Home / ಕವನ / ಕವಿತೆ / ಮೈಸೂರು ಮಕ್ಕಳು

ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...