽ ತಡಾನೋಡ್ರಿ, ಸುಣ್ಣದ ಹಳ್ಳು ನೀರಾಗ ತೊಯ್ದು ಕುದೀಲಾಕ ಹತ್ತಿದೂ; ಕುದರಿ ಜಿಗಿತು ಎದ್ದು ನಿಂತ್ಯು. ಅಂದಽ ಕಡೀದಿನಾ ನೋಡ್ರಿ. ಅಂದಿನಿಂದಽ ಕುಂಡ್ರೂದಽ ಬಿಟ್ಟು ಬಿಟ್ಟಿತು!

“ನೀವೆಲ್ಲಾ ಕಿತ್ತಿ ಓಡಿಸ ಅಂದೀ; ಕುದರಿ ಹ್ಯಾಂಗ ಓಡೀತು ಹೇಳ್ರಿ! ಮೊನ್ನೆ ಕಾಮನ ಕಟ್ಟ್ಯಾಗ ನನ್ನ ಟಾಂಗಾದ ಎದುರಿಗಿಂದನಽ ನಬೀಸಾಬನ ಟಾಂಗಾ ಭರದಾಂಡ್‌ ಜೋರಲೇ ಬರುತ್ತಿತ್ತು… ; ತರಬ್‌ ತರಬ್‌ ಅನ್ನೂದರಾಗಽ ಓಣೀ ಒಳಗ ಆಡೂ ಹುಡುಗನ ಕಾಲಮ್ಯಾಗಽ ಹಾಯ್ದು ಹೋತು….! ಅದನ್ನ ನೋಡಿದಾಗಿನಿಂದಽ ನಮ್ಮ ಕುದರಿ ಓಡೂದನ್ನಽ ಬಿಟ್ಟು ಬಿಟ್ಟೈತಿ…! ಮುದಿಕಿ ಆಗೈತಿ, ಹಾಂಗ್‌ ಐತಿ ಹಿಂಗ್‌ ಐತಿ… ಅಂತ ಪೊಜದಾರಸಾಬ ಬಯ್ಯಲಾಕ ಸುರೂ ಮಾಡಿದ್ದ-ಪಾಸ್‌ ಮಾಡೂ ಮುಂದ! ಆಗ ನಾ ಒಂದಽ ಮಾತ ಹೇಳಿದೆ; ರಾವಸಾಬ್‌ ನನ್ನ ಕುದರಿಗೀಗ ಹದಿನೆಂಟ ವರಸ ಆಗಿದಾವ್….; ಇದು ಕುದುರೀ ಇರೂಽ ದಽ ಹದಿನಂಟು ವರ್ಸದ ಹುಡಿಗಿ ಇತ್ತಂದರ ನಿಮಗ ಪಾಸ್‌ ಬೀಳುತ್ತಿತ್ತು…. ಪಾಪ, ಕುದರಿ ಮಾತ್ರ ನಾಪಾಸ್‌ ಯಾಕ?…. ನೋಡ್ರಿ ಸೆಟ್ಟರಽ ನಾ ಕರೇ ಹೇಳಿದರೂ ಕೇಳತೀರಿ ಸುಳ್ಳ ಹೇಳಿದರೂ ಕೇಳತೀರಿ…. ಹಿಂಗಽ ಅಂದು ಬಿಟ್ಟೆ. ನನ್ನ ಮಾತಿಗೆ ಪೊಜದಾರ್‌ಸಾಬ ನಗಲಾಕ ಹತ್ತಿದ… ಟಾಂಗಾ ಫಾಸ್‌ ಅಂದ…! ಹಿಂಗ್‌ ಐತಿ ಸೆಟ್ಟರ ಕುದರೀ ಮೋಜು! ಸುಮ್ಮನಽ ಇಲ್ಲ ಈ ಹುಡಿಗಿ….! ಇಬ್ಬರ ಫಾಸ್‌ ಐತಿ ನೋಡ್ರಿ ಈ ಟಾಂಗಾಕ….; ಅಪ್ಪಿ ತಪ್ಪಿ ಮೂರ ಮಂದಿ ಕುಂತರೂ ಪೋಲಿಸಗ ತಿಳೀಲಾಕಿಲ್ಲ; ಇದಕ್ಕೆ ತಿಳಿದು ಬಿಡತೈತಿ….! ಮೂರು ಮಂದಿ ಕುಂತರ ಮುಂದಕ್ಕ ಹೆಜ್ಜೀನಽ ಇಡೂದಿಲ್ಲ…! ಕುದರೀ ಶಾಣೇತನದಿಂದನಽ ನನ್ನ ಮ್ಯಾಲೆ ಇನ್ನೂ ಯಾವ ಪೋಲಿಸನೂ ಒಮ್ಯೂ ಕಟ್ಲೇನಽ ಹಾಕಿಲ್ಲ…! ಇಂಥಾದ ಐತಿ ನನ್ನ ಮಗಳು ಇದು!

“ನೋಡ್ರಿ ಟೇಸನ್‌ ಬಂತು ನೋಡ್ರಿ…! ಎಲೀ ಇವನ….! ಗಾಡೀ ಹೊಂಟೈತ್ಯಲಾ! ಅದಽ ಅಂತೀನಿ. ಈ ಗಾಡಿ ಹೋದರ ಹುಬ್ಬಳ್ಳಿಗೆ ಹೋಗಲಾಕ- ಇನ್ನೊಂದ್‌ ಅರ್ಧಾತಾಸಿನೊಳಗಽ ಇನ್ನೊಂದು ಗಾಡೀ ಐತೀ ಅಂತ ಗೊತ್ತು ನನ್ನ ಕುದರಿಗೆ….! ಸೆಟ್ಟರಽ ಸಾಮಾನು ಇಳಿಸಿಕೂಂಡರ್‍ಯಾ? (ಬಾಡಿಗೆ ತಕ್ಕೂಂಡ ಮೇಲೆ) ಸಲಾಂ ಸಾಬ್‌ ಸಲಾಂ ಸಾಬ್‌, ಚಲ್‌ ಬೇಟಿ ಚಲ್!”

(ಗಾಡಿ ತಪ್ಪಿದುದರಿಂದ ಸೆಟ್ಟರಿಗೆ ಸಾವಕಾಶವಾಗಿ ವಿಚಾರ ಮಾಡಲು ಅವಕಾಶ ದೊರೆಯಿತು. ಇಂಥಾ ಬುದ್ಧಿವಂತ ಕುದುರಿಯನ್ನು ಸಾಕಿದ್ದ ಟಾಂಗಾದವನಿಗೆ ಸೆಟ್ಟರು ಅನೇಕಾನೇಕ ಧನ್ಯವಾದಗಳನ್ನೂ ಕೊಟ್ಟರು. ಕಲಿಯುಗದಲ್ಲಿ ಯಾರಾದರೂ ಅಶ್ವಮೇಧ ಮಾಡಿದರೆ, ಇದೇ ಕುದುರೆಯನ್ನು ಅವರು ಒಯ್ದರೆ ಒಳ್ಳೆಯದೆಂದು ಮನಸ್ಸಿನಲ್ಲಿಯೇ ಅಂದು ಕೊಂಡರು)
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...