Home / ಕವನ / ಕವಿತೆ / ಮೈಸೂರು ಮಕ್ಕಳು

ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...