Home / ಕವನ / ಕವಿತೆ / ಶುಕ್ರಗೀತೆ

ಶುಕ್ರಗೀತೆ

[ಮೈಸೂರು ವಿಶ್ವವಿದ್ಯಾನಿಲಯದ ಬೆಳ್ಳಿಯ ಹಬ್ಬದ ಕವಿಸಮ್ಮೇಳನದಲ್ಲಿ ಓದಿದ್ದು]

ಓಂ, ಸಹ ನಾವವತು ; ಸಹ ನೌ ಭುನಕ್ತು;
ಸಹ ವೀರ್‍ಯಂ ಕರವಾವಹೈ ;
ತೇಜಸ್ವಿನಾವಧೀತಮಸ್ತು ;
ಮಾ ವಿದ್ವಿಷಾವಹೈ.
ಓಂ ಶಾಂತಿಃ ಶಾಂತಿಃ ಶಾಂತಿಃ

ಮೊತ್ತಮೊದಲೇ, ಬೆಳಕಾಗಲೆಂದಾಗ, ಬೆಳಕಾಯ್ತು ; ಬೆಳಕು ಚೆಲುವಾಯ್ತು;
ಕಿಡಿ ಸಿಡಿದು ಮಿನುಗಿದುವು ಜ್ಯೋತಿಗಳ್‌ ; ಮೂಡಿದರು ಸೂರ್ಯ ಚಂದಿರರು
ಲೋಕಚಕ್ಷುಗಳೆನಿಸಿ, ಸತ್ಯ ಧರ್ಮಗಳಂತೆ, ಕ್ಷಮೆ ದಯೆಗಳಂತೆ.
ಹಸುರ ಸೊಬಗಂ ತೊಟ್ಟು, ಹಾಡುತ್ತ, ಬಾನ್‌ಬಯಲೊಳಾಟವಾಡುತ್ತ,
ಸೌಂದರ್‍ಯದಿಂ ತೀವಿ, ಭೂದೇವಿ ಬೆಳಗಿದಳು, ಜೀವ ಪರಮಾತ್ಮರಿಂ ತೊಳಗಿ.

ಆ ದಿವ್ಯ ದರ್ಶನಂ ಕಣ್ಮುಂದೆ ನೋಡಿದರ್
ದಿವಿಜರುಂ, ಋಷಿಗಳುಂ ; ನಲಿದು ಕುಣಿದಾಡಿದ‌ರ್‌ ;
ಪಾಟಮಂ ಪಾಡಿದರ್-
ಓಂ, ತತ್ಸವಿತುರ್ ವರೇಣಿಯಂ
ಭರ್ಗೋ ದೇವಸ್ಯ ಧೀಮಹಿ,
ಧಿಯೋ ಯೋ ನಃ ಪ್ರಚೋದಯಾತ್.
ಮತ್ತಮವರಿಂತೆಂದು ಬೇಡಿದರ್‌-
ಹಿರಣ್ಮಯೇನ ಪಾತ್ರೇಣ
ಸತ್ಯಸ್ಯಾಪಿಹಿತಂ ಮುಖಂ ;
ತತ್ ತ್ವಂ ಪೂಷನ್ ಅಪಾವೃಣು
ಸತ್ಯಧರ್ಮಾಯ ದೃಷ್ಟಯೇ.

ಇನ್ನು ಮೊಂದಂ ಬಯಸಿ ಪೂಟಮಂ ಪೂಡಿದರ್-
ಅಸತೋ ಮಾ ಸದ್ಗಮಯ,
ತಮಸೋ ಮಾ ಜ್ಯೋತಿರ್‌ಗಮಯ,
ಮೃತ್ಯೋರ್ ಮಾ ಅಮೃತಂ ಗಮಯ,

ಇಂದಿಂಗಮೆಮಗದುವೆ ದರ್ಶನಂ, ಬಯಸಿದುದೆ ಆ ಅಮೃತಪುತ್ರರ್.
ಬ್ರಹ್ಮ ಮೀ ವಿಶ್ವಂ ; ಬ್ರಹ್ಮಮುಂ ಪೂರ್‍ಣಮೆನೆ ಏನ್ ಚೆಲುವೊ ನಮ್ಮ ಬಾಳ್ ಚೆಲುವು,
ಏನ್ ನಲಿವೊ ನಮ್ಮ ನಲಿವಾತ್ಮನಾನಂದಂ!

