Home / ಕಥೆ / ಕಾದಂಬರಿ / ವಾಗೇವಿ – ೧

ವಾಗೇವಿ – ೧

“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್‌ ಅಜನರಾಣಿಯೇ ಸರಿ.”

“ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ಅಭಿಪ್ರಾಯ.”

“ಪೂರ್ವಾಶ್ರಮದಲ್ಲಿ ನಮ್ಮ ಆಣ್ಣಗೆ ಇವಳು ನಾದಿನಿ. ನಾವು ಸನ್ಯಾಸ ಪಡಕೊಂಡ ತರುವಾಯ ಅವಳನ್ನು ಇದು ಮೊದಲು ನೋಡಲಿಲ್ಲವು. ಇವಳ ರೂಪಲಾವಣ್ಯವನ್ನು ಈಗ ನೋಡಿದರೆ, ಷಡ್ವೈರಿಗಳನ್ನು ನಿಗ್ರಹಮಾಡಿದ ಯತಿಯಾದರೂ ಸೋಥೋಗನೇ?”

“ಪರಾಕೆ! ಸೃಷ್ಟಿಸ್ಥಿಲಯಕ್ಕೆ ಕಾರಣಭೂತರಾದ ಅಜ ಹರಿ ರುದ್ರ– ಇವರೇ ಒಬೊಬ್ಬರನ್ನು ಕಟ್ಟಿಕೊಂಡ ಮೇಲೆ, ಮಾನನ ಜನ್ಮದಲ್ಲಿ ಹುಟ್ಟಿ ದವನ ಪಾಡೇನು?”

ಈ ಸಂಭಾಷಣೆಯು ಕುಮುದಪುರದಲ್ಲಿ ಕಾಳಿಕಾ ನದಿಯ ತೀರದಲ್ಲಿ ಸ್ವಾನವನ್ನು ಗೈದು, ಶುಚಿರ್ಭೂತರಾಗಿರುತ್ತಿದ್ದ ಚಂಚಲನೇತ್ರ ಶ್ರೀಪಾದಂ ಗಳಿಗೂ ಅವರ ಅಚ್ಚುಮೆಚ್ಚಿನ ಪಾರುಪತ್ಯಗಾರ ವೆಂಕಟಪತಿಯಾಚಾರ್ಯಗೂ ನಡೆಯುತ್ತಲಿತ್ತು. ಪರಿಚಾರಕನಾದ ಹಯಗ್ರೀವಮಾಣಿಯು ಒಂದು ಶಬ್ದ ವಾದರೂ ಕಿವಿಗೆ ಕೇಳದವನಂತೆ ಅತ್ತಿತ್ತ ನೋಡುತ್ತಾ ನಿಂತುಕೊಂಡಿದ್ದನು. ಅವನನ್ನು ನೋಡಿ ವೆಂಕಟಪತಿಯು ಶ್ರೀಪಾದಂಗಳೊಡನೆ, “ಪರಾಕೆ! ಹುಟ್ಟು ಕಿವುಡನಾದ ಈ ಮಾಣಿಯ ಅವಸ್ಥೆಯು ನಿಜವಾಗಿ ಕನಿಕರಪಡಲಿಕ್ಕೆ ಯೋಗ್ಯವಾದ್ದೇ. ನಾವು ಏನೇನು ಮಾತಾಡಿವೆನೆಂದು ಅವನಿಗೆ ಸ್ವಲ್ಪವಾದರೂ ಗೊತ್ತಾಯಿತೇ? ಶ್ರೀಹರಿ! ನಿನ್ನ ಮಹಿಮೆಯು ಅಪಾರವಾದದ್ದು. ಇಷ್ಟು ಒಳ್ಳೇ ಹುಡುಗನಿಗೆ ಕರ್ಣದೋಷವನ್ನು ನೀನು ಕೊಟ್ಟ ದೆಸೆಯಿಂದ ಅವನ ಜನ್ಮವೇ ವ್ಯರ್ಧವಾಯಿತು” ಎಂದನು. “ಇಂಧಾ ಕುಂದು ಈ ಯೌವನ ನಸ್ಥನಿಗೆ ಇದ್ದಿಲ್ಲವಾದರೆ ಈಗ ನಮ್ಮಿಬ್ಬರಿಗಾದ ಸಂಭಾಷಣೆಯನ್ನು ಅವನು ಊರಲ್ಲೆಲ್ಲಾ ಲವಮಾತ್ರದಲ್ಲಿ ಪ್ರಕಟಪಡಿಸಿ ನಾಚಿಗೆಗೇಡು ಮಾಡಿಬಿಡುತಿದ್ದ ನಲ್ಲವೇ? ಇವನಂತಿರುವ ಚಾಕರನು ದೇವರ ದಯದಿಂದಲೇ ನಮಗೆ ದೊರಕಿ ದನು” ಎಂದು ಚಂಚಲನೇತ್ರರು ಹೇಳಿದರು. ಆಗ ವೆಂಕಟಪತಿಯು “ಸತ್ಯ ಸತ್ಯ ತ್ರಿವಾಚಾ” ಎಂದು ಉದ್ದಂಡ ನಮಸ್ಕಾರ ಮಾಡಿದನು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...