Home / ಬಾಲ ಚಿಲುಮೆ / ಕವಿತೆ / ಕನಕದಾಸರು

ಕನಕದಾಸರು

ಕನ್ನಡನಾಡಿನ ಕಾಗಿನೆಲೆಯಲ್ಲಿ
ಬಾಡ ಎನ್ನುವ ಗ್ರಾಮದಲಿ
ಕುರುಬರ ವಂಶದ ಬೀರಪ್ಪನ ಸತಿ
ಬಚ್ಚಮ್ಮನ ಸಿರಿ ಗರ್ಭದಲಿ
ಬಾಲಕ ಜನಿಸಿದ ಭಾಗ್ಯದ ತೆರದಲಿ
ತಿಮ್ಮಪ್ಪ ಎಂಬುವ ಹೆಸರಿನಲಿ!

ತಿಮ್ಮಪ್ಪ ಬೆಳೆದನು ದೊಡ್ಡವನಾದನು
ಸಾಹಸ ಕಾರ್ಯಕೆ ತೊಡಗಿದನು
ಪಾಳೆಯಗಾರರ ವಂಶಕೆ ಕೀರ್ತಿಯ
ತರುವ ಕೃತಿಗೆ ಕೈಹಾಕಿದನು
ವಿಜಯನಗರ ಶ್ರೀಮಂತ ರಾಜ್ಯದಲಿ
ವೀರನಾಗಿ ಹೋರಾಡಿದನು!

ಬೀರಪ್ಪನಾಯಕ ತೀರಿದ ಬಳಿಕ
ತಿಮ್ಮಪ್ಪನಾದನು ನಾಯಕನು
ತನ್ನ ಪಾಳೆಯದ ವೀರರಿಗೆಲ್ಲ
ಪ್ರೀತಿಪಾತ್ರ ಅಧಿನಾಯಕನು
ವಿಜಯನಗರ ಸಾಮ್ರಾಜ್ಯ ಭಾಗದ
ದಂಡನಾಯಕನು ಎನಿಸಿದನು!

ಬಿಜಾಪುರದ ಬಹಮನಿ ಸುಲ್ತಾನರ
ದಾಳಿಯನ್ನು ಹಿಮ್ಮೆಟ್ಟಿಸುತ
ಹಿಂದೂ ಜನರನು ರಕ್ಷಣೆ ಮಾಡುತ
ಮುಸ್ಲಿಮರಿಗೆ ಮಣ್ಮುಕ್ಕಿಸುತ
ವಿಜಯನಗರದ ಅರಸರ ಕಣ್ಮಣಿ
ತಿಮ್ಮಪ್ಪನಾಯಕ ತಾನಾದ!

ಒಮ್ಮೆ ಪಾಳೆಯದ ಕೋಟೆ ನಿರ್ಮಿಸಲು
ಭೂಮಿಯನ್ನು ಅಗೆಯುತ್ತಿರಲು
ದೊರಕಿದ ಅಪಾರ ಕನಕಾಭರಣವ
ದುಡಿಯುವ ವರ್ಗಕೆ ಹಂಚಿರಲು
ಕರೆದರಲ್ಲಿ ತಿಮ್ಮಪ್ಪನಾಯಕನ
’ಕನಕನಾಯಕ’ ಎಂದಾಗ!

ಕನಕನಾಯಕನು ಕಾಗಿನೆಲೆಯಲ್ಲಿ
ಎಲ್ಲರ ಕಣ್ಮಣಿ ತಾನಾಗಿ
ಆರಾಧ್ಯದೈವವು ಆದಿಕೇಶವನ
ಆಲಯವೊಂದನು ನಿರ್ಮಿಸಿದ
ನಿತ್ಯಪೂಜೆ ನೈವೇದ್ಯ ಕಾರ್ಯಗಳ
ನಡೆಯುವಂತೆ ನಿರ್ದೇಶಿಸಿದ!

ಮದುವೆಯಾದ ಕೆಲಕಾಲದಲ್ಲಿಯೇ
ಮಡದಿಯು ಮಕ್ಕಳು ಮಡಿದಿರಲು
ಮಡದಿಯ ಹಿಂದೆಯೇ ಮಾತೆಯು ಮಡಿಯಲು
ಮನವು ನೊಂದಿರಲು ದುಃಖಿಸಿದ
ಬದುಕಿನಲ್ಲಿ ಬಂದೆರಗಿದ ದುಃಖವ
ಮರೆಯಲಾಗದೆ ಬಸವಳಿದ!