ಆನಂದನರಿಯದರ್‌,
ಆತ್ಮವನೆ ಒಲ್ಲದರ್,
ಬಾನ ಗಡಿಯಲಿ ಗಿಡಿದ ಕತ್ತಲೆಯ ಗುಹೆಯೊಳಡಗಿರ್‍ದರಾ ಅಸುರರ್
ಕೇಳ್ದರಾ ಪಾಟಮಂ ಪಲ್ಮೊರೆದು, ಕಣ್ಣಿರಿಯೆ ಕಂಡರಾ ಬಿಡುಗಣ್ಣ ಬೆಳಕನ್,
ಪೊಳೆದು ಪೊಳೆಯಿಸುತಿರ್ಪ ಬಿಳಿಯ ಬಾನ್‌ಬೆಳಕನ್.
ಮೆಲ್ಲಮೆಲ್ಲನೆ ನುಸುಳಿ ದೇವರಾವರಣದಲಿ, ಆಳ ತೋಟದಲಿ,
ತೆಕ್ಕೆ ತೆಕ್ಕೆಯೊಳೆದ್ದು ಹೊರಬಿದ್ದು, ಕಾರಿರುಳ ಮೊತ್ತಂಗಳಾಗಿ,
ಪೊಗೆಯಾಗಿ, ನೊಣೆವ ಪಡಿನೆಳಲಾಗಿ, ನಂಜಾಗಿ, ಕಣ್ಣ ಮಂಜಾಗಿ,
ಮುತ್ತಿ ಮರುಳ್ಗೊಳಿಸಿದ‌ರ್‌ ಸಂಶಯಂಗಳನೊತ್ತಿ, ಪಾಪಮಂ ಬಿತ್ತಿ,
ಅಲ್ಲದುದನಹುದೆಂದು, ಅಹುದನಲ್ಲೆಂದು,
ಇಲ್ಲದುದನಿಹುದೆಂದು, ಇಹುದನಿಲ್ಲೆಂದು,
ನಲ್ಲದಂ ಪೊಲೆಯೆಂದು, ಪೊಲೆ ನಲ್ಲದೆಂದು,
ತಿರಿಸಿದರ್ ಮಾಯಾವಿಗಳ್ ಬಾಳ್ವ ಮಕ್ಕಳಂ ಸಾವ ಸಂಸಾರ ಸುತ್ತಿ.
ಪಲ ಪೆಸರ್, ಪುರುಳೊಂದು,
ಪಲ ತೆರನ್, ನೆರೆನೊಂದು-
ಅಹಿ, ವೃತ್ರ, ಮಾರ, ಕಲಿ, ಅಹ್ರಿಮನ್, ಸೈತಾನ್!

ಅಂದು ಮೊದಲಾದುದೇ ದೇವಾಸುರಂ!
ಎಂದು ಕೊನೆಗಾಣ್ಬುದೋ ದೇವಾಸುರಂ!
ಪಸುಳೆವೋಲ್ ನಿಲ್ವಾಳ ನಿಲವು!
ಏನ್ ಚೆಲ್ಲು ಚೆಲ್ವು!

ಓ ಪಂಪ, ನೀನ್ ತುಂಬಿ ತೊರೆದೊಱತೆ ಪರಿವುದಿನ್ನುಂ.
ಸಾವಿರಂ ಸಂದುವುದು ಪರಿವುದಿನ್ನುಂ.
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದರ್ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,
ಮರೆಯದಿರು, ಪರಸು, ಪರಸೆಮ್ಮನ್.
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ!
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ!
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...