Home / ಲೇಖನ / ಇತಿಹಾಸ / ಪಾಳಯಗಾರರು

ಪಾಳಯಗಾರರು

ಪಾಳೇಗಾರ

೧.೧ ೧ನೇ ಉಪನ್ಯಾಸ

ಮೈಸೂರು ಡಿಸ್ಟ್ರಿಕ್ಟಿನಲ್ಲಿ ತಲಕಾಡೆಂಬ ಒಂದು ಪುಣ್ಯಸ್ಥಳವಿದೆ. ಅದು ಕಾವೇರಿತೀರವಾಗಿದೆ. ತಿರಮಕೂಡಲಲ್ಲಿ ಕಪಿಲಾ ಕಾವೇರಿ ಸಂಗಮವಾಗಿ ಅಖಂಡ ಕಾವೇರಿಯು ತಲಕಾಡಿಗೆ ಹರಿದುಹೋಗುವುದು. ಈ ನದೀತೀರದಲ್ಲಿ ನೀರಿನ ಅಲೆಯಿಂದ ಮರಳು ಬಂದುಬಿದ್ದು ಅದು ಗಾಳಿಯಿಂದ ತೂರಿಕೊಂಡುಬಂದು ಹಲವು ಮೈಲಿಗಳವರೆಗೂ ಮರಳೇ ಮುಚ್ಚಿಕೊಂಡುಹೋಗಿದೆ. ಒಂದೊಂದು ಕಡೆ ಆ ಮರಳು ದೊಡ್ಡ ಬೆಟ್ಟದ ಹಾಗೆ ರಾಸಿಯಾಗಿ ಅಲ್ಲಲ್ಲಿ ಬಿದ್ದಿದೆ. ಇದೆಲ್ಲಾ ಗಜಾರಣ್ಯಕ್ಷೇತ್ರವೆಂದು ಹೆಸರುಗೊಂಡಿರುವುದಾಗಿ ಸ್ಥಳ ಪುರಾಣವಿದೆ. ಈ ಪ್ರದೇಶ ದಲ್ಲಿ ಅನೇಕ ದೇವಸ್ಥಾನಗಳಿದ್ದವಂತೆ. ಅದೆಲ್ಲಾ ಮರಳಿನಲ್ಲಿ ಮುಚ್ಚಿ ಹೋಗಿರುವುದಾಗಿ ತಿಳಿಯಬರುವುದು. ಕೆಲವು ಮಾಸ ತಿಥಿ ವಾರ ನಕ್ಷತ್ರ ಮೊದಲಾದ ಸಂಯೋಗ ಸಂಭವಿಸಿದಾಗ ಅಲ್ಲಿರುವ ಪ್ರಸಿದ್ದ ವಾದ ವೈದ್ಧೇಶ್ವರ, ಮರಳೇಶ್ವರ, ಪಾತಾಳೇಶ್ವರ, ಗೋಕರ್ಣೇಶ್ವರ, ಮಲ್ಲಿಕಾರ್ಜುನೇಶ್ವರ ಎಂಬ ಐದು ಲಿಂಗಗಳನ್ನು ದರ್ಶನಮಾಡಿದರೆ ಬಹಳ ಪುಣ್ಯ ಉಂಟೆಂದು ಹೇಳುತ್ತಾರೆ. ಇಂಥಾ ಸಂಯೋಗವು ೩ ವರುಷಕ್ಕೆ, ೫ ವರುಷಕ್ಕೆ, ೧೨ ವರುಷಕ್ಕೆ ಒಂದೊಂದು ಸಾರಿ ಹೀಗೆ ಬಿಟ್ಟು ಬಿಟ್ಟು ಬರುವುದು. ಜನರು ಅಪಾರವಾಗಿ ಜಾತ್ರೆಗೆ ನೆರೆಯುವರು. ಮುವತ್ತು ನಲವತ್ತು ಸಾವಿರ ಜನದವರೆಗೂ ಸೇರುವುದು. ಈ ದೊಡ್ಡ ಜಾತ್ರೆಗೆ ಪಂಚಲಿಂಗದರ್ಶನವೆಂದು ಹೇಳುವರು. ಈ ಪುಣ್ಯಕ್ಷೇತ್ರದಲ್ಲಿ ಒಂದು ಐತಿಹ್ಯ ಉಂಟು. ಇಲ್ಲಿ ಅನೇಕ ಶಿವ ದೇವಾಲಯಗಳು ಇದ್ದು ಅವುಗಳೆಲ್ಲಾ ಮರಳು ಮುಚ್ಚಿ ಹೋಗಿವೆಯೆಂದು ಹೇಳುತ್ತಾರೆ. ಪೂರ್‍ವದಲ್ಲಿ ಒಬ್ಬ ವ್ಯಾಪಾರಿಯು ಒಂದು ಸೇರು ಕಡಲೆಯನ್ನು ತಂದು ಆ ಪ್ರದೇಶದಲ್ಲಿ ಶಿವದೇವಾಲಯಗಳ ದೇವರ ಮುಂದೆ ಒಂದು ದೇವರಿಗೆ ಒಂದು ಕಡಲೆಯಂತೆ ಇಟ್ಟು ನಿವೇದನ ಮಾಡುತ್ತಾ ಹೋದನಂತೆ. ಕೊನೆಯಲ್ಲಿ ಮಲ್ಲಿಕಾರ್ಜುನೇಶ್ವರನ ಗುಡಿಯ ಬಳಿಗೆ ಬರುವಾಗ ಒಂದು ಕಡಲೆ ಸಾಲದೆಹೋಯಿತಂತೆ, ಆ ದೇವರು ಮುನಿಸಿಕೊಂಡು ನದಿಯ ಆಚೆಹೋಗಿ ವಿಜಾಪುರವೆಂಬ ಊರಲ್ಲಿ ಕೂತುಕೊ೦ಡಿತಂತೆ. ಆ ಹೇರಿನಲ್ಲಿ ಎಷ್ಟು ಕಡಲೇಕಾಳು ಇತ್ತೊ ಅಷ್ಟು ಲಿಂಗಗಳು ಅಲ್ಲಿ ಪ್ರತಿಷ್ಟೆಯಾಗಿದ್ದು ಈಗ ಅದೆಲ್ಲಾ ಮರಳಲ್ಲಿ ಮುಚ್ಚಿಹೋಗಿದೆ ಎಂದು ಹೇಳುತ್ತಾರೆ.