ಸಂಸಾರ ನೌಕೆಯು ಮುಳುಗಿದ ಬೆನ್ನಲಿ
ಬಹಮನಿ ಸುಲ್ತಾನರ ದಾಳಿ
ದಾಳಿಯ ಎದುರಿಸಿ ನಿಂತವ ಕಣದಲಿ
ಸೋತನು ವೈರಿಯ ಕೈಯಲ್ಲಿ
ಸಾಯುವ ಹಂತಕೆ ತಲುಪಿದ ನಾಯಕ
ಉರುಳಿದ ಅಲ್ಲಿಯ ನೆಲದಲ್ಲಿ!

ಎಚ್ಚರವಾಗುವ ವೇಳೆಗೆ ನಾಯಕ
ಕಾಗಿನೆಲೆಯ ದೇಗುಲದಲ್ಲಿ
ಅಚ್ಚರಿಯೆನ್ನುವ ರೀತಿಯೊಳಿದ್ದನು
ಆದಿಕೇಶವನ ಎದುರಲ್ಲಿ
ದೈವಭಕ್ತಿ ಅವನೆದೆಯಲಿ ತುಂಬಲು
ಶರಣೆಂದನು ದೇವರಿಗಲ್ಲಿ!

ಬುವಿಯ ವಸ್ತುಗಳು ಭೋಗಭಾಗ್ಯಗಳು
ಅಸ್ಥಿರವೆನ್ನುವ ಅರಿವಾಗಿ
ಭಗವಂತನ ಸಾನ್ನಿಧ್ಯವೆ ಸುಖವು
ಎಂಬುವ ಭಾವವು ಬಲವಾಗಿ
ತನ್ನದು ಎನ್ನುವ ಸಕಲ ವಸ್ತುಗಳ
ದಾನವ ಮಾಡಿದ ವೈರಾಗಿ!

ದೋತರ ಉಟ್ಟು ಕಂಬಳಿ ಹೊದ್ದು
ಸಾಮಾನ್ಯನಂತೆಯೇ ಅವನುಳಿದ
ಏಕತಾರಿ ತಂಬೂರಿಯ ಮೀಟುತ
ಆದಿಕೇಶವನ ಧ್ಯಾನಿಸುತ
ದೇವರ ಭಜಿಸುತ ಕೀರ್ತನೆ ಹಾಡುತ
ವೈರಾಗ್ಯಮೂರ್ತಿಯು ಮುನ್ನಡೆದ!

ವ್ಯಾಸರಾಯರಲಿ ದೀಕ್ಷೆಯ ಪಡೆದು
ದಾಸಕೂಟವನು ಸೇರಿರಲು
ವಾದಿರಾಜ ಪುರಂದರದಾಸರ
ಸಹವಾಸದಲ್ಲಿ ಬೆರೆತಿರಲು
ಕುಲದ ಹಮ್ಮಿನಲಿ ಮೆರೆಯುವವರನು
ಖಂಡಿಸಿ ಕೀರ್ತನೆ ರಚಿಸಿದರು!

ಕುಲ ಕುಲ ಕುಲವೆಂದು
ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ
ಬಲ್ಲಿರಾ.. ಬಲ್ಲಿರಾ?
ಕುಲದ ಬೆನ್ನಿನಲಿ ನಡೆದದ್ದಾದರೆ
ಮಲಿನವಾಗುವನು ಮಾನವನಿಳೆಯೆಲಿ
ಎಂದು ಮಾನವನ ಕಣ್ಣು ತೆರೆಯಿಸಿ
ಇಹ-ಪರ ಸುಖವನು ಹೇಳಿದರು;
ಹಾಗೆಯೇ ಬದುಕಿ ಬಾಳಿದರು!

ಏಕತಾರಿ ತಂಬೂರಿಯ ಮೀಟುತ
ನಾಡಿನ ಎಲ್ಲೆಡೆ ಸಂಚರಿಸುತ್ತ
ದೇವಭಾಷೆಯನು ದೂರಕೆ ತಳ್ಳಿ
ಆಡುಭಾಷೆಯಲಿ ಹಾಡಿದರು
ಮೋಹನ ತರಂಗಿಣಿ, ನಳಚರಿತ್ರೆ
ಕಾವ್ಯಕುಸುಮಗಳ ನೀಡಿದರು!

ರಾಮಧಾನ್ಯ, ಹರಿಭಕ್ತಿಸಾರಗಳ
ಭಕ್ತಿಯಿಂದಲಿ ರಚಿಸಿದರು
ಕನಕದಾಸರು ಎಂಬುವ ಹೆಸರಲಿ
ಜನಮಾನಸದಲಿ ನೆಲೆಸಿದರು!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...