Home / ಕವನ / ಕವಿತೆ / ಧರ್ಮಯುದ್ದ

ಧರ್ಮಯುದ್ದ

(ಮಯಿ ಸಂನ್ಯಸ್ಯ ಯುದ್ಧ್ಯಸ್ವ)

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಗಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು.

ಹಿಂದೆ ಅಸುರರು ಕೊಬ್ಬಿ, ಸುರನರ
ರಂದಬಾಳನು ಮೆಟ್ಟಿ, ಹಿಂಸಾ
ನಂದ ಯೋಗಿಗಳಾಗಿ ಭೂಮಿಗೆ ಭಾರವೆನಿಸಿರಲು,
ತಂದೆ, ನೀ ಮಾಧವನುಮಾಧವ
ನೆಂದು ಪರಿಪರಿ ಪೊಗಳೆ, ಕರಗಿದೆ,
ನೊಂದೆ, ಬಿಡಿಸಿದೆ ಲೋಕಕಂಟಕರಿಂದ ಭಕ್ತರನು.

ಯುದ್ಧವೆಂಬ ಪಿಶಾಚ ಯಜ್ಞಕೆ
ಬದ್ಧರಹ ರಾಕ್ಷಸರ ಸಾಹಸ
ಬುದ್ದಿ ಕೌಶಲವೇಕೆ? ಐಸಿರಿಯೇಕೆ? ಬಿಸುಡು, ಸುಡು!
ಯುದ್ಧವೇ ತಂದೊಡ್ಡೆ, ಯುದ್ಧವ
ಯುದ್ಧದಿಂದಲೆ ಯಜ್ಞಮಾಡುವ
ಸಿದ್ದಿಯನು ನೀ, ದೇವ, ಬೆಸಸಿದೆ ಜಗವನುದ್ಧರಿಸೆ.

ಬೇಡುವೆವು, ಬಾ, ಸುಜನಪಾಲಕ.
ಹೂಡು ಧರ್‍ಮವ, ಧರ್‍ಮರಕ್ಷಕ,
ನಾಡ ಕಾವಲ ದಳಕೆ ಕೂಡಲಿ ನಾಡ ಬಲವೆಲ್ಲಾ.
ಓಡಿಹೋಗಲಿ ಭಯದ ನುಡಿಗಳು,
ಮೂಡಿ ತೂಗಲಿ ನಗುತ ಬೆಳೆಗಳು,
ನೀಡು ದಯವನು ದಣಿಗೆ, ನೆಮ್ಮದಿ ಬದುಕ ಬಡವನಿಗೆ.

ಕೆಣಕಿದರೆ ಬಿಡದೆತ್ತಿಕೊಂಡೆವು-
ಮಣಿವೆವೇ ನಾವಿನ್ನು ? ಕಾಳಗ
ದಣಿಗೆ ಮುಡಿಪಾಗಿಟ್ಟು ತನುಮನಧನವ ತೇಯುವೆವು!
ಋಣವಿದಲ್ಲವೆ ಭರತಮಾತೆಯ?
ಋಣವಿದಲ್ಲವೆ ದೇವಪಿತೃ‌ಋಷಿ
ಗಣದ ? ಮಡಿದಾ ಸತ್ಯಧರ್ಮ ಸ್ವತಂತ್ರ ಸಾಧಕರ ?

ಗೆದ್ದು ಬಿಟ್ಟೆವು! ಹುಬ್ಬ ಹಾರಿಸಿ-
ಮದ್ದು ಗುಂಡನು ಸುರಿಸಿ, ಹೊಸ ಹುಸಿ
ಸುದ್ದಿಗಳ ತೂರಾಡಿ, ನಂಬಿಸಿ, ಕೆಂಡಮಳೆಗರೆದು,
ಬಿದ್ದು ಹೆಣ್ಗಳ ಮೇಲೆ, ಹಸುಳೆಯ
ಗುದ್ದಿ, ದಾಸ್ಯವ ಹೊರಿಸಿ-ನಲಿವಿರ
ಗೆದ್ದು ಬಿಟ್ಟೆವು! ಎನುತ?-ಗೆಲುವಿರ ನೀವು ದೇವರನು!

ಗೆಲವು ನಮ್ಮದು, ಮಾಯಕಾರರೆ!
ಗೆಲವು ನಮ್ಮದು, ದ್ರೋಹಿಗಳೆ! ಕಡೆ
ಗೆಲವು ನಮ್ಮದು, ನಮ್ಮ ದಿವ್ಯ ಜ್ಯೋತಿ ನಮಗಿಹನು;
ಗೆಲವು ಶ್ರೀ ಜಯಚಾಮರಾಜಗೆ!
ಗೆಲವು ಬಿಡುತೆಗೆ, ಸಾಧು ಜನತೆಗೆ,
ಗೆಲವು ಶಾಂತಿಯ ಸರ್ವಸಮತೆಯ ಸುಖದ ಜೀವನಕೆ!

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಒಲವೆ, ಮುಕ್ತರ ನಲಿವೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಕಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯನ್ನು ಮುರಿ, ಗೆಲಿಸು ಶಾಂತಿಯನು.

ಓಂ ಶಾಂತಿಶ್ಶಾಂತಿ ಶಾಂತಿಃ
*****
೧೯೪೩

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...