Home / ಕಥೆ / ನೀಳ್ಗತೆ / ಹಿಂದೂಮುಸಲ್ಮಾನರ ಐಕ್ಯ – ೪

ಹಿಂದೂಮುಸಲ್ಮಾನರ ಐಕ್ಯ – ೪

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿತವಾಗಲು, ಸಾಶನಯನದಿಂದ ಅವರೀರ್ವವರ ಕಡೆಗೆ ನೋಡಹತ್ತಿದನು.

ಸಹೃದಯನಾದ ಗುಲಾಮ ಆಲಿಗೆ ಭ್ರಾತೃಸಮಾನನಾದ ಶಿವದಾಸನ ಆಂತರ್ಭಾವ ತಿಳಿದು ಬಂದಿತು. ಆಗ ಅವನು :- “ಬ್ರಾಹ್ಮಣಶ್ರೇಷ್ಠಾ, ಮಾಯೆಯ ಮಾಯೆಯನ್ನು ಪರಿತ್ಯಜಿಸಿ, ಇಷ್ಟದೇವತೆಯನ್ನು ಸ್ಮರಿಸುವವನಾಗು. ಮಾಯೆಯು ಈಗ ಮನುಷ್ಯಳಾಗಿ ಉಳಿದಿರುವದಿಲ್ಲ. ಅವಳು ನನ್ನ ಪರಮ ದೇವತೆಯಾಗಿರುತ್ತಾಳೆ. ನಾನು ಅವಳನ್ನು ರಕ್ಷಣೆಮಾಡುವೆನೆನ್ನುವದಕ್ಕಿಂತ, ಅವಳೇ ನನ್ನಂಥ ಸಾವಿರಾರು ಗುಲಾಮರನ್ನು ರಕ್ಷಿಸಲು ಸಮರ್ಥಳಾಗಿರುತ್ತಾಳೆ.”

ಮುಸಲ್ಮಾನನ ಈ ವಚನಗಳನ್ನು ಕೇಳಿ, ಶಿವದಾಸನ ಅಂತರಂಗ ದೊಳಗಿನ ಮಾಯೆಯ ವಿಷಯದ ವಾಯುಯು ಕಡಿಯಲು, ಅವನ ಕಣ್ಣೊಳಗಿಂದ ಮಾಯಾಮುಕ್ತಿ ಪ್ರದವಾದ ಆನಂದಬಾಷ್ಪಗಳು ಸುರಿದವು. ಪರ ಕ್ಷಣದಲ್ಲಿಯೇ ಶಿವದಾಸನ ಇಹ ಪರ್ಯವಸಾನವಾಯಿತು. ಶಿವದಾಸನು ಉಲ್ಲಸಿತ ಮೊಗದಿಂದ ಪ್ರಾವಣ ಮಾಡುವಾಗ ಗುಲಾಮ ಆಲಿಯು ಗದ್ದದ ಕಂಠದಿಂದ:- “ಬಾಹ್ಮಣಶ್ರೇಷ್ಠರೇ, ನಡೆಯಿರಿ – ನಡೆಯುರಿನ್ನು ಸ್ವರ್ಗಕ್ಕೆ, ಪರಕ್ಷಣದಲ್ಲಿ ಸ್ವರ್ಗಸುಖಗಳಲ್ಲಿ ನಿರತರಾಗುವ ನೀವು, ನಿಮ್ಮೀ ಗುಲಾಮನನ್ನು ಶೀಘ್ರವಾಗಿ ನಿಮ್ಮೆಡೆಗೆ ಬರಮಾಡಿಕೊಳ್ಳಲಿಕ್ಕೆ ಮರಯಬೇಡಿರಿ” ಎಂದು ಪ್ರಾರ್ಥಿಸಿದನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...