Home / ಕವನ / ಕವಿತೆ / ಪಂಪನ ಒರತೆ

ಪಂಪನ ಒರತೆ

(ಸಾವಿರ ವರ್ಷದ ಹಬ್ಬದಲ್ಲಿ)

ಪದಿನೂರು ನೆರೆಯೆ, ಪಿರಿದೊಸಗೆ ಮೆರೆಯೆ,
ಪುಲಿಗೆರೆಯ ತಿರುಳ ಕನ್ನಡದ ಪುರುಳ
ರಸರಸದ ಬಾವಿ ಮನೆಮನೆಗೆ ತೀವಿ
ತನ್ನೆರಡು ಪಾಟ್ಟು ಮೆಸೆಯೆ, ನೆಲನೊಸೆಯೆ,
ತನ್ನ ಸೆರಪೇ ಸೆರಪು,
ತನ್ನ ತೇಜಮೆ ತೇಜಮ್
ಎನೆ ಬೆಳಪ ಪಂಪನ್
ಎಮ್ಮ ತಾಯ್ನುಡಿಗೀಗೆ ಪೊಸಪೊಸತು ಪೊಂಪನ್ !

ಓ ಪಂಪ, ಗುರುಪಂಪ, ಏನ್ ನೋನ್ತ ನೋನ್ಪಿಯೋ,
ಏನ್ ಪಾರ್‍ತ ಪಾರ್‍ಪೋ,
ಕಡೆದಿಟ್ಟೆ ಕಬ್ಬದೊಳ್ ಸಂಸಾರಸಾರಮನ್,
ಮಾನಮನ್, ದಾನಮನ್, ಧೀರ ಗಾಂಭೀರ್‍ಯಮನ್,
ಧರ್‍ಮಮನ್, ಕರ್‍ಮಮನ್, ಶಿವಪದದ ಮರ್‍ಮಮನ್,
ಸರ್‍ವಸ್ವಮನ್ !
ನಿನ್ನು ನಿರ್‌ ತುಂಬಿ,
ನಂಬುವುದೆ ನಂಬಿ,

ರನ್ನನುಂ, ಚಾವುಂಡರಾಯನುಂ ಕಂಡರ್
ಬೆಳ್ಗೊಳದ ಕಗ್ಗಲ್ಲ ಕೋಡಿನೊಳ್ ದೇವರಾ ಬಿಂಬಮನ್,
ಕಂಡು ಕಡೆದಿಟ್ಟರ್
ಪಾರುವಾ ಪಾರ್‍ಪೊಂದನಿಳೆಗೆ ತಡೆದಿಟ್ಟರ್-
ಕಲೆಯ ಸೌಂದರ್‍ಯಂ, ಜೀವದೌನ್ನತ್ಯಂ,
ತಪದೊಂದು ಭಾಗ್ಯಂ, ಕ್ರಾಂತಿಯೊಳ್‌ ಶಾಂತಿ,
ಪಸುಳೆವೋಲ್ ನಿಲ್ವಾಳ ನಿಲವು !
ಏನ್ ಚೆಲ್ವು ಚೆಲ್ವು !

ಓ ಪಂಪ, ನೀನ್ ತುಂಬಿ ತೊರೆದೋರೆತೆ ಪರಿವುದಿನ್ನು೦.
ಸಾವಿರಂ ಸಂದುಮದು ಪರಿವುದಿನ್ನುಂ
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದ‌ರ್‌ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,

ಮರೆಯದಿರು, ಪರಸು, ಪರಸೆಮ್ಮನ್,
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ !
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ !
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...