Home / ಕಥೆ / ನೀಳ್ಗತೆ / ಹಿಂದೂಮುಸಲ್ಮಾನರ ಐಕ್ಯ – ೪

ಹಿಂದೂಮುಸಲ್ಮಾನರ ಐಕ್ಯ – ೪

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿತವಾಗಲು, ಸಾಶನಯನದಿಂದ ಅವರೀರ್ವವರ ಕಡೆಗೆ ನೋಡಹತ್ತಿದನು.

ಸಹೃದಯನಾದ ಗುಲಾಮ ಆಲಿಗೆ ಭ್ರಾತೃಸಮಾನನಾದ ಶಿವದಾಸನ ಆಂತರ್ಭಾವ ತಿಳಿದು ಬಂದಿತು. ಆಗ ಅವನು :- “ಬ್ರಾಹ್ಮಣಶ್ರೇಷ್ಠಾ, ಮಾಯೆಯ ಮಾಯೆಯನ್ನು ಪರಿತ್ಯಜಿಸಿ, ಇಷ್ಟದೇವತೆಯನ್ನು ಸ್ಮರಿಸುವವನಾಗು. ಮಾಯೆಯು ಈಗ ಮನುಷ್ಯಳಾಗಿ ಉಳಿದಿರುವದಿಲ್ಲ. ಅವಳು ನನ್ನ ಪರಮ ದೇವತೆಯಾಗಿರುತ್ತಾಳೆ. ನಾನು ಅವಳನ್ನು ರಕ್ಷಣೆಮಾಡುವೆನೆನ್ನುವದಕ್ಕಿಂತ, ಅವಳೇ ನನ್ನಂಥ ಸಾವಿರಾರು ಗುಲಾಮರನ್ನು ರಕ್ಷಿಸಲು ಸಮರ್ಥಳಾಗಿರುತ್ತಾಳೆ.”

ಮುಸಲ್ಮಾನನ ಈ ವಚನಗಳನ್ನು ಕೇಳಿ, ಶಿವದಾಸನ ಅಂತರಂಗ ದೊಳಗಿನ ಮಾಯೆಯ ವಿಷಯದ ವಾಯುಯು ಕಡಿಯಲು, ಅವನ ಕಣ್ಣೊಳಗಿಂದ ಮಾಯಾಮುಕ್ತಿ ಪ್ರದವಾದ ಆನಂದಬಾಷ್ಪಗಳು ಸುರಿದವು. ಪರ ಕ್ಷಣದಲ್ಲಿಯೇ ಶಿವದಾಸನ ಇಹ ಪರ್ಯವಸಾನವಾಯಿತು. ಶಿವದಾಸನು ಉಲ್ಲಸಿತ ಮೊಗದಿಂದ ಪ್ರಾವಣ ಮಾಡುವಾಗ ಗುಲಾಮ ಆಲಿಯು ಗದ್ದದ ಕಂಠದಿಂದ:- “ಬಾಹ್ಮಣಶ್ರೇಷ್ಠರೇ, ನಡೆಯಿರಿ – ನಡೆಯುರಿನ್ನು ಸ್ವರ್ಗಕ್ಕೆ, ಪರಕ್ಷಣದಲ್ಲಿ ಸ್ವರ್ಗಸುಖಗಳಲ್ಲಿ ನಿರತರಾಗುವ ನೀವು, ನಿಮ್ಮೀ ಗುಲಾಮನನ್ನು ಶೀಘ್ರವಾಗಿ ನಿಮ್ಮೆಡೆಗೆ ಬರಮಾಡಿಕೊಳ್ಳಲಿಕ್ಕೆ ಮರಯಬೇಡಿರಿ” ಎಂದು ಪ್ರಾರ್ಥಿಸಿದನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...