Home / ಲೇಖನ / ಇತರೆ / ಅರ್ಥ

ಅರ್ಥ

ಯಸ್ಯಾರ್ಧಾಸ್ಸ ಮಹಾಭಾಗೋ ಯಸ್ಯಾರ್ಥಾ ಮಹಾಗುಣಾಃ |
ಹರ್ಷಃ ಕಾಮಶ್ಚ ದರ್ಪಶ್ಚ ಧರ್‍ಮಃ ಕ್ರೊಧಶ್ಚಮೋ ದಮಃ ||
ಅರ್ಧಾದೇತಾನಿ ಸರ್ವಾಣಿ ಪ್ರವರ್ತಂತೇ ನರಾಧಿಪ ||

ಧರ್ಮ, ಅರ್ಥ, ಕಾಮ, ಮೋಕ್ಷ ಇವುಗಳು ಪುರುಷಾರ್ಥಗಳೆಂದು ಗಣಿಸಲ್ಪಟ್ಟಿರುವುವು. ಇವುಗಳೆಲ್ಲಲಾ ಅರ್ಥವು ಇಹಪರಸೌಖ್ಯಗಳಿಗೆ ಅತ್ಯಂತ ಸಾಧಕವಾದದ್ದು. ಧರ್ಮದಿಂದ ಯಾರು ಅರ್ಥವನ್ನು ಸಂಪಾದಿಸುವರೋ, ಹಾಗೆ ಸಂಪಾದಿಸಿದ ಅರ್ಥವನ್ನು ಯಾರು ಸರಿಯಾಗಿ ರಕ್ಷಿಸಿಕೊಳ್ಳುವರೋ, ಹಾಗೆ ರಕ್ಷಿಸಲ್ಪಟ್ಟ ಅರ್ಥವನ್ನು ಯಾರು ಧರ್ಮದಿಂದಲೂ, ವಿತರಣೆಯಿಂದಲೂ, ಮಿತವ್ಯಯಾಸಕ್ತಿಯಿಂದಲೂ ವ್ಯಯಮಾಡುವರೋ ಅವರು ಈ ಲೋಕದಲ್ಲಿ ಸುಖವಾಗಿರುವುದಲ್ಲದೆ, ಲೋಕಾಂತರದ ಸುಖವನ್ನು ಅಪ್ರಯತ್ನಪೂರ್ವಕವಾಗಿ ಹೊಂದುವರು. ಆದುದರಿಂದ ಧನವನ್ನು ಹೇಗೆ ಧರ್ಮದಿಂದ ಅರ್ಜಿಸಬೇಕೋ ಅದನ್ನು ತಿಳಿದುಕೊಳ್ಳುವುದು ಸರ್ವರಿಗೂ ಮುಖ್ಯ ಕರ್ತವ್ಯವು. ಧನವಂತನು ಕುಲೀನನೆಂಬುದಾಗಿಯೂ, ಚತುರನೆಂಬುದಾಗಿಯೂ, ಸಕಲ ಗುಣ ಸಂಪನ್ನನೆಂಬುದಾಗಿಯೂ, ವಿದ್ಯಾವಂತನೆಂಬುದಾಗಿಯೂ ಭಾವಿಸಲ್ಪಡುವನು. ದ್ರವ್ಯವಂತನನ್ನು ಸರ್ವರೂ ಆಶ್ರಯಿಸುವರು. ಧನಹೀನನಾದವನು ಸತ್ಕುಲಪ್ರಸೂತನಾಗಿದಾಗ್ಯೂ, ವಿದ್ಯಾವಂತನಾದಾಗ್ಯೂ, ಸದ್ಗುಣವುಳ್ಳವನಾದಾಗ್ಯೂ ಪೂಜ್ಯನಾಗುವುದು ಕಷ್ಟ. ತಂದೆತಾಯಿಗಳು, ಒದಹುಟ್ಟಿದವರು, ಹೆಂಡತಿ, ಮಕ್ಕಳು, ಬಂಧುಗಳು, ಸ್ನೇಹಿತರು ಇವರಲ್ಲಿ ಯಾರೂ ಧನಹೀನನನ್ನು ಲಕ್ಷ್ಯಮಾಡುವುದಿಲ್ಲ. ಅನ್ನ ವಸ್ತ್ರಗಳನ್ನು