ಈ ಸ್ಥಳೀಯವಾದ ಒಂದು ಐತಿಹ್ಯವನ್ನು ಈ ನಮ್ಮ ಭರತಖಂಡವೆಂಬ ಮಹಾರಾಜ್ಯಕ್ಕೆ ಹೋಲಿಸಿ ಚರಿತ್ರೆ ಎಂಬ ದುರ್ಬನ್ ಅಥವಾ ನಾಳಕಾಯಂತ್ರದಿಂದ ಶೋಧಿಸಿ ನೋಡಿದರೆ, ಇಲ್ಲಿ ಆಳಿದ ದೊರೆಗಳಿಗೆ ಹೆಸರಿಗೊಂದು ಕಡಲೇಕಾಳನ್ನು ನಜರಾಗಿ ಹಾಕುತ್ತಾ ಬಂದಾಗ್ಯೂ ಅಂಥಾ ಕಡಲೆ ಹೇರು ಅನೇಕವಾಗಬಹುದು. ಅಷ್ಟೊಂದು ಜನ ರಾಜರು ಇಲ್ಲಿ ಆಳಿದರು. ಈ ರಾಜರುಗಳಲ್ಲಿ ಕೆಲವರು ದೊಡ್ಡದಾಗಿ ಸೀಮೆಯನ್ನು ಕಟ್ಟಿ ಚಕ್ರಾಧೀಶ್ವರರೆನ್ನಿಸಿಕೊಂಡರು. ಇನ್ನು ಕೆಲವರು ಚಿಕ್ಕ ಚಿಕ್ಕ ರಾಜ್ಯಗಳನ್ನು ಆಳುತಾ ಸ್ವತಂತ್ರರಾಗಿದ್ದರು. ಮತ್ತು ಅವರು ಒಂದೊಂದು ವೇಳೆ ಅಲ್ಲಲ್ಲಿ ಚಕ್ರಾಧೀಶ್ವರರೆನ್ನಿಸಿಕೊಂಡಿದ್ದವರಿಗೆ ವಶವರ್ತಿಗಳಾಗಿ ಆಳಿಕೊಂಡಿದ್ದರು. ಇಂಥಾ ಚಿಕ್ಕ ರಾಜಾಧಿಪತಿಗಳಲ್ಲಿ ಹಲವರಿಗೆ ಈಚೆಗೆ ಪಾಳಯಗಾರರೆಂದು ಹೆಸರು ಬಂದಿದೆ. ಇಂಥಾ ಪಾಳಯಗಾರರ ಸಂಸ್ಥೆಯನ್ನು ಕುರಿತು ಕನ್ನಡಭಾಷೆಯಲ್ಲಿ ಉಪನ್ಯಾಸ ಮಾಡಬೇಕೆಂದು ಮೈಸೂರು ಯೂನಿವರ್ಸಿಟಿ ಎಂಬ ವಿದ್ಯಾ ನಿಲಯದವರು ನನ್ನನ್ನು ನೇಮಕಮಾಡಿದ ಕಾರಣ, ಈ ವಿಷಯದಲ್ಲಿ ನನಗೆ ತಿಳಿದ ಕೆಲವು ಸಂಗತಿಯನ್ನು ತಮಗೆ ಅರಿಕೆ ಮಾಡಿಕೊಳ್ಳುತ್ತೇನೆ, ಸಾವಾಧಾನಚಿತ್ತದಿಂದ ಲಾಲಿಸಬೇಕು.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...