ಸಂಪಾದಿಸಿಕೊಂಡು ಪರಾಧೀನರಾಗದೆ ಕೂಡಿದಮಟ್ಟಿಗೆ ಸ್ವತಂತ್ರವಾಗಿ ಬದುಕುವ ಪ್ರಯತ್ನವನ್ನು ಮಾಡುವುದು ಸರ್‍ವರಿಗೂ ಮುಖ್ಯ ಕರ್ತವ್ಯವು. ಆದುದರಿಂದ ಧನಾರ್ಜನೆಯ ಉಪಾಯಗಳನ್ನು ತಿಳಿದುಕೊಂಡು ಅವುಗಳನ್ನು ಆಚರಣೆಗೆ ತಂದುಕೊಳ್ಳುವದು ಸರ್ವರಿಗೂ ಮುಖ್ಯ ಕರ್ತವ್ಯವು, ನಿರ್ಧನನಾದವನ ಮನೋರಥಗಳೆಲ್ಲವೂ ಬೇಸಿಗೆಕಾಲದ ತೊರೆಗಳಂತೆ ಶುಷ್ಕವಾಗುವುವು. ಸಮಸ್ತ ದುಃಖಗಳಿಗಿಂತಲೂ ದಾರಿದ್ರ್‍ಯವು ಅತ್ಯಂತ ದುಸ್ಸಹವಾದದ್ದು. ಆದುದರಿಂದಲೇ ಕುಂತಿಯು ತನ್ನ ಸೊಸೆಯಾದ ಸುಭದ್ರೆಗೆ ಆಶೀರ್ವಾದ ಮಾಡಿದಾಗ ಭಾಗ್ಯವಂತನನ್ನು ಹೆರು ಎಂದು ಹರಿಸಿದಳು. ಶೂರರಾಗಿಯೂ ಪಂಡಿತರಾಗಿಯೂ ಇದ್ದ ಮಕ್ಕಳನ್ನು ಪಡೆದಾಗ್ಯೂ ತನಗೂ ತನ್ನ ಮಕ್ಕಳಿಗೂ ವನವಾಸಾದಿ ಕಷ್ಟಗಳು ಪ್ರಾಸವಾದದ್ದನ್ನು ಸ್ಮರಿಸಿಕೊಂಡು ಕುಂತೀದೇವಿಯು ಈ ರೀತಿಯಲ್ಲಿ ಹರಸಿರಬಹುದು. ದ್ರವ್ಯವು ಸಂತೊಷಕ್ಕೂ, ಇಷ್ಟಾರ್ಥ ಪೂರ್ತಿಗೂ, ದರ್ಪಕ್ಕೂ, ಧರ್ಮಕ್ಕೂ, ಇಹಪರಸಾಧನೆಗಳಿಗೂ ಅತ್ಯಂತ ಸಾಧಕವಾಗುವುದು. ಈ ವಿಷಯಗಳನ್ನು ಪರ್ಯಾಲೋಚಿಸಿ ಎಲ್ಲಾ ವಿದ್ಯಾರ್ಥಿಗಳೂ ಧರ್ಮದಿಂದ ಧನವನ್ನು ಅರ್ಜಿಸುವುದನ್ನೂ ಆರ್ಜಿಸಿದ ದ್ರವ್ಯವನ್ನು ವ್ಯರ್ಥವಾಗಿ ಕಳಿಯದೆ ಇರುವುದನ್ನೂ ಅತ್ಯಾವಶ್ಯಕವಾದ ವ್ಯಯಗಳಿಗೆ ವಿನಿಯೋಗಿಸುವುದನ್ನೂ ತಿಳಿದುಕೊಳ್ಳುವುದು ಆವಶ್ಯಕ. ಈ ವಿಷಯಕ್ಕೆ ವಿದ್ಯಾರ್ಥಿಗಳ ಗಮನವು ಹೇಗೋ ಹಾಗೆ ಇತರರ ಗಮನವೂ ಕೊಡಲ್ಪಡುವುದೆಂದು ನಂಬಿದ್ದೇವೆ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...